ನವದೆಹಲಿ: ರಂಜಾನ್ ಮಾಸ ಇಂದಿನಿಂದ ಪ್ರಾರಂಭವಾಗಿದ್ದು, ದೇಶದ ಮುಸಲ್ಮಾನರಿಗೆ ಪ್ರಧಾನಿ ನರೇಂದ್ರ ಮೋದಿ ಶುಭಾಶಯ ಕೋರಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ರಂಜಾನ್ ಮಾಸ ಪ್ರಾರಂಭವಾಗಿದ್ದು, ನಮ್ಮ ಸಮಾಜದಲ್ಲಿ ಶಾಂತಿ ಹಾಗೂ ಸೌಹಾರ್ದತೆಯನ್ನು ತರಲಿ ಎಂದು ಶುಭ ಹಾರೈಸಿದ್ದಾರೆ.
ಈ ಪವಿತ್ರ ತಿಂಗಳು ಆತ್ಮಾವಲೋಕನ, ಕೃತಜ್ಞತೆ ಹಾಗೂ ಭಕ್ತಿಯ ಮಹತ್ವವನ್ನು ಸಾರುತ್ತದೆ. ಅಲ್ಲದೇ ಕರುಣೆ, ದಯೆ ಹಾಗೂ ಸೇವೆಯ ಮೌಲ್ಯಗಳನ್ನು ನೆನಪಿಸುತ್ತದೆ ಎಂದು ರಂಜಾನ್ ಮುಬಾರಕ್ ಪೋಸ್ಟ್ ಮಾಡಿದ್ದಾರೆ.
ರಂಜಾನ್ ಮಾಸದ ಉಪವಾಸ ಆಚರಣೆಯ ಅರ್ಥವೇನು?
ರಂಜಾನ್ ತಿಂಗಳು ಮುಸಲ್ಮಾನರಿಗೆ ಅತ್ಯಂತ ಮಹತ್ವದ ತಿಂಗಳಾಗಿದೆ. ರಂಜಾನ್ ಅಲ್ಲಾಹನಿಂದ ದೊರೆತ ದೊಡ್ಡ ಇನಾಮು ಇದ್ದಂತೆ ಎಂದು ಹಲವಾರು ಹದಸುಗಳು ಇದರ ಮಹತ್ವವನ್ನು ಸಾರ ಹೇಳುತ್ತವೆ. ಇನ್ನು ಈ ತಿಂಗಳಲ್ಲಿ ಮುಖ್ಯವಾಗಿ ಉಪವಾಸವನ್ನು ಆಚರಿಸಲು ಧರ್ಮ ಗ್ರಂಥದಲ್ಲಿ ನಿರ್ದೇಶಿಸಲಾಗಿದೆ. ಅಲ್ಲದೇ ನಾವು ಉಪವಾಸವನ್ನು ಹೇಗೆ ಆಚರಿಸಬೇಕು ಎಂಬುದರ ಮಾಹಿತಿಯನ್ನು ವಿವರಿಸಲಾಗಿದೆ.
ಬೆಂಗಳೂರು: ಜೆಡಿಎಸ್ ರೈತರಿಂದ ಬೆಳೆದ ಪಕ್ಷ, ನಾಶ ಮಾಡಲು ಸಾಧ್ಯವೇ ಇಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ಹಾಸನ…
ಬೆಂಗಳೂರು: ವಿಧಾನಮಂಡಲದ ಜಂಟಿ ಅಧಿವೇಶನದ ವೇಳೆ ರಾಜ್ಯ ಸರ್ಕಾರದ ಭಾಷಣವನ್ನು ಸಂಪೂರ್ಣವಾಗಿ ಓದದೆ ಕೇವಲ ಎರಡು ಸಾಲಿನ ಭಾಷಣ ಓದಿ…
ಬೆಂಗಳೂರು: ಪ್ರಸಕ್ತ 2025-26ನೇ ಸಾಲಿನ ರಾಜ್ಯಮಟ್ಟದ ಎಸ್ಎಸ್ಎಲ್ಸಿ ಪೂರ್ವ ಸಿದ್ಧತಾ ಪರೀಕ್ಷೆ-2ರ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆ ಪ್ರಕಟಿಸಿದೆ. ಜ.27…
ಬೆಂಗಳೂರು: ಕರ್ನಾಟಕ ಸರ್ಕಾರ ಸುತ್ತೋಲೆಯೊಂದನ್ನು ಹೊರಡಿಸಿದೆ. ಸರ್ಕಾರಿ ಕಾರ್ಯಕ್ರಮ, ರಾಷ್ಟ್ರೀಯ ಹಬ್ಬಗಳು, ಶಾಲಾ-ಕಾಲೇಜುಗಳ ಕಾರ್ಯಕ್ರಮಗಳಲ್ಲಿ ಜನರ ಹಾಗೂ ಮಕ್ಕಳ ಸುರಕ್ಷತೆಗೆ…
ಯಾದಗಿರಿ: ದೇವರದಾಸಿಮಯ್ಯ ಪುಣ್ಯಕ್ಷೇತ್ರ ಯಾದಗಿರಿ ಜಿಲ್ಲೆಯ ಮುದನೂರು ಗ್ರಾಮದಲ್ಲಿಯೂ ಉತ್ಖನನ ನಡೆಸಲು ಸಿದ್ಧತೆ ನಡೆದಿದೆ. ಮುದನೂರು ಗ್ರಾಮ ರಾಜ-ಮಹಾರಾಜರ ಕಾಲದಲ್ಲಿ…
ಮೈಸೂರು: ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಸಂಸದ ಯದುವೀರ್ ಒಡೆಯರ್ ಅವರನ್ನು ಭೇಟಿಯಾಗಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು…