ದೇಶ- ವಿದೇಶ

ಚುನಾವಣೆಗೂ ಮುನ್ನ ಸಂವಿಧಾನ ಎಸೆಯಲು ಬಯಸಿದ್ದ ಪ್ರಧಾನಿ ಮೋದಿ: ರಾಹುಲ್‌

ಪಟ್ನಾ: ಪ್ರಧಾನಿ ನರೇಂದ್ರ ಮೋದಿ ಅವರು ಸಂವಿಧಾನವನ್ನು ಎಸೆಯಲು ಬಯಸಿದ್ದರು. ಆದರೆ, ಕಳೆದ ಲೋಕಸಭಾ ಚುನಾವಣೆಯ ಫಲಿತಾಂಶ ಪರಿಣಾಮ ಸಂವಿಧಾನಕ್ಕೆ ತಲೆಬಾಗಿದರು ಎಂದು ವಿಪಕ್ಷ ನಾಯಕ ರಾಹುಲ್‌ ಗಾಂಧಿ ಹೇಳಿದ್ದಾರೆ.

ಬಿಹಾರದ ಪಟ್ನಾದಲ್ಲಿ ಇಂದು ನಡೆದ ಸಂವಿಧಾನ ಸುರಕ್ಷಾ ಸಮ್ಮೇಳನದಲ್ಲಿ ಮಾತನಾಡಿದ ಅವರು, ಸಂವಿಧಾನವನ್ನು ಎಸೆಯಲು ಬಯಸಿದ್ದ ಮೋದಿ ಅವರ ಉದ್ದೇಶ ನಮ್ಮ ಹೋರಾಟದಿಂದ ಸಾಧ್ಯವಾಗಲಿಲ್ಲ ಎಂದ ರಾಹುಲ್‌ ತಮ್ಮ ಭಾಷಣದುದ್ದಕ್ಕೂ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.

ಸಂವಿಧಾನ ಕೇವಲ ಪುಸ್ತಕವಲ್ಲ. ಅದು ದಲಿತರ, ಹಿಂದುಳಿದವರ, ಬಡವರ ಕಷ್ಟಗಳ ಬಗ್ಗೆ ಮಾತನಾಡುವ ಧ್ವನಿ ಎಂದು ಹೇಳಿದರು.

ದೇಶದಲ್ಲಿ ದಲಿತರು, ಒಬಿಸಿ ಹಾಗೂ ಅಲ್ಪಸಂಖ್ಯಾತರು ಶೇ.90ರಷ್ಟಿದ್ದಾರೆ. ಆದರೆ ಅವರು ಇಂದಿಗೂ ವ್ಯವಸ್ಥೆಯ ಒಳಗೆ ಬಂದಿಲ್ಲ. ಅವರು ವ್ಯವಸ್ಥೆಯಲ್ಲಿ ಭಾಗವಾಗಬೇಕು ಹೀಗಾಗಿ ನಾವೂ ಜಾತಿಗಣತಿಗೆ ಆಗ್ರಹಿಸುತ್ತಿದ್ದೇವೆ ಎಂದು ಹೇಳಿದರು.

ಸ್ವತಂತ್ರ್ಯ ಕುರಿತ ಮೋಹನ್‌ ಭಾಗವತ್‌ ಅವರ ಹೇಳಿಕೆಯು ಸಂವಿಧಾನ ವಿರೋಧಿಯಾಗಿದೆ ಎಂದು ಭಾಗವತ್‌ ವಿರುದ್ಧ ಟೀಕಾ ಪ್ರಹಾರ ನಡೆಸಿದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೈಸೂರಿನಲ್ಲಿ ಅವೈಜ್ಞಾನಿಕ ಟ್ರಾಫಿಕ್‌ ಸಿಗ್ನಲ್‌ ಆರೋಪ: ಸಚಿವ ಮಹದೇವಪ್ಪ ಪ್ರತಿಕ್ರಿಯೆ

ಮೈಸೂರು: ಅರಮನೆಗಳ ನಗರಿ ಮೈಸೂರಿನಲ್ಲಿ ಅವೈಜ್ಞಾನಿಕವಾಗಿ ಟ್ರಾಫಿಕ್‌ ಸಿಗ್ನಲ್‌ ಅಳವಡಿಸಲಾಗಿದೆ ಎಂದು ಸಾರ್ವಜನಿಕರು ಕಿಡಿಕಾರುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಮಹದೇವಪ್ಪ…

4 mins ago

ದೀದಿ ಸರ್ಕಾರದ ವಿರುದ್ಧ ಅಮಿತ್‌ ಶಾ ಚಾರ್ಜ್‌ಶೀಟ್‌ ರಿಲೀಸ್‌

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಕೇಂದ್ರ ಗೃಹ ಸಚಿವ…

26 mins ago

ಜಮ್ಮು-ಕಾಶ್ಮೀರದಲ್ಲಿ ಭೀಕರ ಹಿಮಪಾತ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಂಡರ್‌ಬಾಲ್‌ ಜಿಲ್ಲೆಯ ಝೋಜಿಲಾ ಪಾಸ್‌ ಬಳಿಯ ಝೀರೋ ಪಾಯಿಂಟ್‌ನಲ್ಲಿ ಸಂಭವಿಸಿದ ಭೀಕರ ಹಿಮಪಾತದಲ್ಲಿ ಹಲವಾರು…

38 mins ago

ಇರಾನ್‌ ಬಳಿಕ ಮತ್ತೊಂದು ದೇಶದ ಮೇಲೆ ಟ್ರಂಪ್‌ ಕಣ್ಣು

ವಾಷಿಂಗ್ಟನ್:‌ ಇರಾನ್‌ ಬಳಿಕ ಇದೀಗ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮತ್ತೊಂದು ದೇಶದ ಮೇಲೆ ಕಣ್ಣಿಟ್ಟಿದ್ದಾರೆ. ಕ್ಯೂಬಾ ದೇಸದ ಮೇಲೆ…

47 mins ago

ಆಂದೋಲನದ ವರದಿ ಬಳಿಕ ಎಚ್ಚೆತ್ತ ಜನಪ್ರತಿನಿಧಿಗಳು: ರಸ್ತೆ ಕಾಮಗಾರಿಗೆ ಶಾಸಕ ಜಿಟಿಡಿ ಗುದ್ದಲಿ ಪೂಜೆ

ಮೈಸೂರು: ಸಿಎಂ ಸಿದ್ದರಾಮಯ್ಯ ನಿವಾಸದ ಸಮೀಪವೇ ಕುಸಿದು ಬಿದ್ದ ರಸ್ತೆ ಎಂಬ ಶೀರ್ಷಿಕೆಯಡಿ ಆಂದೋಲನ ವರದಿ ಮಾಡಿದ ಬೆನ್ನಲ್ಲೇ ಎಚ್ಚೆತ್ತ…

1 hour ago

ರಸ್ತೆ ದಾಟುವಾಗ ಕಾರು ಡಿಕ್ಕಿ: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದು ಬಂದಿದ್ದ ವಿದ್ಯಾರ್ಥಿ ಸಾವು

ಹಾಸನ: ರಸ್ತೆ ದಾಟುವ ವೇಳೆ ಕಾರು ಡಿಕ್ಕಿಯಾದ ಪರಿಣಾಮ ಆಗಷ್ಟೇ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಹೊಳೆನರಸೀಪುರ ತಾಲ್ಲೂಕಿನ ಕಾಮಸಮುದ್ರದ…

1 hour ago