ಪಟ್ನಾ: ಪ್ರಧಾನಿ ನರೇಂದ್ರ ಮೋದಿ ಅವರು ಸಂವಿಧಾನವನ್ನು ಎಸೆಯಲು ಬಯಸಿದ್ದರು. ಆದರೆ, ಕಳೆದ ಲೋಕಸಭಾ ಚುನಾವಣೆಯ ಫಲಿತಾಂಶ ಪರಿಣಾಮ ಸಂವಿಧಾನಕ್ಕೆ ತಲೆಬಾಗಿದರು ಎಂದು ವಿಪಕ್ಷ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಬಿಹಾರದ ಪಟ್ನಾದಲ್ಲಿ ಇಂದು ನಡೆದ ಸಂವಿಧಾನ ಸುರಕ್ಷಾ ಸಮ್ಮೇಳನದಲ್ಲಿ ಮಾತನಾಡಿದ ಅವರು, ಸಂವಿಧಾನವನ್ನು ಎಸೆಯಲು ಬಯಸಿದ್ದ ಮೋದಿ ಅವರ ಉದ್ದೇಶ ನಮ್ಮ ಹೋರಾಟದಿಂದ ಸಾಧ್ಯವಾಗಲಿಲ್ಲ ಎಂದ ರಾಹುಲ್ ತಮ್ಮ ಭಾಷಣದುದ್ದಕ್ಕೂ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.
ಸಂವಿಧಾನ ಕೇವಲ ಪುಸ್ತಕವಲ್ಲ. ಅದು ದಲಿತರ, ಹಿಂದುಳಿದವರ, ಬಡವರ ಕಷ್ಟಗಳ ಬಗ್ಗೆ ಮಾತನಾಡುವ ಧ್ವನಿ ಎಂದು ಹೇಳಿದರು.
ದೇಶದಲ್ಲಿ ದಲಿತರು, ಒಬಿಸಿ ಹಾಗೂ ಅಲ್ಪಸಂಖ್ಯಾತರು ಶೇ.90ರಷ್ಟಿದ್ದಾರೆ. ಆದರೆ ಅವರು ಇಂದಿಗೂ ವ್ಯವಸ್ಥೆಯ ಒಳಗೆ ಬಂದಿಲ್ಲ. ಅವರು ವ್ಯವಸ್ಥೆಯಲ್ಲಿ ಭಾಗವಾಗಬೇಕು ಹೀಗಾಗಿ ನಾವೂ ಜಾತಿಗಣತಿಗೆ ಆಗ್ರಹಿಸುತ್ತಿದ್ದೇವೆ ಎಂದು ಹೇಳಿದರು.
ಸ್ವತಂತ್ರ್ಯ ಕುರಿತ ಮೋಹನ್ ಭಾಗವತ್ ಅವರ ಹೇಳಿಕೆಯು ಸಂವಿಧಾನ ವಿರೋಧಿಯಾಗಿದೆ ಎಂದು ಭಾಗವತ್ ವಿರುದ್ಧ ಟೀಕಾ ಪ್ರಹಾರ ನಡೆಸಿದರು.
ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ…
ನವೀನ್ ಕುಮಾರ್: ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…
ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…
ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್…