ದೇಶ- ವಿದೇಶ

ಮತ್ತೊಂದು ಮಹತ್ವದ ಮೈಲಿಗಲ್ಲು ಸ್ಥಾಪಿಸಲಿರುವ ಪ್ರಧಾನಿ ಮೋದಿ

ನವದೆಹಲಿ: ಭಾರತದ ರಾಜಕೀಯ ಇತಿಹಾಸದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಂದು ಮಹತ್ವದ ಮೈಲಿಗಲ್ಲನ್ನು ಸ್ಥಾಪಿಸಲಿದ್ದಾರೆ.

ಇದೇ ತಿಂಗಳ ಜೂನ್ 10 ರಂದು ಪ್ರಧಾನಿ ನರೇಂದ್ರ ಮೋದಿಯವರು ಭಾರತದಲ್ಲಿ ಅತ್ಯಂತ ದೀರ್ಘಾವಧಿ ಅಧಿಕಾರ ನಡೆಸಿದ ಪ್ರಧಾನಿ ಎಂಬ ಅಭೂತಪೂರ್ವ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.

ಈ ದಿನದಂದು ಅವರು ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರ ನಂತರದ ಸುದೀರ್ಘ ಅಧಿಕಾರಾವಧಿಯ ದಾಖಲೆಯನ್ನು ಹಿಂದಿಕ್ಕಿ, ಸತತವಾಗಿ ಅಥವಾ ಒಟ್ಟಾರೆಯಾಗಿ ಅತಿ ಹೆಚ್ಚು ದಿನಗಳ ಕಾಲ ಪ್ರಧಾನಿಯಾಗಿದ್ದವರಲ್ಲಿ ನೆಹರು ಅವರ ನಂತರದ ಸ್ಥಾನವನ್ನು ಖಚಿತಪಡಿಸಿಕೊಳ್ಳಲಿದ್ದಾರೆ.

ಜವಾಹರಲಾಲ್ ನೆಹರು ಅವರು ಭಾರತದ ಅತ್ಯಂತ ದೀರ್ಘಕಾಲದ ಪ್ರಧಾನಿಯಾಗಿದ್ದರು (ಸುಮಾರು 17 ವರ್ಷಗಳ ಕಾಲ). ನರೇಂದ್ರ ಮೋದಿಯವರು ಮೇ 2014 ರಿಂದ ಪ್ರಧಾನಿಯಾಗಿ ಅಧಿಕಾರದಲ್ಲಿದ್ದಾರೆ.
1951-52 ರ ದೇಶದ ಮೊದಲ ಸಾರ್ವತ್ರಿಕ ಚುನಾವಣೆಗೂ ಮುನ್ನ ಇದ್ದ ಮಧ್ಯಂತರ ಅವಧಿಯನ್ನು ಹೊರತುಪಡಿಸಿ, ಕೇವಲ ಚುನಾಯಿತ ಸರ್ಕಾರದ ದಿನಗಳನ್ನು ಲೆಕ್ಕ ಹಾಕಿದಾಗ ಪ್ರಧಾನಿ ಮೋದಿ ಅವರು ಕಾಂಗ್ರೆಸ್ ದಿಗ್ಗಜ, ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರ ಸುದೀರ್ಘ ದಾಖಲೆಯನ್ನು ಮುರಿಯಲಿದ್ದಾರೆ. 2014ರ ಮೇ 26 ರಂದು ದೇಶದ ಪ್ರಧಾನಿಯಾಗಿ ಮೊದಲ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದ ನರೇಂದ್ರ ಮೋದಿ ಅವರು, 2026 ರ ಜೂನ್ 10ರ ವೇಳೆಗೆ ಸತತವಾಗಿ 4,399 ದಿನಗಳ ಕಾಲ ಅಧಿಕಾರ ಪೂರೈಸಿದಂತಾಗುತ್ತದೆ.

ಜವಾಹರಲಾಲ್ ನೆಹರು ಅವರು ದೇಶದ ಮೊದಲ ಸಾರ್ವತ್ರಿಕ ಚುನಾವಣೆಯ ನಂತರ ಅಂದರೆ, 1952 ರ ಮೇ 13 ರಿಂದ 1964 ರ ಮೇ 27ರಂದು ನಿಧನರಾಗುವವರೆಗೂ ಚುನಾಯಿತ ಪ್ರಧಾನಿಯಾಗಿ ಒಟ್ಟು 4,398 ದಿನಗಳ ಕಾಲ ಸೇವೆ ಸಲ್ಲಿಸಿದ್ದರು.

ಇಂದಿರಾ ಗಾಂಧಿ ಅವರ ಅವಧಿ: ಇದೇ ಪಟ್ಟಿಯಲ್ಲಿ ನೆಹರೂ ಅವರ ಪುತ್ರಿ ಇಂದಿರಾ ಗಾಂಧಿ ಅವರು 4077 ದಿನಗಳ ಕಾಲ (1966 ರಿಂದ 1977ರವರೆಗೆ) ಸತತ ಅಧಿಕಾರ ನಡೆಸಿ ಮೂರನೇ ಸ್ಥಾನದಲ್ಲಿದ್ದಾರೆ.

ಜವಾಹರಲಾಲ್ ನೆಹರು ಮತ್ತು ನರೇಂದ್ರ ಮೋದಿ ಇಬ್ಬರೂ ತಮ್ಮದೇ ಆದ ಶೈಲಿಯಲ್ಲಿ ಭಾರತೀಯ ರಾಜಕಾರಣದ ದಿಕ್ಕನ್ನು ಬದಲಿಸಿದ ಧೀಮಂತ ನಾಯಕರಾಗಿದ್ದಾರೆ. ನೆಹರೂ ಅವರು ಸ್ವಾತಂತ್ರ್ಯೋತ್ತರ ಭಾರತದಲ್ಲಿ ‘ಜಾತ್ಯತೀತ ಒಮ್ಮತ’ದ ಆಧಾರದ ಮೇಲೆ ದಶಕಗಳ ಕಾಲ ದೇಶವನ್ನು ಮುನ್ನಡೆಸಿದರೆ, ಪ್ರಧಾನಿ ಮೋದಿ ಅವರು ಸಾಂಸ್ಕøತಿಕ ರಾಷ್ಟ್ರೀಯತೆ ಮತ್ತು ತೇಜಸ್ವಿ ಅಭಿವೃದ್ಧಿಯ ಹೊಸ ಮಿಶ್ರಣದ ಮೂಲಕ ಭಾರತದ ರಾಜಕೀಯ ವ್ಯಾಕರಣವನ್ನೇ ಪುನಃ ಬರೆದಿದ್ದಾರೆ. ತೀವ್ರ ಪೈಪೋಟಿಯ ಇಂದಿನ ರಾಜಕೀಯ ವಾತಾವರಣದಲ್ಲೂ ಸತತ ಮೂರು ಬಾರಿ ಭಾರಿ ಜನಾದೇಶದೊಂದಿಗೆ ಗೆದ್ದು ಬಂದಿರುವುದು ಮೋದಿ ಅವರ ನಾಯಕತ್ವದ ಶಕ್ತಿಯನ್ನು ತೋರಿಸುತ್ತದೆ.

ಕಳೆದ 12 ವರ್ಷಗಳಿಗೂ ಹೆಚ್ಚು ಕಾಲದಿಂದ ದೇಶದ ನಾಯಕತ್ವವನ್ನು ವಹಿಸಿಕೊಂಡಿರುವ ಮೋದಿಯವರು, ಅಭಿವೃದ್ಧಿ ಮತ್ತು ಆಡಳಿತದ ವಿಷಯದಲ್ಲಿ ಅನೇಕ ಬದಲಾವಣೆಗಳನ್ನು ತಂದಿದ್ದಾರೆ. ಈ ಸಾಧನೆಯು ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಮೋದಿಯವರ ಜನಪ್ರಿಯತೆಯನ್ನು ಪ್ರತಿಬಿಂಬಿಸುವ ಒಂದು ಪ್ರಮುಖ ಘಟನೆಯಾಗಿ ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿದೆ.

ಆಂದೋಲನ ಡೆಸ್ಕ್

Recent Posts

ಕಾಂಕ್ರೋಚ್‌ಗಳ ಮೇಲೆ ಲಾಠಿಚಾರ್ಜ್:‌ ವಿಡಿಯೋ ನೋಡಲು ಟೈಮ್‌ ಇಲ್ಲ ಎಂದ ಸುಪ್ರೀಂಕೋರ್ಟ್‌

ನವದೆಹಲಿ: ನೀಟ್‌ ಅಕ್ರಮಕ್ಕೆ ಸಂಬಂಧಿಸಿದಂತೆ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಒತ್ತಾಯಿಸಿ ಸಿಜೆಪಿ ನಡೆಸಿದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ…

9 hours ago

ಓದುಗರ ಪತ್ರ: ರೈಲಿನಲ್ಲಿ ತಿನಿಸು ಮಾರುವವರು ವೈಯಕ್ತಿಕ ಸ್ವಚ್ಛತೆಗೂ ಗಮನ ನೀಡಲಿ

ರೈಲ್ವೆ ಇಲಾಖೆಯಿಂದ ಅನುಮತಿ ಪಡೆದ ಮಾರಾಟಗಾರರು ಪ್ರತಿನಿತ್ಯ ರೈಲುಗಳಲ್ಲಿ ಕಾಫಿ, ಟೀ, ಇಡ್ಲಿ, ರೈಸ್ ಬಾತ್ ಮೊದಲಾದ ಆಹಾರ ಪದಾರ್ಥಗಳು,…

18 hours ago

ಓದುಗರ ಪತ್ರ: ‘ಗೃಹಜ್ಯೋತಿ’ ಗೊಂದಲ ನಿವಾರಿಸಿ

ಕರ್ನಾಟಕ ವಿದ್ಯುತ್ ಮಂಡಳಿಯು ರಾಜದ್ಯಂತ ಗೃಹ ಜ್ಯೋತಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಮನೆ ಬಾಗಿಲಿಗೆ ಬಂದು ಸಮೀಕ್ಷೆ ಕಾರ್ಯ ಮಾಡುತ್ತಿದೆ.…

18 hours ago

ಓದುಗರ ಪತ್ರ: ಬರಪೀಡಿತ ಜಿಲ್ಲೆಗಳೆಂದು ಘೋಷಿಸಿ

ಕರ್ನಾಟಕದಲ್ಲಿ ಶೇ.೬೦ ಕ್ಕಿಂತ ಹೆಚ್ಚು ಮಳೆ ಕೊರತೆಯಾಗಿದ್ದು, ಮೈಸೂರು, ವಿಜಯಪುರ, ಧಾರವಾಡ, ಗದಗ, ಬೆಳಗಾವಿ, ಕೊಪ್ಪಳ, ಕಲಬುರಗಿ,ಬೀದರ್, ಹಾಸನ, ದಾವಣಗೆರೆ,…

18 hours ago

ಓದುಗರ ಪತ್ರ: ಸಂಸತ್ ಚಲೋ ತಡೆಗೆ ನಡೆದಿತ್ತೆ ಹುನ್ನಾರ?

ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಹೊಸದಿಲ್ಲಿಯಲ್ಲಿ ಕಾಕ್ರೋಚ್ ಜನತಾ ಪಕ್ಷ…

18 hours ago

ಇ-20 ಇಂಧನಕ್ಕೆ ಭಾರತ ಪ್ರಯೋಗಾಲಯವಾಯಿತೆ?!

ಶುಭಾ ಖಟಾವಕರ ಮ್ಹೆತ್ರಸ್ ಸುಪ್ರೀಂ ಕೋರ್ಟ್‌ನಲ್ಲಿ ಸ್ವತಃ ಅಟಾರ್ನಿ ಜನರಲ್ ಹೇಳಿಕೆ! ೨೦೨೩ರ ನಂತರ ತಯಾರಾದ ವಾಹನಗಳಿಗೆ ಮಾತ್ರ ಇ-೨೦…

18 hours ago