ನವದೆಹಲಿ: ರಂಜಾನ್ ಮಾಸ ಇಂದಿನಿಂದ ಪ್ರಾರಂಭವಾಗಿದ್ದು, ದೇಶದ ಮುಸಲ್ಮಾನರಿಗೆ ಪ್ರಧಾನಿ ನರೇಂದ್ರ ಮೋದಿ ಶುಭಾಶಯ ಕೋರಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ರಂಜಾನ್ ಮಾಸ ಪ್ರಾರಂಭವಾಗಿದ್ದು, ನಮ್ಮ ಸಮಾಜದಲ್ಲಿ ಶಾಂತಿ ಹಾಗೂ ಸೌಹಾರ್ದತೆಯನ್ನು ತರಲಿ ಎಂದು ಶುಭ ಹಾರೈಸಿದ್ದಾರೆ.
ಈ ಪವಿತ್ರ ತಿಂಗಳು ಆತ್ಮಾವಲೋಕನ, ಕೃತಜ್ಞತೆ ಹಾಗೂ ಭಕ್ತಿಯ ಮಹತ್ವವನ್ನು ಸಾರುತ್ತದೆ. ಅಲ್ಲದೇ ಕರುಣೆ, ದಯೆ ಹಾಗೂ ಸೇವೆಯ ಮೌಲ್ಯಗಳನ್ನು ನೆನಪಿಸುತ್ತದೆ ಎಂದು ರಂಜಾನ್ ಮುಬಾರಕ್ ಪೋಸ್ಟ್ ಮಾಡಿದ್ದಾರೆ.
ರಂಜಾನ್ ಮಾಸದ ಉಪವಾಸ ಆಚರಣೆಯ ಅರ್ಥವೇನು?
ರಂಜಾನ್ ತಿಂಗಳು ಮುಸಲ್ಮಾನರಿಗೆ ಅತ್ಯಂತ ಮಹತ್ವದ ತಿಂಗಳಾಗಿದೆ. ರಂಜಾನ್ ಅಲ್ಲಾಹನಿಂದ ದೊರೆತ ದೊಡ್ಡ ಇನಾಮು ಇದ್ದಂತೆ ಎಂದು ಹಲವಾರು ಹದಸುಗಳು ಇದರ ಮಹತ್ವವನ್ನು ಸಾರ ಹೇಳುತ್ತವೆ. ಇನ್ನು ಈ ತಿಂಗಳಲ್ಲಿ ಮುಖ್ಯವಾಗಿ ಉಪವಾಸವನ್ನು ಆಚರಿಸಲು ಧರ್ಮ ಗ್ರಂಥದಲ್ಲಿ ನಿರ್ದೇಶಿಸಲಾಗಿದೆ. ಅಲ್ಲದೇ ನಾವು ಉಪವಾಸವನ್ನು ಹೇಗೆ ಆಚರಿಸಬೇಕು ಎಂಬುದರ ಮಾಹಿತಿಯನ್ನು ವಿವರಿಸಲಾಗಿದೆ.
ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…
ಬೆಂಗಳೂರು : ಬಿಡದಿ ಟೌನ್ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…
ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…
ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…
ಲಕ್ನೋ: ಜೂನ್.21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…
ಮುಂಬೈ: ದೇಶದಲ್ಲಿ ಮುಂಗಾರು ಪ್ರವೇಶಿದರೂ ಮುಂಬೈನಲ್ಲಿ ಮಳೆಯ ಕೊರತೆ ಎದುರಾಗಿದೆ. ಮಳೆ ಕೊರತೆ ಎದುರಾದ ಪರಿಣಾಮ ಜಲಾಶಯಗಳಲ್ಲಿ ನೀರಿನ ಮಟ್ಟ…