ನವದೆಹಲಿ: ಪದ್ಮಶ್ರೀ ಪ್ರಶಸ್ತಿ ಪಡೆದ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲ್ಲೂಕಿನ ಹೊನ್ನಳ್ಳಿಯ ತುಳಸಿ ಗೌಡ ಅವರು ವಯೋಸಹಜ ಕಾಯಿಲೆಯಿಂದ ಸೋಮವಾರ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.
ಈ ಬಗ್ಗೆ ತಮ್ಮ ಎಕ್ಸ್ನಲ್ಲಿ ಖಾತೆಯಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ನರೇಂದ್ರ ಅವರು, ಪರಿಸರ ಸಂರಕ್ಷಣೆಯಲ್ಲಿ ಪ್ರಮುಖ ಪಾತ್ರವಹಿಸಿದ್ದ ಕರ್ನಾಟಕದ ತುಳಸಿ ಗೌಡ ಅವರ ನಿಧನದಿಂದ ತುಂಬಾ ದುಃಖವಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಪ್ರಕೃತಿಯನ್ನು ಪೋಷಿಸಲು, ಪರಿಸರ ಸಂರಕ್ಷಿಸಲು ತಮ್ಮ ಜೀವನ ಮುಡಿಪಾಗಿಟ್ಟಿದ್ದರು:
ಸಾವಿರಾರು ಸಸಿಗಳನ್ನು ನೆಡುವ ಮೂಲಕ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲ್ಲೂಕಿನಲ್ಲಿ ಪರಿಸರ ಸಂರಕ್ಷಿಸಲು ಹಾಗೂ ಮುಂದಿನ ಪೀಳಿಗೆಗೆ ಶುದ್ಧ ಗಾಳಿಯ ವಾತಾವರಣ ನಿರ್ಮಾಣ ಮಾಡುವ ಕಾಯಕಕ್ಕೆ ಕೈ ಹಾಕಿದ್ದರು. ಇವರು ಪರಿಸರ ಸಂರಕ್ಷಣೆಗೆ ಮಾರ್ಗದರ್ಶಕ ಬೆಳಕಾಗಿ ಉಳಿಯುತ್ತಾರೆ. ಇವರ ಪರಿಸರ ಸಂರಕ್ಷಣೆಯ ಕೆಲಸ ಮುಂದಿನ ಪೀಳಿಗೆಗೆ ಸ್ಪೂರ್ತಿ ನೀಡುತ್ತದೆ ಎಂದು ಬರೆದುಕೊಂಡಿದ್ದಾರೆ.
ಇನ್ನು ತುಳಸಿ ಗೌಡ ಅವರು ಹಾಲಕ್ಕಿ ಬುಡಕಟ್ಟು ಜನಾಂಗದ ಮಹಿಳೆಯಾಗಿದ್ದು, ಅವರಿಗೆ 86 ವರ್ಷ ವಯಸ್ಸಾಗಿದೆ. ಇವರಿಗೆ ಸುಬ್ರಾಯ ಮತ್ತು ಸೋಮಿ ಎಂಬ ಇಬ್ಬರು ಮಕ್ಕಳಿದ್ದು, ನಾಲ್ಕು ಜನ ಮೊಮ್ಮಕ್ಕಳಿದ್ದಾರೆ.
ವರ್ಷಕ್ಕೆ ಮೂವತ್ತು ಸಾವಿರಕ್ಕೂ ಹೆಚ್ಚು ಸಸಿಗಳನ್ನು ಬೆಳೆಸುತ್ತಿದ್ದರು. ಲಕ್ಷಾಂತರ ಗಿಡಳನ್ನು ಬೆಳೆಸಿದ ಕೀರ್ತಿ ಇವರದು. ತಮ್ಮ ಎರಡು ಮಕ್ಕಳನ್ನು ಸಾಕಲು ಅರಣ್ಯ ಇಲಾಖೆಯಲ್ಲಿ ದಿನಗೂಲಿ ಕೆಲಸಕ್ಕೆ ಸೇರಿದ ಇವರು, ಅಳಿವಿನಂಚಿನಲ್ಲಿರುವ ಹಲವು ಕಾಡು ಬೀಜಗಳನ್ನು ಸಂಗ್ರಹಿಸಿ ಸಸಿ ಮಾಡಿ ಅವುಗಳನ್ನು ಬೆಳೆಸುವ ಮೂಲಕ ಹಸಿರು ಕ್ರಾಂತಿ ಮಾಡಿದ್ದಾರೆ.
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…
ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…
ಕೊಡಗು: ಸಿಎಂ ಡಿ.ಕೆ.ಶಿವಕುಮಾರ್ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕೊಡವತಿಯರು…