ನವದೆಹಲಿ: ಕಾಂಗ್ರೆಸ್ ಪಕ್ಷ ಎಂದಿಗೂ ಜನರ ಸಮಸ್ಯೆಗಳ ಬಗ್ಗೆ ಮಾತನಾಡುವುದು ಕಡಿಮೆ ಎಂದು ಪ್ರಧಾನಿ ನರೇಂದ್ರ ಮೋದಿ ಕಿಡಿಕಾರಿದ್ದಾರೆ.
ಈ ಬಗ್ಗೆ ದೆಹಲಿಯಲ್ಲಿಂದು ಮಾತನಾಡಿದ ಅವರು, ಇಂದಿನಿಂದ ಆರಂಭವಾಗಲಿರುವ ಸಂಸತ್ ಚಳಿಗಾಲದ ಅಧಿವೇಶನವನ್ನು ಅತ್ಯಂತ ಸುಗಮವಾಗಿ ನಡೆಸಬೇಕು ಎಂದು ವಿಪಕ್ಷಗಳಿಗೆ ಮನವಿ ಮಾಡಿದರು.
75ನೇ ವರ್ಷದ ಸಂವಿಧಾನ ದಿನಾಚರಣೆಯ ಸಂದರ್ಭದಲ್ಲಿ ಅಧಿವೇಶನ ನಡೆಯುತ್ತಿದೆ. ಎಲ್ಲಾ ವಿಚಾರಗಳ ಕುರಿತು ಚರ್ಚೆಗೆ ಅವಕಾಶ ಕೊಡುತ್ತೇವೆ. ಜನರ ಸಮಸ್ಯೆಗಳ ಬಗ್ಗೆ ಪ್ರಾಮಾಣಿಕವಾಗಿ ಚರ್ಚೆ ನಡೆಯಬೇಕಿದೆ. ಕಾಂಗ್ರೆಸ್ ಪಕ್ಷ ಎಂದಿಗೂ ಜನರ ಸಮಸ್ಯೆಗಳ ಬಗ್ಗೆ ಮಾತನಾಡುವುದು ಕಡಿಮೆ. ಹೀಗಾಗಿ ಕಾಂಗ್ರೆಸ್ ಪಕ್ಷವನ್ನು ಜನ ತಿರಸ್ಕಾರ ಮಾಡಿದ್ದಾರೆ ಎಂದು ಲೇವಡಿ ಮಾಡಿದರು.
ಇನ್ನು ದೇಶದ ಜನ ಎಲ್ಲವನ್ನು ಅರ್ಥಮಾಡಿಕೊಂಡಿದ್ದಾರೆ. ವಿಪಕ್ಷಗಳಿಂದ ಕಲಾಪದ ಸಮಯ ಹಾಳು ಮಾಡುವ ಕೆಲಸ ಆಗುತ್ತಿದೆ. ಜನರ ನಿರೀಕ್ಷೆಯಂತೆ ವಿಪಕ್ಷಗಳು ನಡೆದುಕೊಳ್ಳುತ್ತಿಲ್ಲ ಎಂದು ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು.
ಸಾರ್ಥಕ ಬದುಕಿನ ಸಾಧಕ! ಗಹನ ಆರ್ಥಿಕ ಚಿಂತನೆಗಳನು ಎಳೆಎಳೆಯಾಗಿ ಬಿಡಿಸಿ ನೀಡಿದ ನಾಡ ಅಪ್ಪಟ ಆರ್ಥಿಕ ಚಿಂತಕ! ಶಿಷ್ಯರ ಮನದ…
ತೆಲಂಗಾಣದಲ್ಲಿ ೩೦,೦೦೦ ಕೆ.ಜಿ. ನಕಲಿ ಮಸಾಲೆ ಜಪ್ತಿಯಾಗಿರುವುದು ಕೇವಲ ಎಚ್ಚರಿಕೆಯಲ್ಲ ನಮಗಿದು ನೇರ ಬೆದರಿಕೆ! ಮಸಾಲೆ, ಹಾಲು, ಎಣ್ಣೆ ಹಾಗೂ…
ಮೈಸೂರು ಮಹಾನಗರ ಪಾಲಿಕೆಯು ಹೊರಾಂಗಣ ಸಂಗೀತ ವಾದ್ಯಗಳ ಜೋಡಣೆ ಎಂಬ ಹೆಸರಿನಲ್ಲಿ ಉದ್ಯಾನವನಗಳಲ್ಲಿ ಸಂಗೀತ ವಾದ್ಯಗಳನ್ನು ಜೋಡಿಸುವ ವಿನೂತನ ಪ್ರಯೋಗವನ್ನು…
ಶಿವಾಜಿ ಗಣೇಶನ್ ಅವರ ವಾರದ ಅಂಕಣ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ದೇಶದಲ್ಲಿ ದಿಢೀರನೆ ಹುಟ್ಟಿಕೊಂಡ ಕಾಕ್ರೋಚ್ ಜನತಾ…
ಬಿ.ಎಸ್.ವಿನಯ್ ಇಲ್ಲಿಯವರೆಗೆ ನಮ್ಮಂತಹ ಅಂಕಲ್ -ಆಂಟಿಗಳು ಜೆನ್ ಝೀಗಳ ಬಗ್ಗೆ ಒಳ್ಳೆಯ ಮಾತಾಡಿದ್ದಕ್ಕಿಂತ ಮೂಗು ಮುರಿದದ್ದೇ ಹೆಚ್ಚು. ಈ ಹುಡುಗರಿಗೆ…
ಸ್ವಾಮಿ ಪೊನ್ನಾಚಿ ನಾನು ಸಾಹಿತ್ಯವನ್ನು ಗಂಭೀರವಾಗಿ ಓದಿಕೊಳ್ಳುವ ಕಾಲಕ್ಕೆ ಹೆಚ್ಚು ಕಡಿಮೆ ಚಳವಳಿಗಳ ಕಾವು ನಿಂತೇ ಹೋಗಿತ್ತು. ಜೋರು ಗಾಳಿ…