ಉತ್ತರ ಪ್ರದೇಶ: ಸಾಮಾಜಿಕ ಮಾಧ್ಯಮದಲ್ಲಿ ಬಾಲಕಿಯ ಜೊತೆ ಗೆಳತನ ಬೆಳೆಸಿ, ಬಳಿಕ ಆಕೆಯನ್ನು ಅಪಹರಿಸಿ ಹಿಮಾಚಲ ಪ್ರದೇಶಕ್ಕೆ ಕರೆದೊಯ್ದು ಮೂರು ತಿಂಗಳ ಕಾಲ ನಿರಂತರವಾಗಿ ಅತ್ಯಾಚಾರ ಎಸಗಿದ ಘಟನೆ ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದಿದೆ.
ಈ ಕುರಿತು ಮಾಹಿತಿ ನೀಡಿರುವ ಪೊಲೀಸ್ ವರಿಷ್ಠಾಧಿಕಾರಿ ರಂಜನ್ ವರ್ಮ, ಬಾಲಕಿಯು 15 ವರ್ಷದವರಾಗಿದ್ದು, ಆರೋಪಿಯು ಸಾಮಾಜಿಕ ಮಾಧ್ಯಮದಲ್ಲಿ ಸಂತ್ರಸ್ತೆಯೊಂದಿಗೆ ಸ್ನೇಹ ಬೆಳಿಸಿ, ಕೆಲವು ದಿನಗಳ ನಂತರ ಆಕೆಯ ಗ್ರಾಮದಲ್ಲಿಯೇ ಭೇಟಿಯಾಗುವುದಾಗಿ ತಿಳಿಸಿ, ಭೇಟಿ ವೇಳೆ ಅಪಹರಿಸಿಕೊಂಡು ಹಿಮಾಚಲ ಪ್ರದೇಶಕ್ಕೆ ಕರೆದೊಯ್ದು ನಿರಂತರವಾಗಿ ಅತ್ಯಾವಾರ ಎಸಗಿರುವುದಾಗಿ ತಿಳಿಸಿದರು.
ಆರೋಪಿಯನ್ನು ನೇಪಾಳದ ಪರ್ಸಾ ಜಿಲ್ಲೆಯ 26 ವರ್ಷದ ಯುವಕನಾಗಿದ್ದು, ಹಿಮಾಚಲ ಪ್ರದೇಶದಲ್ಲಿ ಕೆಲಸ ಮಾಡುತ್ತಿದ್ದನು ಎಂದರು.
ಜನವರಿ 29 ರಂದು ಬಾಲಕಿ ಕಾಣೆಯಾಗಿದ್ದಾಳೆ ಎಂದು ಆಕೆಯ ತಾಯಿ ನೀಡಿದ ದೂರಿನ ಮೇರೆಗೆ ಪೊಲೀಸರು ಹುಡುಕಾಟ ನಡೆಸಿ, ಬಳಿಕ ಆಕೆಯನ್ನು ರಕ್ಷಿಸಿ, ಗ್ರಾಮಕ್ಕೆ ಕರೆತರಲಾಗಿದೆ ಎಂದು ರಂಜನ್ ಹೇಳಿದ್ದಾರೆ.
ವಿವಿಧ ಸೆಕ್ಸನ್ಗಳಯಡಿಯಲ್ಲಿ ಆರೋಪಿಯನ್ನು ಬಂಧಿಸಿದ್ದು, ಮುಂದಿನ ಕ್ರಮ ಕೈಗೊಳ್ಳಲಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…
ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್ಎಸ್ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…
ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…
ಹೇಮಂತ್ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…