ನವದೆಹಲಿ : ನವೆಂಬರ್ ೨೪ ರಂದು ನಾವು ಸಂವಿಧಾನ ದಿನ ಆಚರಿಸಲು ನಿರ್ಧರಿಸಿದ್ದಾಗ ಈಗ ಸಂವಿಧಾನದ ಪುಸ್ತಕ ಹಿಡಿದುಕೊಂಡು ಓಡಾಡುತ್ತಿರುವವರು ಅದನ್ನ ವಿರೋಧಿಸಿದ್ದರು ಎಂದು ರಾಜ್ಯ ಸಭೆಯಲ್ಲೂ ವಿಪಕ್ಷಗಳ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ.
ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ವಂದನಾ ನಿರ್ಣಯದ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿ ಪ್ರಧಾನಿ, ಸಂವಿಧಾನದ ಆಶಯ ನಮಗೆ ಅಮೂಲ್ಯ. ಸಂವಿಧಾನದ ಕಾರಣದಿಂದ ನನಗೆ ಇಲ್ಲಿಗೆ ಬರಲು ಅವಕಾಶ ಸಿಕ್ಕಿತು. ಸಂವಿಧಾನವು ನಮಗೆ ಮಾರ್ಗದರ್ಶಿಯಾಗಿ ಕಾರ್ಯನಿರ್ವಹಿಸುತ್ತದೆ. ನಮ್ಮ ಸರ್ಕಾರ ೧೦ ವರ್ಷ ಪೂರೈಸಿದೆ. ಇನ್ನೂ ೨೦ ವರ್ಷ ಪೂರೈಸಬೇಕಿದೆ ಎಂದರು
ಅಲ್ಲದೆ ನಿರಂತರ ಸೇವೆಯೊಂದಿಗೆ ಮಾಡಿದ ಕೆಲಸವನ್ನು ಸಾರ್ವಜನಿಕರು ಪೂರ್ಣ ಹೃದಯದಿಂದ ಬೆಂಬಲಿಸಿದ್ದಾರೆ.ದೇಶದ ಜನತೆ ಅಪಪ್ರಚಾರವನ್ನು ಸೋಲಿಸಿದ್ದಾರೆ. ವಿಶ್ವಾಸ ರಾಜಕಾರಣಕ್ಕೆ ಗೆಲುವಿನ ಮುದ್ರೆ ಹಾಕಿ ಜನತೆ ನಮಗೆ ಆಶೀರ್ವಾದ ಮಾಡಿದ್ದಾರೆ. ಆದರೆ ಪ್ರತಿಪಕ್ಷಗಳು ದೇಶದ ಜನರ ನಿರ್ಧಾರಕ್ಕೆ ಕಪ್ಪುಚುಕ್ಕೆ ತರುವ ಪ್ರಯತ್ನ ಮಾಡುತ್ತಿದೆ ಎಂದು ಆರೋಪಿಸಿದರು.
ಈ ವೇಳೆ ವಿರೋಧ ಪಕ್ಷಗಳು ಪ್ರಧಾನಿ ಭಾಷಣಕ್ಕೆ ಅಡ್ಡಿಪಡಿಸಲು ಪ್ರಯತ್ನಿಸಿದರು. ರಾಜ್ಯಸಭೆಯನ್ನ ಮುಂದೂಡಿ, ಸುಳ್ಳು ಹೇಳೋದನ್ನ ನಿಲ್ಲಿಸಿ ಎಂದು ಒತ್ತಾಯಿಸಿ ರಾಜ್ಯಸಭೆಯಿಂದ ಹೊರನಡೆದರು.
ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…
ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…
ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…
ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…
ಮೋಹಿತ್ ಎಸ್ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…
ರೇಣುಕಾ ನಿಡಗುಂದಿ ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…