ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಂದು ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳವನ್ನು ಶ್ಲಾಘಿಸಿದರು.
ಪ್ರಧಾನ ಮಂತ್ರಿಯವರ ಮಾಸಿಕ ರೇಡಿಯೋ ಕಾರ್ಯಕ್ರಮವು ಪ್ರತಿ ತಿಂಗಳ ಕೊನೆಯ ಭಾನುವಾರದಂದು ಪ್ರಸಾರವಾಗುತ್ತದೆ. ಆದರೆ ಮುಂದಿನ ವಾರ ಭಾನುವಾರದಂದು ಗಣರಾಜ್ಯೋತ್ಸವ ಆಚರಣೆಯಿಂದಾಗಿ ಈ ತಿಂಗಳು ಮೂರನೇ ಭಾನುವಾರದಂದೇ ಕಾರ್ಯಕ್ರಮ ಪ್ರಸಾರವಾಯಿತು.
2025ರ ಮೊದಲ ಮನ್ ಕಿ ಬಾತ್ನಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಪ್ರಯಾಗ್ ರಾಜ್ನಲ್ಲಿ ನಡೆಯುತ್ತಿರುವ ಕುಂಭಮೇಳದ ಬಗ್ಗೆ ಸಂತಸ ವ್ಯಕ್ತಪಡಿಸಿದರು.
ಕುಂಭಮೇಳವನ್ನು ವಿವಿಧತೆಯಲ್ಲಿ ಏಕತೆಯ ಹಬ್ಬ ಎಂದು ಬಣ್ಣಿಸಿದರು. ಪ್ರಯಾಗ್ರಾಜ್ನಲ್ಲಿ ಮಹಾಕುಂಭ ಆರಂಭವಾಗಿದೆ. ಮರೆಯಲಾಗದ ಮಾನವೀಯತೆಯ ಸಮುದ್ರದಂತೆ ಕಾಣುತ್ತದೆ, ನಂಬಲಾರದ ದೃಶ್ಯಗಳು ಮತ್ತು ಸಮಾನತೆ ಮತ್ತು ಸಾಮರಸ್ಯದ ಅಸಾಧಾರಣ ಸಂಗಮವಾಗಿದೆ. ಈ ಬಾರಿ ಕುಂಭದಲ್ಲಿ ಅನೇಕ ದೈವಿಕ ಜೋಡಣೆ ಕೂಡ ಸೇರುತ್ತಿದೆ. ಈ ಕುಂಭೋತ್ಸವವು ವಿವಿಧತೆಯಲ್ಲಿ ಏಕತೆಯ ಹಬ್ಬವನ್ನು ಆಚರಿಸುತ್ತದೆ ಎಂದು ಹೇಳಿದರು.
ಇನ್ನು ಜನವರಿ.23ರಂದು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನವನ್ನು ಪರಾಕ್ರಮ್ ದಿವಸ್ ಎಂದು ಆಚರಿಸುವ ಮುನ್ನ ಪ್ರಧಾನಿ ಮೋದಿ ಅವರು ಸುಭಾಷ್ ಚಂದ್ರ ಬೋಸ್ ಅವರ ಶೌರ್ಯವನ್ನು ಸ್ಮರಿಸಿದರು. ಯುವಕರು ಅವರ ಬಗ್ಗೆ ಇನ್ನಷ್ಟು ತಿಳಿದುಕೊಳ್ಳಬೇಕು. ಸ್ವಾತಂತ್ರ್ಯ ಹೋರಾಟಗಾರರಿಂದ ಸ್ಫೂರ್ತಿ ಪಡೆಯಬೇಕೆಂದು ಒತ್ತಾಯಿಸಿದರು.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…