ನವದೆಹಲಿ: ದೇಶದ ಜನರು ಸಕಾರಾತ್ಮಕ ವಿಚಾರಗಳು, ಸಾಧಕರ ಸ್ಪೂರ್ತಿದಾಯಕ ಕಥೆಗಳನ್ನು ಹೆಚ್ಚು ಹೆಚ್ಚು ಇಷ್ಟ ಪಡುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಮನ್ ಕಿ ಬಾತ್ ಕಾರ್ಯಕ್ರಮವು ಹತ್ತು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸಂತಸ ವ್ಯಕ್ತಪಡಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಮನ್ ಕಿ ಬಾತ್ ಕಾರ್ಯಕ್ರಮವು ಭಾರತದ ಚೈತನ್ಯವನ್ನು ಮತ್ತು ರಾಷ್ಟ್ರದ ಸಾಮೂಹಿಕ ಶಕ್ತಿಯನ್ನು ಪ್ರದರ್ಶಿಸುವ ವಿಶಿಷ್ಟ ವೇದಿಕೆಯಾಗಿದೆ.
ಜನರು ಯಾವಾಗಲೂ ನಕಾರಾತ್ಮಕ ಅಥವಾ ಅತಿರಂಜಿತ ವಿಷಯಗಳಿಗೆ ಮಾತ್ರ ಕಿವಿಗೊಡುತ್ತಾರೆ ಎಂಬ ಭಾವನೆಯಿದೆ. ಆದರೆ ಮನ್ ಕಿ ಬಾತ್ ಕಾರ್ಯಕ್ರಮ ಅದನ್ನು ಸುಳ್ಳು ಮಾಡಿ ಜನರು ಸಕಾರಾತ್ಮಕ ವಿಷಯಗಳಿಗೂ ಆಸಕ್ತಿ ತೋರಿಸುತ್ತಾರೆ ಎನ್ನುವುದನ್ನು ತೋರಿಸಿಕೊಟ್ಟಿದೆ ಎಂದು ಹೇಳಿದರು.
ಇನ್ನು ಗಾಂಧಿ ಜಯಂತಿಯಂದು ಆರಂಭಿಸಿದ್ದ ಸ್ವಚ್ಛ ಭಾರತ್ ಯೋಜನೆ ಸಹ 10 ವರ್ಷ ಪೂರೈಸಿದ್ದು, ಅಭೂತಪೂರ್ವ ಯಶಸ್ಸು ಕಂಡಿದೆ. ಇದು ಮಹಾತ್ಮ ಗಾಂಧಿ ಅವರಿಗೆ ಸಲ್ಲಿಸಿದ ನಮನವಾಗಿದೆ.
ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್ನವರು: ಪ್ರತಿಪಕ್ಷ…
ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…
ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…
ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…
ಬೆಂಗಳೂರು: ಮುಡಾ ಕಚೇರಿ ಮೇಲೆ ಇ.ಡಿ. ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲಿಸಿದ್ದಾರೆ. ಕಚೇರಿಯಲ್ಲಿಯೇ ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ…
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…