ನವದೆಹಲಿ: ಪ್ಯಾರಿಸ್ ಒಲಿಂಪಿಕ್ ಕ್ರೀಡಾಕೂಟ ಮುಗಿಸಿ ವಾಪಸ್ ಆಗಿರುವ ಕ್ರೀಡಾಪಟುಗಳೊಂದಿಗೆ ನಿನ್ನೆ ಸ್ವಾತಂತ್ರ್ಯ ದಿನದಂದು ಮಾತುಕತೆ ನೆಡೆಸಿದ ಮೋದಿ ವಿನೇಶ್ ಫೋಗಟ್ ಸಾಧನೆಗಳನ್ನು ಹೊಗಳಿದ್ದಾರೆ.
2024ರ ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಚಿನ್ನದ ಪದಕಕ್ಕೆ ಮುತ್ತಿಕ್ಕಲು ಪ್ರಯತ್ನಿಸಿ ಕೊನೆ ಕ್ಷಣದಲ್ಲಿ ಅವಕಾಶ ವಂಚಿತರಾದ ವಿನೇಶ್ ಫೋಗಟ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.
ವಿನೇಶ್ ಫೋಗಟ್ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಫೈನಲ್ಸ್ ಪ್ರವೇಶಿಸಿದ ಭಾರತದ ಮೊದಲ ಕುಸ್ತಿಪಟು ಎನ್ನುವ ಖ್ಯಾತಿಗೆ ಪಾತ್ರರಾಗಿದ್ದರು ಇದು ನಮ್ಮ ದೇಶದ ಪಾಲಿಗೆ ಹೆಮ್ಮೆಯ ಕ್ಷಣವಾಗಿದೆ ಎಂದು ಮೋದಿ ಟ್ತೀಟ್ ಮೂಲಕ ಅಭಿನಂದಿಸಿದ್ದಾರೆ.
ಫೋಗಟ್ ಅವರು 50 ಕೆಜಿ ಕುಸ್ತಿ ಪಂದ್ಯಾವಳಿಯಲ್ಲಿ ಫೈನಲ್ಸ್ ಪ್ರವೇಶಿಸಿ ಕೇವಲ 100 ಗ್ರಾಂ ತೂಕ ಹೆಚ್ಚಾದ ಕಾರಣಕ್ಕೆ ಅವರನ್ನು ಅನರ್ಹಗೊಳಿಸಿದ್ದು, ಕ್ರೀಡಾಭಿಮಾನಿಗಳಿಗೆ ಬೇಸರ ತಂದಿತು. ಮತ್ತು ವಿನೇಶ್ ಫೋಗಟ್ ಕನಿಷ್ಠ ಬೆಳ್ಳಿ ಪದಕ ನೀಡಬೇಕು ಎಂದು ಮನವಿಕೂಡ ಮಾಡಿದ್ದರು. ಈ ಮನವಿಯನ್ನು ಸಿಎಎಸ್ ತಿರಸ್ಕರಿಸಿತ್ತು. ಈ ಸಂದರ್ಭದಲ್ಲಿ ವಿನೇಶ್ ಪರ ಅಭಿಯಾನ ಆರಂಭಿಸಿದ್ದರು̤
ಈ ಬಗ್ಗೆ ಖಾಸಗಿ ಸುದ್ದಿ ಸಂಸ್ಥೆ ಎಕ್ಸ್ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಪ್ಯಾರಿಸ್ ಒಲಂಪಿಕ್ಸ್ನಲ್ಲಿ ವಿನೇಶ್ ಕುಸ್ತಿ ಫೈನಲ್ ತಲುಪಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಇದು ನಮಗೆ ಅತ್ಯಂತ ಹೆಮ್ಮೆಯ ಕ್ಷಣವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
2024ರ ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಕುಸ್ತಿಪಟು ವಿನೇಶ್ ಫೋಗಟ್ ಅವರ ಪ್ರದರ್ಶನದ ಕುರಿತು, ನಿನ್ನೆ ದೆಹಲಿಯ ಅವರ ನಿವಾಸದಲ್ಲಿ ಭಾರತೀಯ ಒಲಿಂಪಿಕ್ ತಂಡದೊಂದಿಗೆ ಸಂವಾದ ನಡೆಸುವಾಗ ವಿನೇಶ್ ಸಾಧನೆಯನ್ನು ಕೊಂಡಾಡಿದ್ದಾರೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…