ದೇಶ- ವಿದೇಶ

10 ಲಕ್ಷ ಮಂದಿಗೆ ಬೃಹತ್‌ ಉದ್ಯೋಗ ಮೇಳ 22 ರಂದು ಚಾಲನೆ :ಪ್ರಧಾನಿ ಮೋದಿ

ನವದೆಹಲಿ :10 ಲಕ್ಷ ಮಂದಿಗೆ ಉದ್ಯೋಗ ನೀಡುವ ಬೃಹತ್ ಉದ್ಯೋಗ ಮೇಳಕ್ಕೆ ಪ್ರಧಾನಿ ನರೇಂದ್ರ ಮೋದಿ ಅಕ್ಟೋಬರ್ 22ರಂದು ವಿಡಿಯೊ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಲಿದ್ದಾರೆ.

ಯುವಕರಿಗೆ ಉದ್ಯೋಗ ನೀಡುವುದರ ಜೊತೆಗೆ ನಾಗರಿಕರ ಕಲ್ಯಾಣವನ್ನು ಖಾತರಿಪಡಿಸುವ ಪ್ರಧಾನ ಮಂತ್ರಿಗಳ ಆಶಯದ ನಿಟ್ಟಿನಲ್ಲಿ ಇದು ಪೂರಕ ಕಾರ್ಯಕ್ರಮವಾಗಿದೆ. ಮೋದಿ ಅವರ ನಿರ್ದೇಶನದ ಮೇರೆಗೆ ಎಲ್ಲ ಇಲಾಖೆಗಳ ಸಚಿವರು ಖಾಲಿ ಇರುವ ಹುದ್ದೆಗೆಳ ನೇಮಕಾತಿಗಾಗಿ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ ಎಂದು ಪಿಎಂಒ ಹೇಳಿದೆ.

ದೇಶದಾದ್ಯಂತ 38 ಸಚಿವಾಲಯಗಳ ಅಥವಾ ಇಲಾಖೆಗಳಿಗಾಗಿ ದೇಶದಾದ್ಯಂತ ನೇಮಕಾತಿ ನಡೆಸಲಾಗುತ್ತಿದೆ. ಸರ್ಕಾರದ ಗ್ರೂಪ್ ಎ ಶ್ರೇಣಿಯಿಂದ ಹುದ್ದೆಗಳಿಂದ ತೊಡಗಿ ಗ್ರೂಪ್ ಸಿ ಶ್ರೇಣಿಯ ಹುದ್ದೆಗಳ ವರೆಗೆ ನೇಮಕಾತಿ ನಡೆಯಲಿದೆ. ಕೇಂದ್ರ ಸಶಸ್ತ್ರ ಪಡೆ ಸಿಬ್ಬಂದಿ, ಸಬ್-ಇನ್‌ಸ್ಪೆಕ್ಟರ್‌ಗಳು, ಕಾನ್‌ಸ್ಟೆಬಲ್‌ಗಳು, ಎಲ್‌ಡಿಸಿ, ಸ್ಟೆನೋ, ಪಿಎ, ಆದಾಯ ತೆರಿಗೆ ಇನ್ಸ್‌ಪೆಕ್ಟರ್‌ಗಳು ಮತ್ತು ಎಂಟಿಎಸ್ ಕೂಡ ನೇಮಕವಾಗುತ್ತಿರುವ ಹುದ್ದೆಗಳಲ್ಲಿ ಒಳಗೊಂಡಿವೆ ಎಂದು ಪಿಎಂಒ ಪ್ರಕಟಣೆಯಲ್ಲಿ ಹೇಳಲಾಗಿದೆ.

ಪ್ರತಿಪಕ್ಷಗಳು ಕೇಂದ್ರ ಸರ್ಕಾರದ ವಿರುದ್ಧ ನಿರುದ್ಯೋಗಕ್ಕೆ ಸಂಬಂಧಿಸಿ ಸತತವಾಗಿ ಟೀಕೆಗಳನ್ನು ಮಾಡುತ್ತಲೇ ಇವೆ. ಕೇಂದ್ರದಲ್ಲಿ ಮೋದಿ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಯುವಕರು ನಿರುದ್ಯೋಗಿಗಳಾಗಿದ್ದಾರೆ. ಬಡವರಿಗೆ ಜೀವನ ಕಷ್ಟಕರವಾಗಿ ಪರಿಣಮಿಸಿದೆ. ಉದ್ಯೋಗ ಸೃಷ್ಟಿ ನಿಟ್ಟಿನಲ್ಲಿ ಬಿಜೆಪಿ ಸರ್ಕಾರ ಏನೂ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ ಎಂದು ಕಾಂಗ್ರೆಸ್, ಎಎಪಿ ಸೇರಿದಂತೆ ಪ್ರತಿಪಕ್ಷಗಳು ಹಲವು ಬಾರಿ ವಾಗ್ದಾಳಿ ನಡೆಸಿವೆ. ಈ ಎಲ್ಲ ರಾಜಕೀಯ ವಿದ್ಯಮಾನಗಳ ನಡುವೆಯೇ ಬೃಹತ್ ಉದ್ಯೋಗ ಮೇಳಕ್ಕೆ ಪ್ರಧಾನಿ ಚಾಲನೆ ನೀಡಲಿದ್ದಾರೆ.

andolana

Recent Posts

ಓದುಗರ ಪತ್ರ: ವಿದ್ಯುತ್ ದರ ಏರಿಕೆ ಜನಸಾಮಾನ್ಯರಿಗೆ ಶಾಕ್

ರಾಜ್ಯದ ಐದು ಎಸ್ಕಾಂಗಳು ಸುಮಾರು ರೂ.೪,೫೦೦ ಕೋಟಿ ನಷ್ಟದ ನೆಪವೊಡ್ಡಿ ಪ್ರತಿ ಯೂನಿಟ್‌ಗೆ ೯೯ ಪೈಸೆಯವರೆಗೆ ದರ ಏರಿಕೆಗೆ ಪ್ರಸ್ತಾವನೆ…

17 mins ago

ಓದುಗರ ಪತ್ರ: ಬೃಂದಾವನ: ಟಿಕೆಟ್ ಹಣ ವಾಪಸ್ ನೀಡಿ

ವಿಶ್ವವಿಖ್ಯಾತ ಕೆ ಆರ್‌ಎಸ್‌ನ ಬೃಂದಾವನ ಗಾರ್ಡನ್‌ನಲ್ಲಿ ಫೆ.೨೨ರ ಸಂಜೆ ಸಂಗೀತ ನೃತ್ಯ ಕಾರಂಜಿ ತಾಂತ್ರಿಕ ಕಾರಣದಿಂದ ಚಾಲನೆಗೊಳ್ಳದ ಕಾರಣ ಅಲ್ಲಿ…

19 mins ago

ಓದುಗರ ಪತ್ರ: ಇರ್ವಿನ್ ರಸ್ತೆ ಫುಟ್‌ಪಾತ್ ಒತ್ತುವರಿ ತೆರವುಗೊಳಿಸಿ

ಮೈಸೂರು ನಗರದ ಇರ್ವಿನ್ ರಸ್ತೆಯಲ್ಲಿ ಸಾಲು-ಸಾಲಾಗಿ ಫರ್ನಿಚರ್ಸ್ ಅಂಗಡಿಯವರು ತಮ್ಮ ಅಂಗಡಿಯ ಫರ್ನಿಚರ್ಸ್‌ಗಳನ್ನು ಫುಟ್‌ಪಾತ್‌ಗಳ ಮೇಲೆ ಜೋಡಿಸಿರುವುದರಿಂದ ಪಾದಚಾರಿಗಳಿಗೆ ತೀವ್ರ…

24 mins ago

ಹೂ ಮಳೆಗಾಗಿ ಕಾದಿರುವ ಕಾಫಿ ಬೆಳೆಗಾರರು

ನವೀನ್ ಡಿಸೋಜ ಕೆಲವೆಡೆ ಸ್ಪಿಂಕ್ಲರ್ ಮೊರೆ ಹೋದ ಕೃಷಿಕರು; ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ…

3 hours ago

ಫೆ.26, 27ಕ್ಕೆ ಕಡಬೂರಿನಲ್ಲಿ ಶಿವ, ಗಣೇಶ ದೇವಸ್ಥಾನ ಲೋಕಾರ್ಪಣೆ

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಕಡಬೂರು ಗ್ರಾಮದಲ್ಲಿ ಫೆ.೨೬ ಮತ್ತು ೨೭ರಂದು ನೂತನವಾಗಿ ನಿರ್ಮಾಣವಾಗಿರುವ ಶಿವ ಮತ್ತು ಗಣೇಶ ದೇವಾಲಯದ…

3 hours ago

ಅವ್ಯವಸ್ಥೆಯಿಂದ ಕೂಡಿದ ಚರಂಡಿ ಕಾಮಗಾರಿ: ಆರೋಪ

ಮಂಜು ಕೋಟೆ ಕೋಟೆ: ಅಧಿಕಾರಿಗಳು, ಗುತ್ತಿಗೆದಾರರ ವಿರುದ್ಧ ಸಾರ್ವಜನಿಕರ ಆಕ್ರೋಶ ಎಚ್.ಡಿ.ಕೋಟೆ: ಅಧಿಕಾರಿಗಳ ಬೇಜವಾಬ್ದಾರಿ, ಗುತ್ತಿಗೆದಾರರ ನಿರ್ಲಕ್ಷ್ಯದಿಂದ ಲಕ್ಷಾಂತರ ರೂ.…

3 hours ago