ಹೈದರಾಬಾದ್: ಲೋಕಸಭಾ ಚುನಾವಾಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ದೇಶದ ಸಂಪತ್ತು ಯಾರ ಬಳಿ ಇದೆ ಎಂದು ತಿಳಿಯಲು ಹಣಕಾಸು ಮತ್ತು ಸಾಂಸ್ಥಿಕ ಸಮೀಕ್ಷೆಯನ್ನು ನಡೆಸಲಾಗುವುದು ಮತ್ತು ನಂತರ ಮರುಹಂಚಿಕೆ ಮಾಡಲು ಯೋಜನೆ ರೂಪಿಸಲಿದೆ ಎಂದು ಕಾಂಗ್ರಸ್ ನಾಯಕ ರಾಹುಲ್ ಗಾಂಧಿ ಘೋಷಿಸಿದ್ದಾರೆ.
ತುಕ್ಕುಗುಡದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಪಕ್ಷದ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ ರಾಹುಲ್ ಗಾಂಧಿ, ಕಾಂಗ್ರೆಸ್ ದೇಶದಲ್ಲಿ ಅಧಿಕಾರಕ್ಕೆ ಬಂದರೆ ಪ್ರತಿಯೊಂದು ಕ್ಷೇತ್ರದಲ್ಲೂ ಪ್ರತಿ ಸಮುದಾಯಕ್ಕೆ ಪ್ರಾತಿನಿಧ್ಯ ನೀಡಲಾಗುವುದು ಎಂದರು.
ಹಿಂದುಳಿದ ವರ್ಗಗಳು, ಎಸ್ಸಿ, ಎಸ್ಟಿ, ಅಲ್ಪಸಂಖ್ಯಾತರು ಮತ್ತು ಇತರ ಜಾತಿಗಳ ನಿಖರವಾದ ಜನಸಂಖ್ಯೆ ಮತ್ತು ಸ್ಥಿತಿಯನ್ನು ತಿಳಿಯಲು ಜಾತಿ ಗಣತಿಯನ್ನು ನಡೆಸುತ್ತೇವೆ. ನಂತರ, ಆರ್ಥಿಕ ಮತ್ತು ಸಾಂಸ್ಥಿಕ ಸಮೀಕ್ಷೆಯನ್ನು ಪ್ರಾರಂಭಿಸುತ್ತೇವೆ, ಬಳಿಕ ನಾವು ಭಾರತದ ಸಂಪತ್ತನ್ನು ಹಂಚುವ ಐತಿಹಾಸಿಕ ಕಾರ್ಯವನ್ನು ಕೈಗೆತ್ತಿಕೊಳ್ಳುತ್ತೇವೆ ಎಂದು ಪ್ರತಿಪಾದಿಸಿದರು.
ಭಾರತದ ಒಟ್ಟು ಜನಸಂಖ್ಯೆಯಲ್ಲಿ ಶೇಕಡ 90ರಷ್ಟು ಮಂದಿ ಹಿಂದುಳಿದವರು, ಎಸ್ಸಿ, ಎಸ್ಟಿ ಮತ್ತು ಅಲ್ಪಸಂಖ್ಯಾತರು ಮತ್ತು ಆದಿವಾಸಿಗಳಿದ್ದಾರೆ. ಆದರೆ ಸರ್ಕಾರಿ ಉದ್ಯೋಗಗಳು, ದೊಡ್ಡ ಕಂಪನಿಗಳು ಮತ್ತು ಇತರ ಕ್ಷೇತ್ರಗಳಲ್ಲಿ ಇವರ ಪಾಲು ನಗಣ್ಯ, ಶೇ 90 ರಷ್ಟು ಮಂದಿಗೆ ದೇಶದ ಆಡಳಿತದ ನಿರ್ಧಾರ ಕೈಗೊಳ್ಳುವ ಅವಕಾಶ ಇಲ್ಲ. ದೇಶವನ್ನು ಆಳುವ 90 ಐಎಎಸ್ ಅಧಿಕಾರಿಗಳ ಪೈಕಿ ಕೇವಲ ಮೂವು ಹಿಂದುಳಿದವರು, ಒಬ್ಬ ಆದಿವಾಸಿ ಮತ್ತು ಮೂವರು ದಲಿತರು ಎಂದು ಅಂಕಿ ಅಂಶ ನೀಡಿದರು.
ಒಟ್ಟು 100ರೂ. ಖರ್ಚು ಮಾಡುವುದಾದಲ್ಲಿ, ಆ ಪೈಕಿ ಹಿಂದುಳಿದ ವರ್ಗಗಳ ಅಧಿಕಾರಿಗಳು ಒಳಗೊಳ್ಳುವುದು ಕೇವಲ 6 ರೂಪಾಯಿ ಖರ್ಚು ಮಾಡುವ ನಿರ್ಧಾರದಲ್ಲಿ ಮಾತ್ರ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…