ನವದೆಹಲಿ :10 ಲಕ್ಷ ಮಂದಿಗೆ ಉದ್ಯೋಗ ನೀಡುವ ಬೃಹತ್ ಉದ್ಯೋಗ ಮೇಳಕ್ಕೆ ಪ್ರಧಾನಿ ನರೇಂದ್ರ ಮೋದಿ ಅಕ್ಟೋಬರ್ 22ರಂದು ವಿಡಿಯೊ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಲಿದ್ದಾರೆ.
ಯುವಕರಿಗೆ ಉದ್ಯೋಗ ನೀಡುವುದರ ಜೊತೆಗೆ ನಾಗರಿಕರ ಕಲ್ಯಾಣವನ್ನು ಖಾತರಿಪಡಿಸುವ ಪ್ರಧಾನ ಮಂತ್ರಿಗಳ ಆಶಯದ ನಿಟ್ಟಿನಲ್ಲಿ ಇದು ಪೂರಕ ಕಾರ್ಯಕ್ರಮವಾಗಿದೆ. ಮೋದಿ ಅವರ ನಿರ್ದೇಶನದ ಮೇರೆಗೆ ಎಲ್ಲ ಇಲಾಖೆಗಳ ಸಚಿವರು ಖಾಲಿ ಇರುವ ಹುದ್ದೆಗೆಳ ನೇಮಕಾತಿಗಾಗಿ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ ಎಂದು ಪಿಎಂಒ ಹೇಳಿದೆ.
ದೇಶದಾದ್ಯಂತ 38 ಸಚಿವಾಲಯಗಳ ಅಥವಾ ಇಲಾಖೆಗಳಿಗಾಗಿ ದೇಶದಾದ್ಯಂತ ನೇಮಕಾತಿ ನಡೆಸಲಾಗುತ್ತಿದೆ. ಸರ್ಕಾರದ ಗ್ರೂಪ್ ಎ ಶ್ರೇಣಿಯಿಂದ ಹುದ್ದೆಗಳಿಂದ ತೊಡಗಿ ಗ್ರೂಪ್ ಸಿ ಶ್ರೇಣಿಯ ಹುದ್ದೆಗಳ ವರೆಗೆ ನೇಮಕಾತಿ ನಡೆಯಲಿದೆ. ಕೇಂದ್ರ ಸಶಸ್ತ್ರ ಪಡೆ ಸಿಬ್ಬಂದಿ, ಸಬ್-ಇನ್ಸ್ಪೆಕ್ಟರ್ಗಳು, ಕಾನ್ಸ್ಟೆಬಲ್ಗಳು, ಎಲ್ಡಿಸಿ, ಸ್ಟೆನೋ, ಪಿಎ, ಆದಾಯ ತೆರಿಗೆ ಇನ್ಸ್ಪೆಕ್ಟರ್ಗಳು ಮತ್ತು ಎಂಟಿಎಸ್ ಕೂಡ ನೇಮಕವಾಗುತ್ತಿರುವ ಹುದ್ದೆಗಳಲ್ಲಿ ಒಳಗೊಂಡಿವೆ ಎಂದು ಪಿಎಂಒ ಪ್ರಕಟಣೆಯಲ್ಲಿ ಹೇಳಲಾಗಿದೆ.
ಪ್ರತಿಪಕ್ಷಗಳು ಕೇಂದ್ರ ಸರ್ಕಾರದ ವಿರುದ್ಧ ನಿರುದ್ಯೋಗಕ್ಕೆ ಸಂಬಂಧಿಸಿ ಸತತವಾಗಿ ಟೀಕೆಗಳನ್ನು ಮಾಡುತ್ತಲೇ ಇವೆ. ಕೇಂದ್ರದಲ್ಲಿ ಮೋದಿ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಯುವಕರು ನಿರುದ್ಯೋಗಿಗಳಾಗಿದ್ದಾರೆ. ಬಡವರಿಗೆ ಜೀವನ ಕಷ್ಟಕರವಾಗಿ ಪರಿಣಮಿಸಿದೆ. ಉದ್ಯೋಗ ಸೃಷ್ಟಿ ನಿಟ್ಟಿನಲ್ಲಿ ಬಿಜೆಪಿ ಸರ್ಕಾರ ಏನೂ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ ಎಂದು ಕಾಂಗ್ರೆಸ್, ಎಎಪಿ ಸೇರಿದಂತೆ ಪ್ರತಿಪಕ್ಷಗಳು ಹಲವು ಬಾರಿ ವಾಗ್ದಾಳಿ ನಡೆಸಿವೆ. ಈ ಎಲ್ಲ ರಾಜಕೀಯ ವಿದ್ಯಮಾನಗಳ ನಡುವೆಯೇ ಬೃಹತ್ ಉದ್ಯೋಗ ಮೇಳಕ್ಕೆ ಪ್ರಧಾನಿ ಚಾಲನೆ ನೀಡಲಿದ್ದಾರೆ.
ನವದೆಹಲಿ: ಮೇ.3ರಂದು ನಡೆದಿದ್ದ ನೀಟ್ ಯುಜಿ ಪರೀಕ್ಷೆಯನ್ನು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ರದ್ದುಗೊಳಿಸಿದೆ. ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಎನ್ಜಿಎ…
ಗುವಾಹಟಿ: ಹಿಮಂತ ಬಿಸ್ವಾ ಶರ್ಮಾ ಅವರು ಸತತ ಎರಡನೇ ಬಾರಿಗೆ ಅಸ್ಸಾಂನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಗುವಾಹಟಿಯ ಖಾನಾಪಾರಾದಲ್ಲಿರುವ ಪಶುವೈದ್ಯಕೀಯ…
ಮೈಸೂರು: SIR ಮೂಲಕ ರಾಜ್ಯದ 86 ಲಕ್ಷ ಮತದಾರರ ಹಕ್ಕಿಗೆ ಕನ್ನ ಹಾಕುವ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಕೆಪಿಸಿಸಿ ವಕ್ತಾರ…
ಚೆನ್ನೈ: ತಮಿಳುನಾಡು ವಿಧಾನಸಭಾ ಸ್ಪೀಕರ್ ಆಗಿ ಶಾಸಕ ಜೆಸಿಡಿ ಪ್ರಭಾಕರ್ ಅವರಿಂದು ಸರ್ವಾನುಮತದಿಂದ ಆಯ್ಕೆಯಾದರು. ಸಿಎಂ ವಿಜಯ್ ಅವರು ಪ್ರಭಾಕರ್…
ಮಂಡ್ಯ: ರಾಜ್ಯದಲ್ಲಿ ತಾಪಮಾನ ಏರಿಕೆಯಾಗುತ್ತಿದ್ದಂತೆ ಕೆಆರ್ಎಸ್ ಜಲಾಶಯದ ನೀರಿನ ಮಟ್ಟ 90 ಅಡಿಗೆ ಕುಸಿದಿದೆ. 124.80 ಅಡಿ ಗರಿಷ್ಠ ಮಟ್ಟವನ್ನು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ…