ಭೂಪಾಲ್: ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರ 100ನೇ ಜನ್ಮ ದಿನಾಚರಣೆಯ ದಿನದಂದೇ ಅವರ ಬಹುದೊಡ್ಡ ಕನಸನ್ನು ಈಡೇರಿಸಲು ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮುಂದಾಗಿದೆ.
ಮಧ್ಯಪ್ರದೇಶದ ಖಜ್ರಾಹೋದಲ್ಲಿ ಕೆನ್-ಬೆಟ್ಟಾ ನದಿಗಳ ಜೋಡಣೆಗೆ ಪ್ರಧಾನಿ ಮೋದಿ ಶಿಲಾನ್ಯಾಸ ನೆರೆವೇರಿಸುವ ಮೂಲಕ ದೇಶದಲ್ಲಿ ಮೊದಲ ಬಾರಿಗೆ ನದಿಗಳ ಜೋಡಣೆಗೆ ಮುಂದಾಗಿದ್ದಾರೆ.
ಕಳೆದ 2014ರಲ್ಲಿ ಮೊದಲ ಬಾರಿಗೆ ಮೋದಿ ಅವರು ಪ್ರಧಾನಿ ಆದಾಗ ವಾಜಪೇಯಿ ಅವರ ಕನಸನ್ನು ಈಡೇರಿಸಲು ಪ್ರಯತ್ನಿಸಿದರು. ಆದರೆ ಅದು ಸಾಧ್ಯವಾಗಲಿಲ್ಲ. ನಂತರ ಮಧ್ಯಪ್ರದೇಶದ ಮುಖ್ಯಮಂತ್ರಿ ಡಾ. ಮೋಹನ್ ಯಾದವ್ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಎಲ್ಲಾ ಅಡೆತಡೆಗಳನ್ನು ನಿವಾರಿಸಿದರು.
ಅಂತಿಮವಾಗಿ ನದಿಗಳ ಜೋಡಣೆಗಿದ್ದ ಎಲ್ಲಾ ಸಮಸ್ಯೆಗಳು ನಿವಾರಣೆಯಾಗಿದ್ದು, ಈಗ ಕೇಂದ್ರದಿಂದ ಅನುದಾನವೂ ಮಂಜೂರಾಗಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅಡಿಪಾಯ ಹಾಕುತ್ತಿದ್ದಾರೆ.
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಾ.ಮೋಹನ್ ಯಾದವ್, ಬಿಜೆಪಿ ರಾಜ್ಯಾಧ್ಯಕ್ಷ ವಿ.ಡಿ.ಶರ್ಮಾ, ಉಪಮುಖ್ಯಮಂತ್ರಿ ರಾಜೇಂದ್ರ ಶುಕ್ಲಾ, ಸಚಿವ ಪ್ರಹ್ಲಾದ್ ಪಟೇಲ್, ಜಲಸಂಪನ್ಮೂಲ ಸಚಿವೆ ತುಳಸಿ ಸಿಲಾವತ್, ಕೃಷಿ ಸಚಿವ ಇಂದಲ್ ಸಿಂಗ್ ಕಂಸಾನಾ, ಕೇಂದ್ರ ಕೃಷಿ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಭಾಗಿಯಾಗಿದ್ದರು.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…