ದೇಶ- ವಿದೇಶ

ಪ್ರಯಾಗ್‌ ರಾಜ್‌: ನಾಳೆ ಮಹಾಕುಂಭಮೇಳಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ನವದೆಹಲಿ: ಪ್ರಯಾಗ್ರಾಜ್‌ನಲ್ಲಿ 144 ವರ್ಷಗಳಿಗೊಮ್ಮೆ ನಡೆಯುವ ಮಹಾಕುಂಭಮೇಳಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಭೇಟಿ ನೀಡಲಿದ್ದು, ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಲಿದ್ದಾರೆ ಎಂದು ಅಧಿಕಾರಿ ಮೂಲಗಳು ತಿಳಿಸಿವೆ.

ಪ್ರಧಾನಿ ಮೋದಿ ಅವರು ನಾಳೆ(ಫೆಬ್ರವರಿ.5) ಬೆಳಿಗ್ಗೆ 10.05 ಗಂಟೆಗೆ ಪ್ರಯಾಗ್‌ ರಾಜ್‌ನ ವಿಮಾನ ನಿಲ್ದಾಣಕ್ಕೆ ಆಗಮಿಸಿ, ಅಲ್ಲಿಂದ ಬೆಳಿಗ್ಗೆ 10.10 ಗಂಟೆಗೆ ಡಿಪಿಎಸ್‌ ಹೆಲಿಪ್ಯಾಡ್‌ಗೆ ಪ್ರಯಾಣಿಸಿ, ನಂತರ 10.45 ಗಂಟೆಗೆ ಏರಿಯಲ್‌ ಘಾಟ್‌ಗೆ ತೆರಳಲಿದ್ದಾರೆ. ಬಳಿಕ 10.50 ಗಂಟೆಗೆ ಏರಿಯಲ್‌ ಘಾಟ್‌ನಿಂದ ಮಹಾಕುಂಭಮೇಳಕ್ಕೆ ದೋಣಿಯಲ್ಲಿ ಪ್ರಯಾಣಿಸಲಿದ್ದಾರೆ. ಆ ವೇಳೆ ಅವರು ಬೆಳಿಗ್ಗೆ 11.00 ರಿಂದ 11.30 ಗಂಟೆಯವರೆಗೂ ಸಂಗಮ್‌ ಘಾಟ್‌ನಲ್ಲಿ ಸ್ನಾನ ಮಾಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಇನ್ನೂ ತ್ರಿವೇಣಿ ಸಂಗಮದಲ್ಲಿ ಸ್ನಾನದ ನಂತರ ಪ್ರಧಾನಿ ಮೋದಿ ಅವರು, ಸಂತರೊಂದಿಗೆ ಸಂವಹನ ನಡೆಸುವ ನಿರೀಕ್ಷೆಯಿದೆ. ಅಲ್ಲದೇ ಈ ವೇಳೆ ಮಹಾಕುಂಭಮೇಳದಲ್ಲಿ ಭಾಗವಹಿಸುವ ಲಕ್ಷಾಂತರ ಯಾತ್ರಾರ್ಥಿಗಳಿಗೆ ಮಾಡಲಾದ ವ್ಯವಸ್ಥೆಗಳನ್ನು ಪರಿಶೀಲಿಸಲಿದ್ದಾರೆ.

ಅಲ್ಲಿಂದ ಬೆಳಿಗ್ಗೆ 11.45ಕ್ಕೆ ಅವರು ದೋಣಿಯಲ್ಲಿ ಏರಿಯಲ್‌ ಘಾಟ್‌ಗೆ ಹಿಂತಿರುಗಿದ ಬಳಿಕ ಡಿಪಿಎಸ್‌ ಹೆಲಿಪ್ಯಾಡ್‌ನಿಂದ ಪ್ರಯಾಗ್‌ ರಾಜ್‌ ವಿಮಾನ ನಿಲ್ದಾಣಕ್ಕೆ ವಾಪಾಸ್‌ ಆಗುತ್ತಾರೆ. ಇನ್ನೂ ಮಧ್ಯಾಹ್ನ 12.30 ಗಂಟೆಗೆ ವಾಯುಪಡೆಯ ವಿಮಾನದಲ್ಲಿ ದೆಹಲಿಗೆ ಹಿಂತುರಗಲಿದ್ದಾರೆ.

 

ಅರ್ಚನ ಎಸ್‌ ಎಸ್

Recent Posts

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆಯ ವಿವರ

ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…

3 hours ago

ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ

ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…

4 hours ago

ತಮಿಳುನಾಡಿಗೆ ನಿತ್ಯ 9 ಸಾವಿರ ಕ್ಯೂಸೆಕ್ ನೀರು ಹರಿಸಿ – CWRC ಶಿಫಾರಸು ಎತ್ತಿಹಿಡಿದ CWMA

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…

4 hours ago

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

6 hours ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

6 hours ago

ಓದುಗರ ಪತ್ರ: ಪ್ರೇಕ್ಷಕರ ಆಸಕ್ತಿಗೆ ತಕ್ಕಂತೆ ಕಾರ್ಯಕ್ರಮ ಆಯೋಜಿಸಿ

ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…

6 hours ago