ನವದೆಹಲಿ :10 ಲಕ್ಷ ಮಂದಿಗೆ ಉದ್ಯೋಗ ನೀಡುವ ಬೃಹತ್ ಉದ್ಯೋಗ ಮೇಳಕ್ಕೆ ಪ್ರಧಾನಿ ನರೇಂದ್ರ ಮೋದಿ ಅಕ್ಟೋಬರ್ 22ರಂದು ವಿಡಿಯೊ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಲಿದ್ದಾರೆ.
ಯುವಕರಿಗೆ ಉದ್ಯೋಗ ನೀಡುವುದರ ಜೊತೆಗೆ ನಾಗರಿಕರ ಕಲ್ಯಾಣವನ್ನು ಖಾತರಿಪಡಿಸುವ ಪ್ರಧಾನ ಮಂತ್ರಿಗಳ ಆಶಯದ ನಿಟ್ಟಿನಲ್ಲಿ ಇದು ಪೂರಕ ಕಾರ್ಯಕ್ರಮವಾಗಿದೆ. ಮೋದಿ ಅವರ ನಿರ್ದೇಶನದ ಮೇರೆಗೆ ಎಲ್ಲ ಇಲಾಖೆಗಳ ಸಚಿವರು ಖಾಲಿ ಇರುವ ಹುದ್ದೆಗೆಳ ನೇಮಕಾತಿಗಾಗಿ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ ಎಂದು ಪಿಎಂಒ ಹೇಳಿದೆ.
ದೇಶದಾದ್ಯಂತ 38 ಸಚಿವಾಲಯಗಳ ಅಥವಾ ಇಲಾಖೆಗಳಿಗಾಗಿ ದೇಶದಾದ್ಯಂತ ನೇಮಕಾತಿ ನಡೆಸಲಾಗುತ್ತಿದೆ. ಸರ್ಕಾರದ ಗ್ರೂಪ್ ಎ ಶ್ರೇಣಿಯಿಂದ ಹುದ್ದೆಗಳಿಂದ ತೊಡಗಿ ಗ್ರೂಪ್ ಸಿ ಶ್ರೇಣಿಯ ಹುದ್ದೆಗಳ ವರೆಗೆ ನೇಮಕಾತಿ ನಡೆಯಲಿದೆ. ಕೇಂದ್ರ ಸಶಸ್ತ್ರ ಪಡೆ ಸಿಬ್ಬಂದಿ, ಸಬ್-ಇನ್ಸ್ಪೆಕ್ಟರ್ಗಳು, ಕಾನ್ಸ್ಟೆಬಲ್ಗಳು, ಎಲ್ಡಿಸಿ, ಸ್ಟೆನೋ, ಪಿಎ, ಆದಾಯ ತೆರಿಗೆ ಇನ್ಸ್ಪೆಕ್ಟರ್ಗಳು ಮತ್ತು ಎಂಟಿಎಸ್ ಕೂಡ ನೇಮಕವಾಗುತ್ತಿರುವ ಹುದ್ದೆಗಳಲ್ಲಿ ಒಳಗೊಂಡಿವೆ ಎಂದು ಪಿಎಂಒ ಪ್ರಕಟಣೆಯಲ್ಲಿ ಹೇಳಲಾಗಿದೆ.
ಪ್ರತಿಪಕ್ಷಗಳು ಕೇಂದ್ರ ಸರ್ಕಾರದ ವಿರುದ್ಧ ನಿರುದ್ಯೋಗಕ್ಕೆ ಸಂಬಂಧಿಸಿ ಸತತವಾಗಿ ಟೀಕೆಗಳನ್ನು ಮಾಡುತ್ತಲೇ ಇವೆ. ಕೇಂದ್ರದಲ್ಲಿ ಮೋದಿ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಯುವಕರು ನಿರುದ್ಯೋಗಿಗಳಾಗಿದ್ದಾರೆ. ಬಡವರಿಗೆ ಜೀವನ ಕಷ್ಟಕರವಾಗಿ ಪರಿಣಮಿಸಿದೆ. ಉದ್ಯೋಗ ಸೃಷ್ಟಿ ನಿಟ್ಟಿನಲ್ಲಿ ಬಿಜೆಪಿ ಸರ್ಕಾರ ಏನೂ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ ಎಂದು ಕಾಂಗ್ರೆಸ್, ಎಎಪಿ ಸೇರಿದಂತೆ ಪ್ರತಿಪಕ್ಷಗಳು ಹಲವು ಬಾರಿ ವಾಗ್ದಾಳಿ ನಡೆಸಿವೆ. ಈ ಎಲ್ಲ ರಾಜಕೀಯ ವಿದ್ಯಮಾನಗಳ ನಡುವೆಯೇ ಬೃಹತ್ ಉದ್ಯೋಗ ಮೇಳಕ್ಕೆ ಪ್ರಧಾನಿ ಚಾಲನೆ ನೀಡಲಿದ್ದಾರೆ.
ಕಾರಾಗೃಹದ ಅಧೀಕ್ಷಕಿ ಎಂ.ಶಾಂತಮ್ಮ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ವರ್ಗಾವಣೆ ಮಂಡ್ಯ: ವಿಚಾರಣಾಧೀನ ಕೈದಿ ಶ್ರೀರಂಗಪಟ್ಟಣ ಎಡಿಎಲ್ಆರ್ ಮೊಹಮದ್ ಹುಸೇನ್ಗೆ ಅನಧಿಕೃತ…
ಬೆಂಗಳೂರು : 26,000 ಕೋಟಿ ಸಾಲ ಪಡೆದು ಸಂಚಾರ ದಟ್ಟಣೆ ಕಡಿಮೆ ಮಾಡಲು ಬೆಂಗಳೂರು ಬ್ಯುಸಿನೆಸ್ ಕಾರಿಡಾರ್ ನಿರ್ಮಾಣವಾಗುತ್ತಿದೆ ಎಂದು…
ಬೆಂಗಳೂರು : ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆ-ಮನೆ ಸಮೀಕ್ಷೆಯ ಅವಧಿಯನ್ನು ರಾಜ್ಯ ಸರ್ಕಾರ ಸೆಪ್ಟೆಂಬರ್ 30ರವರೆಗೆ ವಿಸ್ತರಿಸಿದೆ. 2023ರ…
ಮೈಸೂರು : ನಾಡಹಬ್ಬ ದಸರಾ ಮಹೋತ್ಸವದ ಸಂಭ್ರಮಕ್ಕೂ ಮುನ್ನ ಸ್ಥಳೀಯ ಕಾಲೇಜು ಪ್ರತಿಭೆಗಳಿಗೆ ವೇದಿಕೆ ಕಲ್ಪಿಸಿಕೊಡಲು ಮಾನಸಗಂಗೋತ್ರಿಯ ಬಯಲು ರಂಗಮಂದಿರದಲ್ಲಿ…
ನವದೆಹಲಿ: ಕಾವೇರಿ ಜಲವಿವಾದಕ್ಕೆ ಸಂಬಂಧಿಸಿದ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಸೆಪ್ಟೆಂಬರ್ 15ಕ್ಕೆ ಮುಂದೂಡಿದೆ. ಬಾಕಿ ಇರುವ 17 ಟಿಎಂಸಿ ನೀರನ್ನು…
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹ ಹಾಗೂ ಭೂಕುಸಿತದಿಂದಾಗಿ ಪರಿಸ್ಥಿತಿ ಮತ್ತಷ್ಟು ಗಂಭೀರವಾಗಿದ್ದು, ಸಾವಿನ ಸಂಖ್ಯೆ 903ಕ್ಕೆ ಏರಿಕೆಯಾಗಿದೆ. ಪ್ರವಾಹದ ರಭಸಕ್ಕೆ…