ನವದೆಹಲಿ: ಪ್ರಯಾಗ್ರಾಜ್ನಲ್ಲಿ 144 ವರ್ಷಗಳಿಗೊಮ್ಮೆ ನಡೆಯುವ ಮಹಾಕುಂಭಮೇಳಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಭೇಟಿ ನೀಡಲಿದ್ದು, ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಲಿದ್ದಾರೆ ಎಂದು ಅಧಿಕಾರಿ ಮೂಲಗಳು ತಿಳಿಸಿವೆ.
ಪ್ರಧಾನಿ ಮೋದಿ ಅವರು ನಾಳೆ(ಫೆಬ್ರವರಿ.5) ಬೆಳಿಗ್ಗೆ 10.05 ಗಂಟೆಗೆ ಪ್ರಯಾಗ್ ರಾಜ್ನ ವಿಮಾನ ನಿಲ್ದಾಣಕ್ಕೆ ಆಗಮಿಸಿ, ಅಲ್ಲಿಂದ ಬೆಳಿಗ್ಗೆ 10.10 ಗಂಟೆಗೆ ಡಿಪಿಎಸ್ ಹೆಲಿಪ್ಯಾಡ್ಗೆ ಪ್ರಯಾಣಿಸಿ, ನಂತರ 10.45 ಗಂಟೆಗೆ ಏರಿಯಲ್ ಘಾಟ್ಗೆ ತೆರಳಲಿದ್ದಾರೆ. ಬಳಿಕ 10.50 ಗಂಟೆಗೆ ಏರಿಯಲ್ ಘಾಟ್ನಿಂದ ಮಹಾಕುಂಭಮೇಳಕ್ಕೆ ದೋಣಿಯಲ್ಲಿ ಪ್ರಯಾಣಿಸಲಿದ್ದಾರೆ. ಆ ವೇಳೆ ಅವರು ಬೆಳಿಗ್ಗೆ 11.00 ರಿಂದ 11.30 ಗಂಟೆಯವರೆಗೂ ಸಂಗಮ್ ಘಾಟ್ನಲ್ಲಿ ಸ್ನಾನ ಮಾಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಇನ್ನೂ ತ್ರಿವೇಣಿ ಸಂಗಮದಲ್ಲಿ ಸ್ನಾನದ ನಂತರ ಪ್ರಧಾನಿ ಮೋದಿ ಅವರು, ಸಂತರೊಂದಿಗೆ ಸಂವಹನ ನಡೆಸುವ ನಿರೀಕ್ಷೆಯಿದೆ. ಅಲ್ಲದೇ ಈ ವೇಳೆ ಮಹಾಕುಂಭಮೇಳದಲ್ಲಿ ಭಾಗವಹಿಸುವ ಲಕ್ಷಾಂತರ ಯಾತ್ರಾರ್ಥಿಗಳಿಗೆ ಮಾಡಲಾದ ವ್ಯವಸ್ಥೆಗಳನ್ನು ಪರಿಶೀಲಿಸಲಿದ್ದಾರೆ.
ಅಲ್ಲಿಂದ ಬೆಳಿಗ್ಗೆ 11.45ಕ್ಕೆ ಅವರು ದೋಣಿಯಲ್ಲಿ ಏರಿಯಲ್ ಘಾಟ್ಗೆ ಹಿಂತಿರುಗಿದ ಬಳಿಕ ಡಿಪಿಎಸ್ ಹೆಲಿಪ್ಯಾಡ್ನಿಂದ ಪ್ರಯಾಗ್ ರಾಜ್ ವಿಮಾನ ನಿಲ್ದಾಣಕ್ಕೆ ವಾಪಾಸ್ ಆಗುತ್ತಾರೆ. ಇನ್ನೂ ಮಧ್ಯಾಹ್ನ 12.30 ಗಂಟೆಗೆ ವಾಯುಪಡೆಯ ವಿಮಾನದಲ್ಲಿ ದೆಹಲಿಗೆ ಹಿಂತುರಗಲಿದ್ದಾರೆ.
ಮಂಡ್ಯ : ವೈರಮುಡಿ ಬ್ರಹ್ಮೋತ್ಸವಕ್ಕೆ ಆಗಮಿಸುವ ಭಕ್ತಾದಿಗಳ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಪಾಲನೆ ಹಾಗೂ ಭದ್ರತೆಗಾಗಿ ಸೂಕ್ತ ಕ್ರಮಗಳನ್ನು…
ಬೆಂಗಳೂರು : ಬೆಂಗಳೂರು ಉತ್ತರ ತಾಲ್ಲೂಕು ಜಾರಕಬಂಡೆ ಶ್ರೀಗಂಧದ ಕಾವಲ್ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯಭೂಮಿಯ ಮರು ವಶಕ್ಕೆ…
ಬೆಂಗಳೂರು : ವಿದ್ಯಾರ್ಥಿಗಳಿಗೆ ಹಿಂದಿ ಪಾಸ್ ಕಡ್ಡಾಯ ಮಾಡದಂತೆ ಕನ್ನಡಪರ ಸಂಘಟನೆಗಳಿಂದ ಒತ್ತಾಯ ಕೇಳಿಬಂದ ಬೆನ್ನಲ್ಲೇ ರಾಜ್ಯದಲ್ಲಿ ದ್ವಿಭಾಷಾ ಸೂತ್ರ…
ಬೆಂಗಳೂರು : ಬೆಂಗಳೂರು ಉತ್ತರ ತಾಲ್ಲೂಕು ಜಾರಕಬಂಡೆ ಶ್ರೀಗಂಧದ ಕಾವಲ್ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯಭೂಮಿಯ ಮರು ವಶಕ್ಕೆ…
ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದಿಂದಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ಆತಂಕ ಸೃಷ್ಠಿಯಾಗಿರುವ ನಡುವೆ ಕೇಂದ್ರ…
ವಾಷಿಂಗ್ಟನ್ : ಇರಾನ್ ಕೋರಿಕೆಯ ಮೇರೆಗೆ ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು 10 ದಿನ ಮುಂದೂಡಿದ್ದೇವೆ ಎಂದು ಅಮೆರಿಕ ಅಧ್ಯಕ್ಷ…