ಪಟ್ನಾ: ಪ್ರಧಾನಿ ನರೇಂದ್ರ ಮೋದಿ ಅವರು ಸಂವಿಧಾನವನ್ನು ಎಸೆಯಲು ಬಯಸಿದ್ದರು. ಆದರೆ, ಕಳೆದ ಲೋಕಸಭಾ ಚುನಾವಣೆಯ ಫಲಿತಾಂಶ ಪರಿಣಾಮ ಸಂವಿಧಾನಕ್ಕೆ ತಲೆಬಾಗಿದರು ಎಂದು ವಿಪಕ್ಷ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಬಿಹಾರದ ಪಟ್ನಾದಲ್ಲಿ ಇಂದು ನಡೆದ ಸಂವಿಧಾನ ಸುರಕ್ಷಾ ಸಮ್ಮೇಳನದಲ್ಲಿ ಮಾತನಾಡಿದ ಅವರು, ಸಂವಿಧಾನವನ್ನು ಎಸೆಯಲು ಬಯಸಿದ್ದ ಮೋದಿ ಅವರ ಉದ್ದೇಶ ನಮ್ಮ ಹೋರಾಟದಿಂದ ಸಾಧ್ಯವಾಗಲಿಲ್ಲ ಎಂದ ರಾಹುಲ್ ತಮ್ಮ ಭಾಷಣದುದ್ದಕ್ಕೂ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.
ಸಂವಿಧಾನ ಕೇವಲ ಪುಸ್ತಕವಲ್ಲ. ಅದು ದಲಿತರ, ಹಿಂದುಳಿದವರ, ಬಡವರ ಕಷ್ಟಗಳ ಬಗ್ಗೆ ಮಾತನಾಡುವ ಧ್ವನಿ ಎಂದು ಹೇಳಿದರು.
ದೇಶದಲ್ಲಿ ದಲಿತರು, ಒಬಿಸಿ ಹಾಗೂ ಅಲ್ಪಸಂಖ್ಯಾತರು ಶೇ.90ರಷ್ಟಿದ್ದಾರೆ. ಆದರೆ ಅವರು ಇಂದಿಗೂ ವ್ಯವಸ್ಥೆಯ ಒಳಗೆ ಬಂದಿಲ್ಲ. ಅವರು ವ್ಯವಸ್ಥೆಯಲ್ಲಿ ಭಾಗವಾಗಬೇಕು ಹೀಗಾಗಿ ನಾವೂ ಜಾತಿಗಣತಿಗೆ ಆಗ್ರಹಿಸುತ್ತಿದ್ದೇವೆ ಎಂದು ಹೇಳಿದರು.
ಸ್ವತಂತ್ರ್ಯ ಕುರಿತ ಮೋಹನ್ ಭಾಗವತ್ ಅವರ ಹೇಳಿಕೆಯು ಸಂವಿಧಾನ ವಿರೋಧಿಯಾಗಿದೆ ಎಂದು ಭಾಗವತ್ ವಿರುದ್ಧ ಟೀಕಾ ಪ್ರಹಾರ ನಡೆಸಿದರು.
ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…
ಮೈಸೂರು: ಮೂವರು ಬೇಟೆಗಾರರ ಎನ್ಕೌಂಟರ್ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್ ಬೋಸ್ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…
ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…
ಮಹಾದೇಶ್ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…
ಹೊಸದಿಲ್ಲಿ : ಭಾರತವು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ದೇಶದ ತ್ರಿವರ್ಣ ಧ್ವಜವನ್ನು ಹಾರಿಸಿದ ಪ್ರಧಾನಿ…