ದೇಶ- ವಿದೇಶ

ಮತ್ತೊಂದು ಮಹತ್ವದ ಮೈಲಿಗಲ್ಲು ಸ್ಥಾಪಿಸಲಿರುವ ಪ್ರಧಾನಿ ಮೋದಿ

ನವದೆಹಲಿ: ಭಾರತದ ರಾಜಕೀಯ ಇತಿಹಾಸದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಂದು ಮಹತ್ವದ ಮೈಲಿಗಲ್ಲನ್ನು ಸ್ಥಾಪಿಸಲಿದ್ದಾರೆ.

ಇದೇ ತಿಂಗಳ ಜೂನ್ 10 ರಂದು ಪ್ರಧಾನಿ ನರೇಂದ್ರ ಮೋದಿಯವರು ಭಾರತದಲ್ಲಿ ಅತ್ಯಂತ ದೀರ್ಘಾವಧಿ ಅಧಿಕಾರ ನಡೆಸಿದ ಪ್ರಧಾನಿ ಎಂಬ ಅಭೂತಪೂರ್ವ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.

ಈ ದಿನದಂದು ಅವರು ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರ ನಂತರದ ಸುದೀರ್ಘ ಅಧಿಕಾರಾವಧಿಯ ದಾಖಲೆಯನ್ನು ಹಿಂದಿಕ್ಕಿ, ಸತತವಾಗಿ ಅಥವಾ ಒಟ್ಟಾರೆಯಾಗಿ ಅತಿ ಹೆಚ್ಚು ದಿನಗಳ ಕಾಲ ಪ್ರಧಾನಿಯಾಗಿದ್ದವರಲ್ಲಿ ನೆಹರು ಅವರ ನಂತರದ ಸ್ಥಾನವನ್ನು ಖಚಿತಪಡಿಸಿಕೊಳ್ಳಲಿದ್ದಾರೆ.

ಜವಾಹರಲಾಲ್ ನೆಹರು ಅವರು ಭಾರತದ ಅತ್ಯಂತ ದೀರ್ಘಕಾಲದ ಪ್ರಧಾನಿಯಾಗಿದ್ದರು (ಸುಮಾರು 17 ವರ್ಷಗಳ ಕಾಲ). ನರೇಂದ್ರ ಮೋದಿಯವರು ಮೇ 2014 ರಿಂದ ಪ್ರಧಾನಿಯಾಗಿ ಅಧಿಕಾರದಲ್ಲಿದ್ದಾರೆ.
1951-52 ರ ದೇಶದ ಮೊದಲ ಸಾರ್ವತ್ರಿಕ ಚುನಾವಣೆಗೂ ಮುನ್ನ ಇದ್ದ ಮಧ್ಯಂತರ ಅವಧಿಯನ್ನು ಹೊರತುಪಡಿಸಿ, ಕೇವಲ ಚುನಾಯಿತ ಸರ್ಕಾರದ ದಿನಗಳನ್ನು ಲೆಕ್ಕ ಹಾಕಿದಾಗ ಪ್ರಧಾನಿ ಮೋದಿ ಅವರು ಕಾಂಗ್ರೆಸ್ ದಿಗ್ಗಜ, ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರ ಸುದೀರ್ಘ ದಾಖಲೆಯನ್ನು ಮುರಿಯಲಿದ್ದಾರೆ. 2014ರ ಮೇ 26 ರಂದು ದೇಶದ ಪ್ರಧಾನಿಯಾಗಿ ಮೊದಲ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದ ನರೇಂದ್ರ ಮೋದಿ ಅವರು, 2026 ರ ಜೂನ್ 10ರ ವೇಳೆಗೆ ಸತತವಾಗಿ 4,399 ದಿನಗಳ ಕಾಲ ಅಧಿಕಾರ ಪೂರೈಸಿದಂತಾಗುತ್ತದೆ.

ಜವಾಹರಲಾಲ್ ನೆಹರು ಅವರು ದೇಶದ ಮೊದಲ ಸಾರ್ವತ್ರಿಕ ಚುನಾವಣೆಯ ನಂತರ ಅಂದರೆ, 1952 ರ ಮೇ 13 ರಿಂದ 1964 ರ ಮೇ 27ರಂದು ನಿಧನರಾಗುವವರೆಗೂ ಚುನಾಯಿತ ಪ್ರಧಾನಿಯಾಗಿ ಒಟ್ಟು 4,398 ದಿನಗಳ ಕಾಲ ಸೇವೆ ಸಲ್ಲಿಸಿದ್ದರು.

ಇಂದಿರಾ ಗಾಂಧಿ ಅವರ ಅವಧಿ: ಇದೇ ಪಟ್ಟಿಯಲ್ಲಿ ನೆಹರೂ ಅವರ ಪುತ್ರಿ ಇಂದಿರಾ ಗಾಂಧಿ ಅವರು 4077 ದಿನಗಳ ಕಾಲ (1966 ರಿಂದ 1977ರವರೆಗೆ) ಸತತ ಅಧಿಕಾರ ನಡೆಸಿ ಮೂರನೇ ಸ್ಥಾನದಲ್ಲಿದ್ದಾರೆ.

ಜವಾಹರಲಾಲ್ ನೆಹರು ಮತ್ತು ನರೇಂದ್ರ ಮೋದಿ ಇಬ್ಬರೂ ತಮ್ಮದೇ ಆದ ಶೈಲಿಯಲ್ಲಿ ಭಾರತೀಯ ರಾಜಕಾರಣದ ದಿಕ್ಕನ್ನು ಬದಲಿಸಿದ ಧೀಮಂತ ನಾಯಕರಾಗಿದ್ದಾರೆ. ನೆಹರೂ ಅವರು ಸ್ವಾತಂತ್ರ್ಯೋತ್ತರ ಭಾರತದಲ್ಲಿ ‘ಜಾತ್ಯತೀತ ಒಮ್ಮತ’ದ ಆಧಾರದ ಮೇಲೆ ದಶಕಗಳ ಕಾಲ ದೇಶವನ್ನು ಮುನ್ನಡೆಸಿದರೆ, ಪ್ರಧಾನಿ ಮೋದಿ ಅವರು ಸಾಂಸ್ಕøತಿಕ ರಾಷ್ಟ್ರೀಯತೆ ಮತ್ತು ತೇಜಸ್ವಿ ಅಭಿವೃದ್ಧಿಯ ಹೊಸ ಮಿಶ್ರಣದ ಮೂಲಕ ಭಾರತದ ರಾಜಕೀಯ ವ್ಯಾಕರಣವನ್ನೇ ಪುನಃ ಬರೆದಿದ್ದಾರೆ. ತೀವ್ರ ಪೈಪೋಟಿಯ ಇಂದಿನ ರಾಜಕೀಯ ವಾತಾವರಣದಲ್ಲೂ ಸತತ ಮೂರು ಬಾರಿ ಭಾರಿ ಜನಾದೇಶದೊಂದಿಗೆ ಗೆದ್ದು ಬಂದಿರುವುದು ಮೋದಿ ಅವರ ನಾಯಕತ್ವದ ಶಕ್ತಿಯನ್ನು ತೋರಿಸುತ್ತದೆ.

ಕಳೆದ 12 ವರ್ಷಗಳಿಗೂ ಹೆಚ್ಚು ಕಾಲದಿಂದ ದೇಶದ ನಾಯಕತ್ವವನ್ನು ವಹಿಸಿಕೊಂಡಿರುವ ಮೋದಿಯವರು, ಅಭಿವೃದ್ಧಿ ಮತ್ತು ಆಡಳಿತದ ವಿಷಯದಲ್ಲಿ ಅನೇಕ ಬದಲಾವಣೆಗಳನ್ನು ತಂದಿದ್ದಾರೆ. ಈ ಸಾಧನೆಯು ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಮೋದಿಯವರ ಜನಪ್ರಿಯತೆಯನ್ನು ಪ್ರತಿಬಿಂಬಿಸುವ ಒಂದು ಪ್ರಮುಖ ಘಟನೆಯಾಗಿ ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿದೆ.

ಆಂದೋಲನ ಡೆಸ್ಕ್

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

1 hour ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

3 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

4 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

6 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

7 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

7 hours ago