ದೇಶ- ವಿದೇಶ

ಸಂಪತ್ತು ಮರುಹಂಚಿಕೆಗೆ ಸಮೀಕ್ಷೆ: ರಾಹುಲ್‌ ಘೋಷಣೆ

ಹೈದರಾಬಾದ್: ಲೋಕಸಭಾ ಚುನಾವಾಣೆಯಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ, ದೇಶದ ಸಂಪತ್ತು ಯಾರ ಬಳಿ ಇದೆ ಎಂದು ತಿಳಿಯಲು ಹಣಕಾಸು ಮತ್ತು ಸಾಂಸ್ಥಿಕ ಸಮೀಕ್ಷೆಯನ್ನು ನಡೆಸಲಾಗುವುದು ಮತ್ತು ನಂತರ ಮರುಹಂಚಿಕೆ ಮಾಡಲು ಯೋಜನೆ ರೂಪಿಸಲಿದೆ ಎಂದು ಕಾಂಗ್ರಸ್‌ ನಾಯಕ ರಾಹುಲ್‌ ಗಾಂಧಿ ಘೋಷಿಸಿದ್ದಾರೆ.

ತುಕ್ಕುಗುಡದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಪಕ್ಷದ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ ರಾಹುಲ್‌ ಗಾಂಧಿ, ಕಾಂಗ್ರೆಸ್‌ ದೇಶದಲ್ಲಿ ಅಧಿಕಾರಕ್ಕೆ ಬಂದರೆ ಪ್ರತಿಯೊಂದು ಕ್ಷೇತ್ರದಲ್ಲೂ ಪ್ರತಿ ಸಮುದಾಯಕ್ಕೆ ಪ್ರಾತಿನಿಧ್ಯ ನೀಡಲಾಗುವುದು ಎಂದರು.

ಹಿಂದುಳಿದ ವರ್ಗಗಳು, ಎಸ್ಸಿ, ಎಸ್ಟಿ, ಅಲ್ಪಸಂಖ್ಯಾತರು ಮತ್ತು ಇತರ ಜಾತಿಗಳ ನಿಖರವಾದ ಜನಸಂಖ್ಯೆ ಮತ್ತು ಸ್ಥಿತಿಯನ್ನು ತಿಳಿಯಲು ಜಾತಿ ಗಣತಿಯನ್ನು ನಡೆಸುತ್ತೇವೆ. ನಂತರ, ಆರ್ಥಿಕ ಮತ್ತು ಸಾಂಸ್ಥಿಕ ಸಮೀಕ್ಷೆಯನ್ನು ಪ್ರಾರಂಭಿಸುತ್ತೇವೆ, ಬಳಿಕ ನಾವು ಭಾರತದ ಸಂಪತ್ತನ್ನು ಹಂಚುವ ಐತಿಹಾಸಿಕ ಕಾರ್ಯವನ್ನು ಕೈಗೆತ್ತಿಕೊಳ್ಳುತ್ತೇವೆ ಎಂದು ಪ್ರತಿಪಾದಿಸಿದರು.

ಭಾರತದ ಒಟ್ಟು ಜನಸಂಖ್ಯೆಯಲ್ಲಿ ಶೇಕಡ 90ರಷ್ಟು ಮಂದಿ ಹಿಂದುಳಿದವರು, ಎಸ್ಸಿ, ಎಸ್ಟಿ ಮತ್ತು ಅಲ್ಪಸಂಖ್ಯಾತರು ಮತ್ತು ಆದಿವಾಸಿಗಳಿದ್ದಾರೆ. ಆದರೆ ಸರ್ಕಾರಿ ಉದ್ಯೋಗಗಳು, ದೊಡ್ಡ ಕಂಪನಿಗಳು ಮತ್ತು ಇತರ ಕ್ಷೇತ್ರಗಳಲ್ಲಿ ಇವರ ಪಾಲು ನಗಣ್ಯ, ಶೇ 90 ರಷ್ಟು ಮಂದಿಗೆ ದೇಶದ ಆಡಳಿತದ ನಿರ್ಧಾರ ಕೈಗೊಳ್ಳುವ ಅವಕಾಶ ಇಲ್ಲ. ದೇಶವನ್ನು ಆಳುವ 90 ಐಎಎಸ್‌ ಅಧಿಕಾರಿಗಳ ಪೈಕಿ ಕೇವಲ ಮೂವು ಹಿಂದುಳಿದವರು, ಒಬ್ಬ ಆದಿವಾಸಿ ಮತ್ತು ಮೂವರು ದಲಿತರು ಎಂದು ಅಂಕಿ ಅಂಶ ನೀಡಿದರು.

ಒಟ್ಟು 100ರೂ. ಖರ್ಚು ಮಾಡುವುದಾದಲ್ಲಿ, ಆ ಪೈಕಿ ಹಿಂದುಳಿದ ವರ್ಗಗಳ ಅಧಿಕಾರಿಗಳು ಒಳಗೊಳ್ಳುವುದು ಕೇವಲ 6 ರೂಪಾಯಿ ಖರ್ಚು ಮಾಡುವ ನಿರ್ಧಾರದಲ್ಲಿ ಮಾತ್ರ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಮುಸ್ಲಿಂ ಸಮುದಾಯದ ಜಹಾನ ಈಗ ವೈದ್ಯೆ!

ಕೋಟೆ ತಾಲ್ಲೂಕಿನ ಮುಸ್ಲಿಂ ಸಮುದಾಯದ ಪ್ರಥಮ ವೈದ್ಯೆ ಎಂಬ ಹೆಗ್ಗಳಿಕೆ ಹೊಂದಿದ ಜಹಾನ   ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ…

4 hours ago

ಚೇತನ್ ಅಹಿಂಸಾ ಗಡಿಪಾರಿಗೆ ಆಗ್ರಹ

ಅಭಿಮಾನಿಗಳು, ನಿರ್ಮಾಪಕರ ಸಂಘದ ಆಕ್ರೋಶ ಬೆಂಗಳೂರು : ಪದ್ಮಭೂಷಣ ಡಾ.ರಾಜ್‌ಕುಮಾರ್ ಅವರ ಸ್ಮಾರಕದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಹೇಳಿಕೆ…

8 hours ago

ಕೊಡಗು | ಗುಂಡು ಹೊಡೆದುಕೊಂಡು ಶಿಕ್ಷಕಿ ಆತ್ಮಹತ್ಯೆ

ಮಡಿಕೇರಿ : ಶಿಕ್ಷಕಿಯೊಬ್ಬರು ಬಂದೂಕಿನಿಂದ ಗುಂಡು ಹೊಡೆದುಕೊಂಡು ಸಾವಿಗೆ ಶರಣಾದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಚೇರಂಬಾಣೆಯಲ್ಲಿ ನಡೆದಿದೆ.…

8 hours ago

ಬಿಜೆಪಿಗೆ ಸೇರ್ಪಡೆಗೊಂಡ 7 ರಾಜ್ಯಸಭಾ ಸದಸ್ಯರ ವಿರುದ್ಧ ಕ್ರಮಕ್ಕೆ ಎಎಪಿ ಆಗ್ರಹ

ನವದೆಹಲಿ : ಆಮ್ ಆದ್ಮಿ ಪಕ್ಷದಲ್ಲಿ ಭಾರೀ ರಾಜಕೀಯ ಬೆಳವಣಿಗೆ ನಡೆದಿದ್ದು, ಪಕ್ಷ ತೊರೆದು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ)…

9 hours ago

ಶಾಲೆಗಳಲ್ಲಿ ದಿನಪತ್ರಿಕೆ ಓದುವುದು ಇನ್ಮುಂದೆ ಕಡ್ಡಾಯ

ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಪ್ರತಿದಿನ ದಿನಪತ್ರಿಕೆ ಓದಿಸುವುದನ್ನು ಕಡ್ಡಾಯಗೊಳಿಸಲು ಶಿಕ್ಷಣ…

9 hours ago

ಜನಗಣತಿಯಲ್ಲಿ ಪ್ರತಿಯೊಬ್ಬ ನಾಗರಿಕನ ಪಾಲ್ಗೊಳ್ಳುವಿಕೆ ಅತ್ಯಗತ್ಯ: ಪ್ರಧಾನಿ ಮೋದಿ

ನವದೆಹಲಿ : ದೇಶದಾದ್ಯಂತ ನಡೆಯುತ್ತಿರುವ ಜನಗಣತಿ ಕಾರ್ಯವು ಕೇವಲ ಸರ್ಕಾರದ ಕೆಲಸವಲ್ಲ, ಬದಲಾಗಿ ಪ್ರತಿ ನಾಗರಿಕರ ಜವಾಬ್ದಾರಿಯಾಗಿದೆ. ಇದರಲ್ಲಿ ಎಲ್ಲರ…

10 hours ago