ದೇಶ- ವಿದೇಶ

ಮನ್‌ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ ಮಾತು: ಯೋಗ ದಿನದ ಬಗ್ಗೆ ಚರ್ಚೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ರೇಡಿಯೋ ಕಾರ್ಯಕ್ರಮ ಮನ್‌ ಕಿ ಬಾತ್‌ನ 123ನೇ ಸಂಚಿಕೆಯನ್ನು ಪ್ರಸಾರ ಮಾಡಲಾಯಿತು.

ರೇಡಿಯೋ ಕಾರ್ಯಕ್ರಮದ ಆರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅಂತರಾಷ್ಟ್ರೀಯ ಯೋಗ ದಿನದ ಬಗ್ಗೆ ಸುದೀರ್ಘ ಚರ್ಚೆ ನಡೆಸಿದರು.

ಈ ಬಗ್ಗೆ ಮಾತನಾಡಿದ ಅವರು, ಈ ಸಮಯದಲ್ಲಿ ನೀವೆಲ್ಲರೂ ಯೋಗದ ಶಕ್ತಿಯಿಂದ ಮತ್ತು ಅಂತರಾಷ್ಟ್ರೀಯ ಯೋಗ ದಿನದ ನೆನಪುಗಳಿಂದ ತುಂಬಿರಬೇಕು. ಈ ಬಾರಿಯೂ ಜೂನ್.‌21ರಂದು ದೇಶ ಹಾಗೂ ಪ್ರಪಂಚದ ಕೋಟ್ಯಾಂತರ ಜನರು ಅಂತರಾಷ್ಟ್ರೀಯ ಯೋಗ ದಿನದಲ್ಲಿ ಭಾಗಿಯಾಗಿದ್ದರು.

ಇದು 10 ವರ್ಷಗಳ ಹಿಂದೆ ಪ್ರಾರಂಭವಾಯಿತು ಎಂಬುದನ್ನು ನೀವು ನೆನಪಿನಲ್ಲಿಡಬೇಕು ಎಂದು ಹೇಳಿದ ಅವರು, ಈಗ 10 ವರ್ಷಗಳಲ್ಲಿ ಈ ಪ್ರವೃತ್ತಿ ಪ್ರತಿ ವರ್ಷ ಹೆಚ್ಚು ಹೆಚ್ಚು ಭವ್ಯವಾಗುತ್ತಿದೆ. ಇದು ಹೆಚ್ಚು ಹೆಚ್ಚಿ ಜನರು ತಮ್ಮ ದೈನಂದಿನ ಜೀವನದಲ್ಲಿ ಯೋಗವನ್ನು ಅಳವಡಿಸಿಕೊಳ್ಳುತ್ತಿದ್ದಾರೆ ಎಂಬುದರ ಸೂಚನೆಯಾಗಿದೆ ಎಂದು ಹೇಳಿದರು.

ಯೋಗ ದಿನದ ಧ್ಯೇಯವಾಕ್ಯ ಉಲ್ಲೇಖಿಸಿದ ಮೋದಿ ಅವರು, ಒಂದು ಭೂಮಿಗಾಗಿ ಯೋಗ, ಒಂದು ಆರೋಗ್ಯ ಎಂಬುದು ಬಹಳ ವಿಶೇಷವಾಗಿತ್ತು. ಇದು ಕೇವಲ ಘೋಷಣೆಯಲ್ಲ. ಇದು ವಸುಧೈವ ಕುಟುಂಬಕಂ ಎಂಬುದನ್ನು ನಮಗೆ ಅರಿತುಕೊಳ್ಳುವ ನಿರ್ದೇಶನವಾಗಿದೆ. ಈ ವರ್ಷದ ಯೋಗ ದಿನದ ಭವ್ಯತೆ ಖಂಡಿತವಾಗಿಯೂ ಹೆಚ್ಚು ಹೆಚ್ಚು ಜನರು ಯೋಗವನ್ನು ಅಳವಡಿಸಿಕೊಳ್ಳಲು ಸ್ಪೂರ್ತಿ ನೀಡುತ್ತದೆ ಎಂದು ನನಗೆ ಖಚಿತವಾಗಿದೆ ಎಂದರು.

ಇನ್ನು ತುರ್ತು ಪರಿಸ್ಥಿತಿ ಘೋಷಣೆಯಾಗಿ 50 ವರ್ಷ ಆದ ಹಿನ್ನೆಲೆಯಲ್ಲಿ ಮಾತನಾಡಿದ ಅವರು, ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಭಾರತದ ಜನರಿಗೆ ಕಿರುಕುಳ ನೀಡಲಾಯಿತು. ಆ ಸಮಯದಲ್ಲಿ ಪ್ರಜಾಪ್ರಭುತ್ವವನ್ನು ಕೊಲೆ ಮಾಡಲಾಯಿತು ಎಂದು ಬೇಸರ ವ್ಯಕ್ತಪಡಿಸಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

6 hours ago

ಓದುಗರ ಪತ್ರ: ಬದಲಾಗುತ್ತಿದೆ ಚಾತುರ್ಮಾಸ ಪದದ ಅರ್ಥ

ಪ್ರತಿವರ್ಷ ಆಷಾಢ, ಶ್ರಾವಣ ಮಾಸದ ಸಮಯದಲ್ಲಿ ಎಲ್ಲ ಮಠಾಧೀಶರೂ ಚಾತುರ್ಮಾಸ ವ್ರತವನ್ನು ಆಚರಿಸುವುದು ವಾಡಿಕೆ. ಚಾತುರ್ಮಾಸ ಎಂದರೆ ನಾಲ್ಕು ತಿಂಗಳು.…

6 hours ago

ಓದುಗರ ಪತ್ರ: ದಸರಾ ಮಹೋತ್ಸವ ಸರಳವಾಗಿರಲಿ

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವು ನಮ್ಮ ನಾಡಿನ ಸಾಂಸ್ಕೃತಿಕ ಅನನ್ಯತೆಯನ್ನು ಎತ್ತಿ ಹಿಡಿಯುತ್ತದೆ. ಕಲೆ, ಸಾಹಿತ್ಯ, ಸಂಸ್ಕೃತಿಯ ಮೂಲಕ…

6 hours ago

ಓದುಗರ ಪತ್ರ: ಗೃಹಲಕ್ಷ್ಮಿ: ಅರ್ಹರಿಗೆ ಅನ್ಯಾಯವಾಗದಿರಲಿ

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯು ಯಶಸ್ವಿಯಾಗಿ ಮೂರು ವರ್ಷಗಳನ್ನು ಪೂರೈಸಿದೆ. ಗ್ರಾಮೀಣ ಆರ್ಥಿಕತೆಗೆ ನವಚೈತನ್ಯ ತುಂಬಿದೆ. ಮಹಿಳೆಯರಿಗೆ ಆರ್ಥಿಕ…

6 hours ago

ಎಚ್೧ಎನ್೧: ಕೊಡಗು ಜಿಲ್ಲೆಯಲ್ಲಿ 4 ಪ್ರಕರಣ ದೃಢ

ನವೀನ್ ಡಿಸೋಜ ಶೀತ, ಕೆಮ್ಮು, ಜ್ವರ ಸಂಬಂಧ ೩,೭೬೨ ಪ್ರಕರಣ ದಾಖಲು; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಮನವಿ ಮಡಿಕೇರಿ:…

7 hours ago

ಮುಂಗಾರು ವೈಫಲ್ಯ: ಬಿತ್ತನೆ ಶೇ.15.95ಕ್ಕೆ ಕುಸಿತ

ಮಹಾದೇಶ್ ಎಂ.ಗೌಡ ಹನೂರು: ಕುಡಿಯುವ ನೀರು, ಮೇವಿಗೂ ತೀವ್ರ ಹಾಹಾಕಾರ ಹನೂರು: ತಾಲ್ಲೂಕಿನಲ್ಲಿ ಈ ಬಾರಿ ಮುಂಗಾರು ಮಳೆ ಕೈಕೊಟ್ಟಿದ್ದು,…

7 hours ago