ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಆರೋಗ್ಯ ಕುರಿತು ಪ್ರಧಾನಿ ನರೇಂದ್ರ ಮೋದಿ ವಿಚಾರಿಸಿದ್ದಾರೆ.
ಜಮ್ಮು-ಕಾಶ್ಮೀರದಲ್ಲಿ ನಿನ್ನೆ ಚುನಾವಣಾ ಸಮಾವೇಶದಲ್ಲಿ ಮಾತನಾಡುತ್ತಿದ್ದ ವೇಳೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದರು.
ಆದರೆ ತಕ್ಷಣವೇ ಸುಧಾರಿಸಿಕೊಂಡು ಮಾತನಾಡಿದ ಖರ್ಗೆ, ನಾನು ಇಷ್ಟು ಬೇಗ ಸಾಯಲ್ಲ. ಮೋದಿಯನ್ನು ಅಧಿಕಾರದಿಂದ ಕೆಳಗಿಳಿಸಿಯೇ ಸಾಯುವುದು ಎಂದು ಹೇಳಿದ್ದರು.
ಈ ವಿಚಾರ ತಿಳಿಯುತ್ತಿದ್ದಂತೆ ಪ್ರಧಾನಿ ಮೋದಿ ಅವರು ಖರ್ಗೆಎ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದರು.
ಈ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಗೃಹ ಸಚಿವ ಅಮಿತ್ ಶಾ ಅವರು, ಮಲ್ಲಿಕಾರ್ಜುನ ಖರ್ಗೆ ತಮ್ಮ ವೈಯಕ್ತಿಕ ಆರೋಗ್ಯ ವಿಚಾರದಲ್ಲಿ ಅನಗತ್ಯವಾಗಿ ನರೇಂದ್ರ ಮೋದಿ ಅವರನ್ನು ಎಳೆದು ತರುತ್ತಿದ್ದಾರೆ. ಇದು ಅವರ ದ್ವೇಷ ಪ್ರದರ್ಶನ ಮಾಡುತ್ತದೆ. ಮೋದಿಯವರ ಬಗ್ಗೆ ನಿರಂತರವಾಗಿ ಯೋಚಿಸುತ್ತಿದ್ದಾರೆ ಎಂದು ಹೇಳಿದರು.
ಮಲ್ಲಿಕಾರ್ಜುನ ಖರ್ಗೆ ಅವರು ಇನ್ನು ಹಲವು ವರ್ಷಗಳ ಕಾಲ ಬದುಕಲಿ. 2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣವನ್ನು ನೋಡಲು ಅವರು ಬದುಕಲಿ ಎಂದು ಅಮಿತ್ ಶಾ ಹೇಳಿದ್ದಾರೆ.
ಬೆಂಗಳೂರು: ನಟ ದರ್ಶನ್ ಹಾಗೂ ನಟ ಕಿಚ್ಚ ಸುದೀಪ್ ಫ್ಯಾನ್ಸ್ ವಾರ್ ತಾರಕಕ್ಕೇರಿರುವ ಮಧ್ಯೆ ಸೋಷಿಯಲ್ ಮೀಡಿಯಾದಲ್ಲಿ ಅಶ್ಲೀಲ ಮೆಸೇಜ್…
ಮೈಸೂರು: ಸಚಿವ ಜಮೀರ್ ಅಹ್ಮದ್ ಖಾನ್ ಅವರ ಆಪ್ತ ಸಹಾಯಕ ಸರ್ಫರಾಜ್ ಅವರ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿರುವ…
ಬೆಂಗಳೂರು: ತನ್ನ ಆಂತರಿಕ ಕಚ್ಚಾಟದಿಂದ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಹೊರ ಬರದಿದ್ದರೆ, ಮುಂದಿನ ವಿಧಾನಸಭೆ ಚುನಾಣೆಯಲ್ಲಿ ರಾಜ್ಯದ ಜನತೆ ಇವರನ್ನು…
ಬೆಂಗಳೂರು: ಬೆಂಗಳೂರಿನಲ್ಲಿ 1000 ವಿದ್ಯಾರ್ಥಿನಿಯರಿಗೆ ಹಾಸ್ಟೆಲ್ ನಿರ್ಮಿಸಬೇಕು ಎಂಬುದು ಡಾ. ಶಾಮನೂರು ಶಿವಶಂಕರಪ್ಪ ಆಶಯವಾಗಿತ್ತು, ಈ ಕನಸು ನನಸು ಮಾಡಲು…
ನವದೆಹಲಿ: ಪವರ್ ಶೇರಿಂಗ್ ವಿಚಾರದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ವೈರಾಗ್ಯದ ಮಾತನ್ನು ಆಡಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಸಿಎಂ…
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಡೆವಿಲ್ ಚಿತ್ರ ಬಿಡುಗಡೆಯಾಗಿ 14 ದಿನಗಳು ಕಳೆದಿದ್ದು, ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಯಶಸ್ವಿ ಪ್ರದರ್ಶನ…