ನವದೆಹಲಿ: ದೆಹಲಿಗೆ ಅಪ್ಪಳಿಸಿದ ಅನಾಹುತ ಎಂದು ಹೇಳುವ ಮೂಲಕ ಎಎಪಿ ಸರ್ಕಾರದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ.
ರೋಹಿಣಿ ಪ್ರದೇಶದಲ್ಲಿ ರ್ಯಾಲಿ ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಅಧಿಕಾರಕ್ಕೆ ಬಂದರೆ ಭ್ರಷ್ಟಾಚಾರವನ್ನು ತೊಡೆದು ಹಾಕುವ ಮೂಲಕ ದೆಹಲಿ ಅಭಿವೃದ್ದಿಗೆ ಒತ್ತು ನೀಡಲಿದೆ. ಜೊತೆಗೆ ಯಾವುದೇ ಜನ ಕಲ್ಯಾಣ ಕಾರ್ಯಕ್ರಮಗಳನ್ನು ಸ್ಥಗಿತಗೊಳಿಸುವುದಿಲ್ಲ ಎಂದು ಹೇಳಿದರು.
ಕಳೆದ ಹತ್ತು ವರ್ಷಗಳಿಂದ ಎಎಪಿ ಸರ್ಕಾರವು ದೆಹಲಿಯನ್ನು ಅಭಿವೃದ್ದಿ ಮಾಡಿಲ್ಲ. ʼಡಬಲ್ ಇಂಜಿನ್ʼ ಸರ್ಕಾರದಿಂದ ಅಭಿವೃದ್ಧಿಯ ವೇಗ ಹೆಚ್ಚಲಿದೆ. ಆದ್ದರಿಂದ ದೆಹಲಿಯಲ್ಲಿ ಬಿಜೆಪಿ ಗೆಲ್ಲಿಸುವ ಮೂಲಕ ರಾಷ್ಟ್ರ ರಾಜಧಾನಿಯ ಅಭಿವೃದ್ಧಿಗೆ ಅವಕಾಶ ಕಲ್ಪಿಸಿ ಎಂದರು.
ಎಎಪಿ ಸರ್ಕಾರವನ್ನು ದೆಹಲಿಯಲ್ಲಿ ಕಿತ್ತೆಸೆದು ಎಲ್ಲಾ ಕ್ಷೇತ್ರಗಳಲ್ಲಿಯೂ ಅಭಿವೃದ್ದಿ ಸಾಧಿಸಲು ಬಿಜೆಪಿ ಶ್ರಮಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು, ಉತ್ತರ ಪ್ರದೇಶದ ಸಾಹಿಬಾಬಾದ್ನಿಂದ ದೆಹಲಿಯ ನ್ಯೂ ಆಶೋಕ್ ನಗರದವರೆಗಿನ 13 ಕಿ.ಮೀ ದೂರದ ದೆಹಲಿ-ಮೀರತ್ ಪ್ರಾದೇಶಿಕ ರಾಪಿಡ್ ಟ್ರಾನ್ಸಿಟ್ ಸಿಸ್ಟಂ (ಆರ್ಆರ್ಟಿಎಸ್) ಕಾರಿಡಾರ್ ಉದ್ಘಾಟಿಸಿದರು.
ಗೋಲ್ಡ್ ಕೋಸ್ಟ್ (ಆಸ್ಟ್ರೇಲಿಯಾ) : ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಏಷ್ಯಾ ಮಹಿಳಾ ಫುಟ್ಬಾಲ್ ಕಪ್ 2026ನಲ್ಲಿ ಭಾಗವಹಿಸಿದ್ದ ಇರಾನ್ ರಾಷ್ಟ್ರೀಯ ಮಹಿಳಾ…
ಹೊಸದಿಲ್ಲಿ : ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್ ದಾಳಿಗಳು ಮತ್ತು ಇರಾನ್ಗೆ ಹೊಸ ಸುಪ್ರೀಂ ಲೀಡರ್ ನೇಮಕದ ನಂತರ ಮಧ್ಯಪ್ರಾಚ್ಯದಲ್ಲಿ ತೀವ್ರ…
ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್-ಅಮೆರಿಕಾ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ವಾಯುಪ್ರದೇಶದಲ್ಲಿ ತುರ್ತು ನಿರ್ಬಂಧಗಳು ಜಾರಿಯಾಗಿರುವುದರಿಂದ ದೆಹಲಿಯಿಂದ ಮ್ಯಾಂಚೆಸ್ಟರ್ಗೆ ಹೋಗುತಿದ್ದ ಇಂಡಿಗೊ…
ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಈ ಬಾರಿಯ ಆರ್ಥಿಕ ವರ್ಷದ ಬಜೆಟ್ನಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ತೀವ್ರ…
ಮೈಸೂರು : ಮನೆಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ 24 ಅಪರಾಧ ಪ್ರಕರಣಗಳನ್ನು…
ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ…