ನವದೆಹಲಿ: ದೇಶದ ಜನರು ಸಕಾರಾತ್ಮಕ ವಿಚಾರಗಳು, ಸಾಧಕರ ಸ್ಪೂರ್ತಿದಾಯಕ ಕಥೆಗಳನ್ನು ಹೆಚ್ಚು ಹೆಚ್ಚು ಇಷ್ಟ ಪಡುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಮನ್ ಕಿ ಬಾತ್ ಕಾರ್ಯಕ್ರಮವು ಹತ್ತು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸಂತಸ ವ್ಯಕ್ತಪಡಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಮನ್ ಕಿ ಬಾತ್ ಕಾರ್ಯಕ್ರಮವು ಭಾರತದ ಚೈತನ್ಯವನ್ನು ಮತ್ತು ರಾಷ್ಟ್ರದ ಸಾಮೂಹಿಕ ಶಕ್ತಿಯನ್ನು ಪ್ರದರ್ಶಿಸುವ ವಿಶಿಷ್ಟ ವೇದಿಕೆಯಾಗಿದೆ.
ಜನರು ಯಾವಾಗಲೂ ನಕಾರಾತ್ಮಕ ಅಥವಾ ಅತಿರಂಜಿತ ವಿಷಯಗಳಿಗೆ ಮಾತ್ರ ಕಿವಿಗೊಡುತ್ತಾರೆ ಎಂಬ ಭಾವನೆಯಿದೆ. ಆದರೆ ಮನ್ ಕಿ ಬಾತ್ ಕಾರ್ಯಕ್ರಮ ಅದನ್ನು ಸುಳ್ಳು ಮಾಡಿ ಜನರು ಸಕಾರಾತ್ಮಕ ವಿಷಯಗಳಿಗೂ ಆಸಕ್ತಿ ತೋರಿಸುತ್ತಾರೆ ಎನ್ನುವುದನ್ನು ತೋರಿಸಿಕೊಟ್ಟಿದೆ ಎಂದು ಹೇಳಿದರು.
ಇನ್ನು ಗಾಂಧಿ ಜಯಂತಿಯಂದು ಆರಂಭಿಸಿದ್ದ ಸ್ವಚ್ಛ ಭಾರತ್ ಯೋಜನೆ ಸಹ 10 ವರ್ಷ ಪೂರೈಸಿದ್ದು, ಅಭೂತಪೂರ್ವ ಯಶಸ್ಸು ಕಂಡಿದೆ. ಇದು ಮಹಾತ್ಮ ಗಾಂಧಿ ಅವರಿಗೆ ಸಲ್ಲಿಸಿದ ನಮನವಾಗಿದೆ.
ಬೆಂಗಳೂರು : ಇಂದು ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನಾವಣೆಗೆ ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದೆ. ಪಶ್ಚಿಮ…
ಹುಣಸೂರು: ತಾಲ್ಲೂಕಿನ ಬಿಳಿಕೆರೆ ಗ್ರಾಮದ ಕೆರೆಯ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಒಡಿಶಾ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ನೀರು ಕುಡಿಯಲು ಬಂದು ಕೆಸರಿನಲ್ಲಿ ಸಿಲುಕಿಕೊಂಡು ನಿತ್ರಾಣಗೊಂಡಿದ್ದ ಹೆಣ್ಣಾನೆ ಚಿಕಿತ್ಸೆಗೆ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಳೆ ಮತದಾನ ನಡೆಯಲಿದೆ. ನಾಳೆ ಉತ್ತರ ಬಂಗಾಳದ ಎಲ್ಲಾ 152…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದಕ್ಕಾಗಿ ಚುನಾವಣಾ ಆಯೋಗವು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ…
ಬೆಂಗಳೂರು: ನಾಳೆ ಮಧ್ಯಾಹ್ನ 12 ಗಂಟೆಗೆ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.…