ದೇಶ- ವಿದೇಶ

10 ಲಕ್ಷ ಮಂದಿಗೆ ಬೃಹತ್‌ ಉದ್ಯೋಗ ಮೇಳ 22 ರಂದು ಚಾಲನೆ :ಪ್ರಧಾನಿ ಮೋದಿ

ನವದೆಹಲಿ :10 ಲಕ್ಷ ಮಂದಿಗೆ ಉದ್ಯೋಗ ನೀಡುವ ಬೃಹತ್ ಉದ್ಯೋಗ ಮೇಳಕ್ಕೆ ಪ್ರಧಾನಿ ನರೇಂದ್ರ ಮೋದಿ ಅಕ್ಟೋಬರ್ 22ರಂದು ವಿಡಿಯೊ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಲಿದ್ದಾರೆ.

ಯುವಕರಿಗೆ ಉದ್ಯೋಗ ನೀಡುವುದರ ಜೊತೆಗೆ ನಾಗರಿಕರ ಕಲ್ಯಾಣವನ್ನು ಖಾತರಿಪಡಿಸುವ ಪ್ರಧಾನ ಮಂತ್ರಿಗಳ ಆಶಯದ ನಿಟ್ಟಿನಲ್ಲಿ ಇದು ಪೂರಕ ಕಾರ್ಯಕ್ರಮವಾಗಿದೆ. ಮೋದಿ ಅವರ ನಿರ್ದೇಶನದ ಮೇರೆಗೆ ಎಲ್ಲ ಇಲಾಖೆಗಳ ಸಚಿವರು ಖಾಲಿ ಇರುವ ಹುದ್ದೆಗೆಳ ನೇಮಕಾತಿಗಾಗಿ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ ಎಂದು ಪಿಎಂಒ ಹೇಳಿದೆ.

ದೇಶದಾದ್ಯಂತ 38 ಸಚಿವಾಲಯಗಳ ಅಥವಾ ಇಲಾಖೆಗಳಿಗಾಗಿ ದೇಶದಾದ್ಯಂತ ನೇಮಕಾತಿ ನಡೆಸಲಾಗುತ್ತಿದೆ. ಸರ್ಕಾರದ ಗ್ರೂಪ್ ಎ ಶ್ರೇಣಿಯಿಂದ ಹುದ್ದೆಗಳಿಂದ ತೊಡಗಿ ಗ್ರೂಪ್ ಸಿ ಶ್ರೇಣಿಯ ಹುದ್ದೆಗಳ ವರೆಗೆ ನೇಮಕಾತಿ ನಡೆಯಲಿದೆ. ಕೇಂದ್ರ ಸಶಸ್ತ್ರ ಪಡೆ ಸಿಬ್ಬಂದಿ, ಸಬ್-ಇನ್‌ಸ್ಪೆಕ್ಟರ್‌ಗಳು, ಕಾನ್‌ಸ್ಟೆಬಲ್‌ಗಳು, ಎಲ್‌ಡಿಸಿ, ಸ್ಟೆನೋ, ಪಿಎ, ಆದಾಯ ತೆರಿಗೆ ಇನ್ಸ್‌ಪೆಕ್ಟರ್‌ಗಳು ಮತ್ತು ಎಂಟಿಎಸ್ ಕೂಡ ನೇಮಕವಾಗುತ್ತಿರುವ ಹುದ್ದೆಗಳಲ್ಲಿ ಒಳಗೊಂಡಿವೆ ಎಂದು ಪಿಎಂಒ ಪ್ರಕಟಣೆಯಲ್ಲಿ ಹೇಳಲಾಗಿದೆ.

ಪ್ರತಿಪಕ್ಷಗಳು ಕೇಂದ್ರ ಸರ್ಕಾರದ ವಿರುದ್ಧ ನಿರುದ್ಯೋಗಕ್ಕೆ ಸಂಬಂಧಿಸಿ ಸತತವಾಗಿ ಟೀಕೆಗಳನ್ನು ಮಾಡುತ್ತಲೇ ಇವೆ. ಕೇಂದ್ರದಲ್ಲಿ ಮೋದಿ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಯುವಕರು ನಿರುದ್ಯೋಗಿಗಳಾಗಿದ್ದಾರೆ. ಬಡವರಿಗೆ ಜೀವನ ಕಷ್ಟಕರವಾಗಿ ಪರಿಣಮಿಸಿದೆ. ಉದ್ಯೋಗ ಸೃಷ್ಟಿ ನಿಟ್ಟಿನಲ್ಲಿ ಬಿಜೆಪಿ ಸರ್ಕಾರ ಏನೂ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ ಎಂದು ಕಾಂಗ್ರೆಸ್, ಎಎಪಿ ಸೇರಿದಂತೆ ಪ್ರತಿಪಕ್ಷಗಳು ಹಲವು ಬಾರಿ ವಾಗ್ದಾಳಿ ನಡೆಸಿವೆ. ಈ ಎಲ್ಲ ರಾಜಕೀಯ ವಿದ್ಯಮಾನಗಳ ನಡುವೆಯೇ ಬೃಹತ್ ಉದ್ಯೋಗ ಮೇಳಕ್ಕೆ ಪ್ರಧಾನಿ ಚಾಲನೆ ನೀಡಲಿದ್ದಾರೆ.

andolana

Recent Posts

ನಂಜನಗೂಡು | ಲೋಕಾ ಬಲೆಗೆ ಬಿದ್ದ ಸರ್ವೆಯರ್‌

ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…

2 hours ago

ಅನೈತಿಕ ಸಂಬಂಧದ ಶಂಕೆ : ರಾಡ್‌ನಿಂದ ಹೊಡೆದು ಪತ್ನಿ ಕೊಂದ ಪತಿ

ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…

3 hours ago

ರಾಮನಗರ: ಕಲ್ಲು ಕ್ವಾರಿಯಲ್ಲಿ ದುರಂತ: ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವು

ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…

10 hours ago

ಕೊಡಗಿನಲ್ಲಿ ಸಾಧಾರಣ ಮಳೆ: ಹಾರಂಗಿ ಜಲಾಶಯದ ಒಳಹರಿವು ಹೆಚ್ಚಳ

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…

10 hours ago

ಓದುಗರ ಪತ್ರ: ಮುತ್ತತ್ತಿ ನದಿ ಬಳಿ ಪೊಲೀಸರನ್ನು ನಿಯೋಜಿಸಿ

ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…

15 hours ago

ಓದುಗರ ಪತ್ರ: ಚಪ್ಪಲಿ ಎಸೆತ ಪ್ರಕರಣ ಎಳೆದಾಡುವುದು ಬೇಡ

ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…

15 hours ago