ದೇಶ- ವಿದೇಶ

ಎಕ್ಸ್‌ನಲ್ಲಿ 100 ಮಿಲಿಯನ್‌ ತಲುಪಿದ ಪ್ರಧಾನಿ ನರೇಂದ್ರ ಮೋದಿ ಫಾಲೋವರ್ಸ್‌

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅತ್ಯಂತ ಪ್ರಭಾವಿ ನಾಯಕರಲ್ಲಿ ಒಬ್ಬರು. ದಿನದಿಂದ ದಿನಕ್ಕೆ ಅವರ ವರ್ಚಸ್ಸು ಹೆಚ್ಚುತ್ತಲೇ ಇದೆ. ಪ್ರಧಾನಿ ಆದ ಬಳಿಕ ವಿಶ್ವದ ಜನಪ್ರಿಯ ನಾಯಕರಲ್ಲಿ ಅವರು ಒಬ್ಬರಾಗಿದ್ದು, ಇದೀಗ ತಮ್ಮ ಸೋಷಿಯಲ್‌ ಮೀಡಿಯಾ ಮೂಲಕ ಹೊಸದೊಂದು ಮೈಲಿಗಲ್ಲು ಸಾಧಿಸಿದ್ದಾರೆ. ಎಕ್ಸ್‌ನಲ್ಲಿ 100 ಮಿಲಿಯನ್‌ ಫಾಲೋವರ್ಸ್‌ ಹೊಂದಿದ್ದಾರೆ. ಈ ಮೂಲಕ ವಿಶ್ವ ನಾಯಕರಾಗಿ ಮೋದಿ ಹೊರಹೊಮ್ಮಿದ್ದಾರೆ.

ಈ ಬಗ್ಗೆ ಪ್ರಧಾನಿ ಮೋದಿ ಅವರು ಟ್ವೀಟ್‌ ಮಾಡಿದ್ದು, ಎಕ್ಸ್‌ನಲ್ಲಿ ನೂರು ಮಿಲಿಯನ್‌ ಈ ರೋಮಾಂಚನ ಮಾಧ್ಯಮದಲ್ಲಿರುವುದಕ್ಕೆ ಸಂತೋಷವಾಗಿದೆ. ಮೆಚ್ಚುಗೆ, ನಿರ್ಧಾರ, ಚರ್ಚೆ, ಒಳನೋಟ, ಜನರ ಆಶೀರ್ವಾದ, ರಚನಾತ್ಮಕ ಟೀಕೆ ಇತ್ಯಾದಿ. ಭವಿಷ್ಯದಲ್ಲೂ ಅಷ್ಟೇ ಆಸಕ್ತಿದಾಯಕ ಸಮಯವನ್ನು ಎದುರು ನೋಡುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ.

ಇನ್ನೂ ಎಕ್ಸ್‌ನಲ್ಲಿ ಪ್ರಧಾನಿ ಮೋದಿಯವರ ಜನಪ್ರಿಯತೆ ಕಂಡು ವಿಶ್ವ ನಾಯಕರು ಸೋಷಿಯಲ್‌ ಮೀಡಿಯಾದಲ್ಲಿ ಮೋದಿಯವರೊಂದಿಗೆ ತೊಡಗಿಸಿಕೊಳ್ಳಲು ಉತ್ಸುಕರಾಗಿದ್ದಾರೆ. ಏಕೆಂದರೆ ಅವರೊಂದಿಗೆ ಸಂಪರ್ಕ ಸಾಧಿಸುವುದರಿಂದ ಅವರ ಸ್ವಂತ ಫಾಲೋವರ್ಸ್‌ಗಳ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳಬಹುದಾಗಿದೆ.

ಈ ಎಲ್ಲಾ ಬೆಳವಣಿಗೆಗಳ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು, ವಿಶ್ವ ನಾಯಕ ಎಂಬುದಾಗಿ ಮತ್ತೊಮ್ಮೆ ಪ್ರೂವ್‌ ಮಾಡಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

SSLC | ಪರೀಕ್ಷೆ ಅಂಕ 625ರ ಬದಲಿಗೆ 525ಕ್ಕೆ ಇಳಿಕೆ ; ಲೆಕ್ಕಕ್ಕಿಲ್ಲ ತೃತೀಯ ಭಾಷೆ

ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ…

6 mins ago

ಯುಪಿಎಸ್‌ಸಿ ಪರೀಕ್ಷೆಗೆ ಕಠಿಣ ಪರಿಶ್ರಮ ಅಗತ್ಯ : ಕಿರಣ ಕಮತೆ

ಮೈಸೂರು : ಯುಪಿಎಸ್‌ ಪರೀಕ್ಷೆ ಭೇದಿಸುವುದು ಸುಲಭವಲ್ಲ. ಅದಕ್ಕೆ ಕಠಿಣ ಪರಿಶ್ರಮ, ಸ್ಥಿರತೆ ಮತ್ತು ಸ್ಮಾರ್ಟ್ ಓದು ಅಗತ್ಯ ಎಂದು…

25 mins ago

ನಾಗರಹೊಳೆ | ಅಕ್ರಮ ಉರುಳಿಗೆ ಸಿಲುಕಿ ಹುಲಿ ಬಲಿ

ಹುಣಸೂರು : ನಾಗರಹೊಳೆ ಹುಲಿ ಮೀಸಲು ಅರಣ್ಯದ ಮೆಟ್ಟಿಕುಪ್ಪೆ ಶ್ರೇಣಿಯ ಬಳಿ ಅಕ್ರಮ ಉರುಳಿಗೆ ಸಿಲುಕಿ ಮೂರು ವರ್ಷದ ಗಂಡು…

32 mins ago

ಗುಂಡ್ಲುಪೇಟೆ | ಬೇರಂಬಾಡಿ ಭಾಗದಲ್ಲಿ ಮತ್ತೊಂದು ಹುಲಿ ಸೆರೆ

ಗುಂಡ್ಲುಪೇಟೆ : ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಣೆ ಪ್ರದೇಶದ ಮದ್ದೂರು ವಲಯ ವ್ಯಾಪ್ತಿಯ ಚನ್ನಮಲ್ಲಿಪುರ-ಬೇರಂಬಾಟಿ ಕಗ್ಗಳಹುಂಡಿ ಭಾಗದಲ್ಲಿ ಉಪಟಳ ನೀಡುತ್ತಿದ್ದ…

1 hour ago

ರಾಮನವಮಿ | ಅಯೋಧ್ಯೆ ಬಾಲರಾಮನ ಹಣೆಯ ಮೇಲೆ ಮೂಡಿದ ಸೂರ್ಯ ತಿಲಕ

ಅಯೋಧ್ಯೆ : ಅಯೋಧ್ಯೆ ರಾಮಮಂದಿರದಲ್ಲಿ ರಾಮನವಮಿ ಸಂಭ್ರಮ ಮನೆ ಮಾಡಿದೆ. ಈ ಶುಭ ಸಂದರ್ಭದಲ್ಲಿ ಬಾಲರಾಮನ ಹಣೆಯ ಮೇಲೆ ಸೂರ್ಯ…

1 hour ago

ನೇಪಾಳ | ನೂತನ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಜೆನ್‌ಝೀಗಳ ಹೀರೋ ಬಾಲೇಂದ್ರ

ಕಠ್ಮಂಡು : ನೇಪಾಳದ ರಾಷ್ಟ್ರೀಯ ಸ್ವತಂತ್ರ ಪಕ್ಷದ ಹಿರಿಯ ನಾಯಕ ಬಾಲೇಂದ್ರ ಶಾ ಅವರು ದೇಶದ ನೂತನ ಪ್ರಧಾನಿಯಾಗಿ ಇಂದು(ಮಾರ್ಚ್‌.27)…

4 hours ago