ದೇಶ- ವಿದೇಶ

ರಂಜಾನ್‌ ಮಾಸ ಪ್ರಾರಂಭ: ದೇಶದ ಮುಸಲ್ಮಾನರಿಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ

ನವದೆಹಲಿ: ರಂಜಾನ್‌ ಮಾಸ ಇಂದಿನಿಂದ ಪ್ರಾರಂಭವಾಗಿದ್ದು, ದೇಶದ ಮುಸಲ್ಮಾನರಿಗೆ ಪ್ರಧಾನಿ ನರೇಂದ್ರ ಮೋದಿ ಶುಭಾಶಯ ಕೋರಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ರಂಜಾನ್‌ ಮಾಸ ಪ್ರಾರಂಭವಾಗಿದ್ದು, ನಮ್ಮ ಸಮಾಜದಲ್ಲಿ ಶಾಂತಿ ಹಾಗೂ ಸೌಹಾರ್ದತೆಯನ್ನು ತರಲಿ ಎಂದು ಶುಭ ಹಾರೈಸಿದ್ದಾರೆ.

ಈ ಪವಿತ್ರ ತಿಂಗಳು ಆತ್ಮಾವಲೋಕನ, ಕೃತಜ್ಞತೆ ಹಾಗೂ ಭಕ್ತಿಯ ಮಹತ್ವವನ್ನು ಸಾರುತ್ತದೆ. ಅಲ್ಲದೇ ಕರುಣೆ, ದಯೆ ಹಾಗೂ ಸೇವೆಯ ಮೌಲ್ಯಗಳನ್ನು ನೆನಪಿಸುತ್ತದೆ ಎಂದು ರಂಜಾನ್‌ ಮುಬಾರಕ್‌ ಪೋಸ್ಟ್‌ ಮಾಡಿದ್ದಾರೆ.

ರಂಜಾನ್‌ ಮಾಸದ ಉಪವಾಸ ಆಚರಣೆಯ ಅರ್ಥವೇನು?

ರಂಜಾನ್‌ ತಿಂಗಳು ಮುಸಲ್ಮಾನರಿಗೆ ಅತ್ಯಂತ ಮಹತ್ವದ ತಿಂಗಳಾಗಿದೆ. ರಂಜಾನ್‌ ಅಲ್ಲಾಹನಿಂದ ದೊರೆತ ದೊಡ್ಡ ಇನಾಮು ಇದ್ದಂತೆ ಎಂದು ಹಲವಾರು ಹದಸುಗಳು ಇದರ ಮಹತ್ವವನ್ನು ಸಾರ ಹೇಳುತ್ತವೆ. ಇನ್ನು ಈ ತಿಂಗಳಲ್ಲಿ ಮುಖ್ಯವಾಗಿ ಉಪವಾಸವನ್ನು ಆಚರಿಸಲು ಧರ್ಮ ಗ್ರಂಥದಲ್ಲಿ ನಿರ್ದೇಶಿಸಲಾಗಿದೆ. ಅಲ್ಲದೇ ನಾವು ಉಪವಾಸವನ್ನು ಹೇಗೆ ಆಚರಿಸಬೇಕು ಎಂಬುದರ ಮಾಹಿತಿಯನ್ನು ವಿವರಿಸಲಾಗಿದೆ.

ಅರ್ಚನ ಎಸ್‌ ಎಸ್

Recent Posts

ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಹೊಣೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…

10 hours ago

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

12 hours ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

20 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

20 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

20 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

20 hours ago