ದೇಶ- ವಿದೇಶ

ಪ್ರಯಾಗ್‌ ರಾಜ್‌: ನಾಳೆ ಮಹಾಕುಂಭಮೇಳಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ನವದೆಹಲಿ: ಪ್ರಯಾಗ್ರಾಜ್‌ನಲ್ಲಿ 144 ವರ್ಷಗಳಿಗೊಮ್ಮೆ ನಡೆಯುವ ಮಹಾಕುಂಭಮೇಳಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಭೇಟಿ ನೀಡಲಿದ್ದು, ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಲಿದ್ದಾರೆ ಎಂದು ಅಧಿಕಾರಿ ಮೂಲಗಳು ತಿಳಿಸಿವೆ.

ಪ್ರಧಾನಿ ಮೋದಿ ಅವರು ನಾಳೆ(ಫೆಬ್ರವರಿ.5) ಬೆಳಿಗ್ಗೆ 10.05 ಗಂಟೆಗೆ ಪ್ರಯಾಗ್‌ ರಾಜ್‌ನ ವಿಮಾನ ನಿಲ್ದಾಣಕ್ಕೆ ಆಗಮಿಸಿ, ಅಲ್ಲಿಂದ ಬೆಳಿಗ್ಗೆ 10.10 ಗಂಟೆಗೆ ಡಿಪಿಎಸ್‌ ಹೆಲಿಪ್ಯಾಡ್‌ಗೆ ಪ್ರಯಾಣಿಸಿ, ನಂತರ 10.45 ಗಂಟೆಗೆ ಏರಿಯಲ್‌ ಘಾಟ್‌ಗೆ ತೆರಳಲಿದ್ದಾರೆ. ಬಳಿಕ 10.50 ಗಂಟೆಗೆ ಏರಿಯಲ್‌ ಘಾಟ್‌ನಿಂದ ಮಹಾಕುಂಭಮೇಳಕ್ಕೆ ದೋಣಿಯಲ್ಲಿ ಪ್ರಯಾಣಿಸಲಿದ್ದಾರೆ. ಆ ವೇಳೆ ಅವರು ಬೆಳಿಗ್ಗೆ 11.00 ರಿಂದ 11.30 ಗಂಟೆಯವರೆಗೂ ಸಂಗಮ್‌ ಘಾಟ್‌ನಲ್ಲಿ ಸ್ನಾನ ಮಾಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಇನ್ನೂ ತ್ರಿವೇಣಿ ಸಂಗಮದಲ್ಲಿ ಸ್ನಾನದ ನಂತರ ಪ್ರಧಾನಿ ಮೋದಿ ಅವರು, ಸಂತರೊಂದಿಗೆ ಸಂವಹನ ನಡೆಸುವ ನಿರೀಕ್ಷೆಯಿದೆ. ಅಲ್ಲದೇ ಈ ವೇಳೆ ಮಹಾಕುಂಭಮೇಳದಲ್ಲಿ ಭಾಗವಹಿಸುವ ಲಕ್ಷಾಂತರ ಯಾತ್ರಾರ್ಥಿಗಳಿಗೆ ಮಾಡಲಾದ ವ್ಯವಸ್ಥೆಗಳನ್ನು ಪರಿಶೀಲಿಸಲಿದ್ದಾರೆ.

ಅಲ್ಲಿಂದ ಬೆಳಿಗ್ಗೆ 11.45ಕ್ಕೆ ಅವರು ದೋಣಿಯಲ್ಲಿ ಏರಿಯಲ್‌ ಘಾಟ್‌ಗೆ ಹಿಂತಿರುಗಿದ ಬಳಿಕ ಡಿಪಿಎಸ್‌ ಹೆಲಿಪ್ಯಾಡ್‌ನಿಂದ ಪ್ರಯಾಗ್‌ ರಾಜ್‌ ವಿಮಾನ ನಿಲ್ದಾಣಕ್ಕೆ ವಾಪಾಸ್‌ ಆಗುತ್ತಾರೆ. ಇನ್ನೂ ಮಧ್ಯಾಹ್ನ 12.30 ಗಂಟೆಗೆ ವಾಯುಪಡೆಯ ವಿಮಾನದಲ್ಲಿ ದೆಹಲಿಗೆ ಹಿಂತುರಗಲಿದ್ದಾರೆ.

 

ಅರ್ಚನ ಎಸ್‌ ಎಸ್

Recent Posts

ಬಿಡದಿ ರೈತರ ಪರ ನನ್ನ ಹೋರಾಟ ಇಂದಿನಿಂದ ಆರಂಭ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಘೋಷಣೆ

ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ…

11 hours ago

ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವು

ನವೀನ್‌ ಕುಮಾರ್:‌ ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…

11 hours ago

ಹನೂರು| ಅಮಾವಾಸ್ಯೆ ಪ್ರಯುಕ್ತ ಮಲೆ ಮಹದೇಶ್ವರ ಬೆಟ್ಟಕ್ಕೆ ಹರಿದುಬಂದ ಭಕ್ತಸಾಗರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…

12 hours ago

ಚಾ.ನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ: ಸಚಿವ ಕೆ.ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು:‌ ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು‌‌ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…

12 hours ago

ಒಂದು ರಾಷ್ಟ್ರ ಒಂದು ಚುನಾವಣೆ ಪ್ರಸ್ತಾವನೆಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರೋಧ

ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…

12 hours ago

ಶಾಸಕ ಜಿಟಿಡಿ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೆ ಅಭ್ಯಂತರವಿಲ್ಲ: ಮಾಜಿ ಸಚಿವ ಸಾ.ರಾ.ಮಹೇಶ್‌

ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್‌…

12 hours ago