ನವದೆಹಲಿ: ದೆಹಲಿಗೆ ಅಪ್ಪಳಿಸಿದ ಅನಾಹುತ ಎಂದು ಹೇಳುವ ಮೂಲಕ ಎಎಪಿ ಸರ್ಕಾರದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ.
ರೋಹಿಣಿ ಪ್ರದೇಶದಲ್ಲಿ ರ್ಯಾಲಿ ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಅಧಿಕಾರಕ್ಕೆ ಬಂದರೆ ಭ್ರಷ್ಟಾಚಾರವನ್ನು ತೊಡೆದು ಹಾಕುವ ಮೂಲಕ ದೆಹಲಿ ಅಭಿವೃದ್ದಿಗೆ ಒತ್ತು ನೀಡಲಿದೆ. ಜೊತೆಗೆ ಯಾವುದೇ ಜನ ಕಲ್ಯಾಣ ಕಾರ್ಯಕ್ರಮಗಳನ್ನು ಸ್ಥಗಿತಗೊಳಿಸುವುದಿಲ್ಲ ಎಂದು ಹೇಳಿದರು.
ಕಳೆದ ಹತ್ತು ವರ್ಷಗಳಿಂದ ಎಎಪಿ ಸರ್ಕಾರವು ದೆಹಲಿಯನ್ನು ಅಭಿವೃದ್ದಿ ಮಾಡಿಲ್ಲ. ʼಡಬಲ್ ಇಂಜಿನ್ʼ ಸರ್ಕಾರದಿಂದ ಅಭಿವೃದ್ಧಿಯ ವೇಗ ಹೆಚ್ಚಲಿದೆ. ಆದ್ದರಿಂದ ದೆಹಲಿಯಲ್ಲಿ ಬಿಜೆಪಿ ಗೆಲ್ಲಿಸುವ ಮೂಲಕ ರಾಷ್ಟ್ರ ರಾಜಧಾನಿಯ ಅಭಿವೃದ್ಧಿಗೆ ಅವಕಾಶ ಕಲ್ಪಿಸಿ ಎಂದರು.
ಎಎಪಿ ಸರ್ಕಾರವನ್ನು ದೆಹಲಿಯಲ್ಲಿ ಕಿತ್ತೆಸೆದು ಎಲ್ಲಾ ಕ್ಷೇತ್ರಗಳಲ್ಲಿಯೂ ಅಭಿವೃದ್ದಿ ಸಾಧಿಸಲು ಬಿಜೆಪಿ ಶ್ರಮಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು, ಉತ್ತರ ಪ್ರದೇಶದ ಸಾಹಿಬಾಬಾದ್ನಿಂದ ದೆಹಲಿಯ ನ್ಯೂ ಆಶೋಕ್ ನಗರದವರೆಗಿನ 13 ಕಿ.ಮೀ ದೂರದ ದೆಹಲಿ-ಮೀರತ್ ಪ್ರಾದೇಶಿಕ ರಾಪಿಡ್ ಟ್ರಾನ್ಸಿಟ್ ಸಿಸ್ಟಂ (ಆರ್ಆರ್ಟಿಎಸ್) ಕಾರಿಡಾರ್ ಉದ್ಘಾಟಿಸಿದರು.
ಜಕಾರ್ತ: ಇಂಡೋನೇಷ್ಯಾದ ಫ್ಲೋರ್ಸ್ ದ್ವೀಪದಲ್ಲಿ ಶನಿವಾರ ಮುಂಜಾನೆ 7.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಮೃತರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ.…
ಅಯೋಧ್ಯೆ: ಅಯೋಧ್ಯೆ ರಾಮಮಂದಿರದ ಅರ್ಚಕರಿಗೆ ಹಳದಿ ರೇಷ್ಮೆ ಧೋತಿಯನ್ನು ಹೊಸ ಡ್ರೆಸ್ ಕೋಡ್ ಆಗಿ ಜಾರಿಗೆ ತರಲಾಗಿದೆ. ರಾಮನಂದಿ ಸಂಪ್ರದಾಯಕ್ಕೆ…
ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…
ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…
ಮೈಸೂರು: ಮೂವರು ಬೇಟೆಗಾರರ ಎನ್ಕೌಂಟರ್ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್ ಬೋಸ್ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…
ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…