ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಂದು ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳವನ್ನು ಶ್ಲಾಘಿಸಿದರು.
ಪ್ರಧಾನ ಮಂತ್ರಿಯವರ ಮಾಸಿಕ ರೇಡಿಯೋ ಕಾರ್ಯಕ್ರಮವು ಪ್ರತಿ ತಿಂಗಳ ಕೊನೆಯ ಭಾನುವಾರದಂದು ಪ್ರಸಾರವಾಗುತ್ತದೆ. ಆದರೆ ಮುಂದಿನ ವಾರ ಭಾನುವಾರದಂದು ಗಣರಾಜ್ಯೋತ್ಸವ ಆಚರಣೆಯಿಂದಾಗಿ ಈ ತಿಂಗಳು ಮೂರನೇ ಭಾನುವಾರದಂದೇ ಕಾರ್ಯಕ್ರಮ ಪ್ರಸಾರವಾಯಿತು.
2025ರ ಮೊದಲ ಮನ್ ಕಿ ಬಾತ್ನಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಪ್ರಯಾಗ್ ರಾಜ್ನಲ್ಲಿ ನಡೆಯುತ್ತಿರುವ ಕುಂಭಮೇಳದ ಬಗ್ಗೆ ಸಂತಸ ವ್ಯಕ್ತಪಡಿಸಿದರು.
ಕುಂಭಮೇಳವನ್ನು ವಿವಿಧತೆಯಲ್ಲಿ ಏಕತೆಯ ಹಬ್ಬ ಎಂದು ಬಣ್ಣಿಸಿದರು. ಪ್ರಯಾಗ್ರಾಜ್ನಲ್ಲಿ ಮಹಾಕುಂಭ ಆರಂಭವಾಗಿದೆ. ಮರೆಯಲಾಗದ ಮಾನವೀಯತೆಯ ಸಮುದ್ರದಂತೆ ಕಾಣುತ್ತದೆ, ನಂಬಲಾರದ ದೃಶ್ಯಗಳು ಮತ್ತು ಸಮಾನತೆ ಮತ್ತು ಸಾಮರಸ್ಯದ ಅಸಾಧಾರಣ ಸಂಗಮವಾಗಿದೆ. ಈ ಬಾರಿ ಕುಂಭದಲ್ಲಿ ಅನೇಕ ದೈವಿಕ ಜೋಡಣೆ ಕೂಡ ಸೇರುತ್ತಿದೆ. ಈ ಕುಂಭೋತ್ಸವವು ವಿವಿಧತೆಯಲ್ಲಿ ಏಕತೆಯ ಹಬ್ಬವನ್ನು ಆಚರಿಸುತ್ತದೆ ಎಂದು ಹೇಳಿದರು.
ಇನ್ನು ಜನವರಿ.23ರಂದು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನವನ್ನು ಪರಾಕ್ರಮ್ ದಿವಸ್ ಎಂದು ಆಚರಿಸುವ ಮುನ್ನ ಪ್ರಧಾನಿ ಮೋದಿ ಅವರು ಸುಭಾಷ್ ಚಂದ್ರ ಬೋಸ್ ಅವರ ಶೌರ್ಯವನ್ನು ಸ್ಮರಿಸಿದರು. ಯುವಕರು ಅವರ ಬಗ್ಗೆ ಇನ್ನಷ್ಟು ತಿಳಿದುಕೊಳ್ಳಬೇಕು. ಸ್ವಾತಂತ್ರ್ಯ ಹೋರಾಟಗಾರರಿಂದ ಸ್ಫೂರ್ತಿ ಪಡೆಯಬೇಕೆಂದು ಒತ್ತಾಯಿಸಿದರು.
ದುಬಾರೆಯಲ್ಲಿ ಆನೆ ಕಾದಾಟದ ವೇಳೆ ಮಹಿಳೆ ಸಾವು : ಈಶ್ವರ ಖಂಡ್ವೆ ಸಂತಾಪ ಬೆಂಗಳೂರು : ಕೊಡಗು ಜಿಲ್ಲೆ ದುಬಾರೆ…
ಕೊಡಗು: ಎಲಿಫೆಂಟ್ ಬಾತಿಂಗ್ ವೇಳೆ ಆನೆಯ ಅಡಿಗೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದುಬಾರೆ ಸಾಕಾನೆ ಶಿಬಿರದಲ್ಲಿ ನಡೆದಿದೆ. ಚೆನ್ನೈ…
ಕಾಂಗೋ: ಆಫ್ರಿಕಾದಲ್ಲಿ ಎಬೋಲಾಕ್ಕೆ 88 ಮಂದಿ ಬಲಿಯಾಗಿದ್ದು, WHO ತುರ್ತು ಪರಿಸ್ಥಿತಿ ಘೋಷಣೆ ಮಾಡಿದೆ. ಆಫ್ರಿಕಾದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ…
ಮೈಸೂರು: ಪರಪುರುಷನ ಸಂಗ ಮಾಡಿದ್ದ ತಾಯಿಯನ್ನು ಮಗ ಕೊಲೆ ಮಾಡಿರುವ ಘಟನೆ ಮೈಸೂರು ತಾಲ್ಲೂಕಿನ ಮಾದಹಳ್ಳಿ ಗ್ರಾಮದಲ್ಲಿ ನಡೆದಿದೆ. ಸುಧಾ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಲಿಮೇಡುವಿನಲ್ಲಿರುವ ಸೇಂಟ್ ಮೇರಿಸ್…
ಸಿದ್ದಾಪುರ: ಸಿದ್ದಾಪುರ ವ್ಯಾಪ್ತಿಯ ಕೂಡುಗದ್ದೆ ಗ್ರಾಮದಲ್ಲಿ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ. ಮೃತನನ್ನು ಕೂಡುಗದ್ದೆ ನಿವಾಸಿ…