ದೇಶ- ವಿದೇಶ

ಮನ್‌ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ ಮಾತು: ಯೋಗ ದಿನದ ಬಗ್ಗೆ ಚರ್ಚೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ರೇಡಿಯೋ ಕಾರ್ಯಕ್ರಮ ಮನ್‌ ಕಿ ಬಾತ್‌ನ 123ನೇ ಸಂಚಿಕೆಯನ್ನು ಪ್ರಸಾರ ಮಾಡಲಾಯಿತು.

ರೇಡಿಯೋ ಕಾರ್ಯಕ್ರಮದ ಆರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅಂತರಾಷ್ಟ್ರೀಯ ಯೋಗ ದಿನದ ಬಗ್ಗೆ ಸುದೀರ್ಘ ಚರ್ಚೆ ನಡೆಸಿದರು.

ಈ ಬಗ್ಗೆ ಮಾತನಾಡಿದ ಅವರು, ಈ ಸಮಯದಲ್ಲಿ ನೀವೆಲ್ಲರೂ ಯೋಗದ ಶಕ್ತಿಯಿಂದ ಮತ್ತು ಅಂತರಾಷ್ಟ್ರೀಯ ಯೋಗ ದಿನದ ನೆನಪುಗಳಿಂದ ತುಂಬಿರಬೇಕು. ಈ ಬಾರಿಯೂ ಜೂನ್.‌21ರಂದು ದೇಶ ಹಾಗೂ ಪ್ರಪಂಚದ ಕೋಟ್ಯಾಂತರ ಜನರು ಅಂತರಾಷ್ಟ್ರೀಯ ಯೋಗ ದಿನದಲ್ಲಿ ಭಾಗಿಯಾಗಿದ್ದರು.

ಇದು 10 ವರ್ಷಗಳ ಹಿಂದೆ ಪ್ರಾರಂಭವಾಯಿತು ಎಂಬುದನ್ನು ನೀವು ನೆನಪಿನಲ್ಲಿಡಬೇಕು ಎಂದು ಹೇಳಿದ ಅವರು, ಈಗ 10 ವರ್ಷಗಳಲ್ಲಿ ಈ ಪ್ರವೃತ್ತಿ ಪ್ರತಿ ವರ್ಷ ಹೆಚ್ಚು ಹೆಚ್ಚು ಭವ್ಯವಾಗುತ್ತಿದೆ. ಇದು ಹೆಚ್ಚು ಹೆಚ್ಚಿ ಜನರು ತಮ್ಮ ದೈನಂದಿನ ಜೀವನದಲ್ಲಿ ಯೋಗವನ್ನು ಅಳವಡಿಸಿಕೊಳ್ಳುತ್ತಿದ್ದಾರೆ ಎಂಬುದರ ಸೂಚನೆಯಾಗಿದೆ ಎಂದು ಹೇಳಿದರು.

ಯೋಗ ದಿನದ ಧ್ಯೇಯವಾಕ್ಯ ಉಲ್ಲೇಖಿಸಿದ ಮೋದಿ ಅವರು, ಒಂದು ಭೂಮಿಗಾಗಿ ಯೋಗ, ಒಂದು ಆರೋಗ್ಯ ಎಂಬುದು ಬಹಳ ವಿಶೇಷವಾಗಿತ್ತು. ಇದು ಕೇವಲ ಘೋಷಣೆಯಲ್ಲ. ಇದು ವಸುಧೈವ ಕುಟುಂಬಕಂ ಎಂಬುದನ್ನು ನಮಗೆ ಅರಿತುಕೊಳ್ಳುವ ನಿರ್ದೇಶನವಾಗಿದೆ. ಈ ವರ್ಷದ ಯೋಗ ದಿನದ ಭವ್ಯತೆ ಖಂಡಿತವಾಗಿಯೂ ಹೆಚ್ಚು ಹೆಚ್ಚು ಜನರು ಯೋಗವನ್ನು ಅಳವಡಿಸಿಕೊಳ್ಳಲು ಸ್ಪೂರ್ತಿ ನೀಡುತ್ತದೆ ಎಂದು ನನಗೆ ಖಚಿತವಾಗಿದೆ ಎಂದರು.

ಇನ್ನು ತುರ್ತು ಪರಿಸ್ಥಿತಿ ಘೋಷಣೆಯಾಗಿ 50 ವರ್ಷ ಆದ ಹಿನ್ನೆಲೆಯಲ್ಲಿ ಮಾತನಾಡಿದ ಅವರು, ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಭಾರತದ ಜನರಿಗೆ ಕಿರುಕುಳ ನೀಡಲಾಯಿತು. ಆ ಸಮಯದಲ್ಲಿ ಪ್ರಜಾಪ್ರಭುತ್ವವನ್ನು ಕೊಲೆ ಮಾಡಲಾಯಿತು ಎಂದು ಬೇಸರ ವ್ಯಕ್ತಪಡಿಸಿದರು.

ಆಂದೋಲನ ಡೆಸ್ಕ್

Recent Posts

ಹಣ ದ್ವಿಗುಣಗೊಳಿಸುವುದಾಗಿ ೨೮ ಲಕ್ಷ ರೂ. ವಂಚನೆ; ದೂರು ದಾಖಲು

ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…

3 hours ago

ಅಂಬಳೆ: ಚಾಮುಂಡೇಶ್ವರಿ ದೇಗುಲದಲ್ಲಿ ಕಳ್ಳತನ

ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…

3 hours ago

ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ ಬೆನ್ನಲ್ಲೇ ಪೈಲಟ್‌ಗಳ ರಜಾ ನಿಯಮ ಸಡಿಲಿಸಿದ ಡಿಜಿಸಿಎ

ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…

4 hours ago

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ: ಸತೀಶ್‌ ಜಾರಕಿಹೊಳಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…

5 hours ago

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ಗೆ ಎಚ್‌ಡಿಕೆ ಪತ್ರ

ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…

7 hours ago

ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ: ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು

ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…

7 hours ago