ನವದೆಹಲಿ: ಅಂಗವೈಕಲ್ಯ ಅಣಕಿಸಿ, ಇನ್ಸ್ಸ್ಟಾಗ್ರಾಮ್ನಲ್ಲಿ ವಿಡಿಯೋ ಅಪ್ಲೋಡ್ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕ್ರಿಕೆಟ್ ಆಟಗಾರರಾದ ಹರ್ಭಜನ್ ಸಿಂಗ್, ಸುರೇಶ್ ರೈನಾ, ಯುವರಾಜ್ ಸಿಂಗ್ ಹಾಗೂ ಗುರ್ಕೀರತ್ ಮಾನ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಅಂಗವೈಕಲ್ಯ ಅಣಕಿಸಿದಂತೆ ವಿಡಿಯೋ ಮಾಡಿ, ಮಾಡಿದ್ದ ಮಾಜಿ ಕ್ರಿಕೆಟಿಗರಾದ ಹರ್ಭಜನ್ ಸಿಂಗ್, ಸುರೇಶ್ ರೈನಾ, ಯುವರಾಜ್ ಸಿಂಗ್ ಹಾಗೂ ಗುರ್ಕಿರತ್ ಮಾನ್ ಅವರು, ಸಾಮಾಜಿಕ ಜಾಲತಾಣವಾದ ಇನ್ಸ್ಸ್ಟಾಗ್ರಾಮ್ನಲ್ಲಿ ವಿಡಿಯೋ ಶೇರ್ ಮಾಡಿದ್ದರು.
ವಿಡಿಯೋ ನೋಡುತ್ತಿದ್ದಂತೆ ಮಾಜಿ ಕ್ರಿಕೆಟಿಗರ ವಿರುದ್ಧ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಮಾಜಿ ಕ್ರಿಕೆಟಿಗರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಈ ಬಗ್ಗೆ ನ್ಯಾಷನಲ್ ಸೆಂಟರ್ ಫಾರ್ ಪ್ರೊಮೋಷನ್ ಆಫ್ ಎಂಪ್ಲಾಯ್ ಮೆಂಟ್ ಫಾರ್ ಡಿಸೇಬಲ್ಡ್ ಪೀಪಲ್ ಕಾರ್ಯನಿರ್ವಾಹಕ ನಿರ್ದೇಶಕ ಅರ್ಮನ್ ಅಲಿ ಅವರು ಠಾಣೆಗೆ ದೂರು ಸಲ್ಲಿಸಿದ್ದಾರೆ.
ದೂರು ದಾಖಲಾಗುತ್ತಿದ್ದಂತೆ ಹೇಳಿಕೆ ನೀಡಿರುವ ಹರ್ಭಜನ್ ಸಿಂಗ್ ಅವರು, ಯಾರಿಗೂ ಅವಮಾನ ಮಾಡುವ ಉದ್ದೇಶ ಹೊಂದಿರಲಿಲ್ಲವೆಂದು ಸ್ಪಷ್ಟೀಕರಣ ನೀಡಿದ್ದಾರೆ.
ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…
ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…
ವೈದ್ಯರು ಮೊಬೈಲ್ ಟಾರ್ಚ್ ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…
ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…