ದೇಶ- ವಿದೇಶ

ಐಎಎಸ್‌ ಸೇವೆಯಿಂದಲೇ ಪೂಜಾ ಖೇಡ್ಕರ್‌ ವಜಾ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಅಧಿಕಾರ ದುರ್ಬಳಕೆ ಸೇರಿ ಹಲವು ವಿವಾದಗಳ ಆರೋಪ ಹೊತ್ತಿದ್ದ ಮಾಜಿ ಐಎಎಸ್‌ ಅಧಿಕಾರಿ ಪೂಜಾ ಖೇಡ್ಕರ್‌ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಐಎಎಸ್‌ ಸೇವೆಯಿಂದ ವಜಾಗೊಳಿಸುವಂತೆ ಕೇಂದ್ರ ಸರ್ಕಾರ ಇಂದು ಆದೇಶಿಸಿದೆ.

ಭಾರತೀಯ ಆಡಳಿತ ಸೇವೆಗೆ ಸೇರಲು ಇತರ ಹಿಂದುಳಿದ ವರ್ಗಗಳ ಮತ್ತು ಅಂಗವಿಕಲ ಕೋಟಾದಡಿ ನಕಲಿ ದಾಖಲೆಗಳನ್ನ ನೀಡಿ ವಂಚಿಸಿರುವ ಆರೋಪ ಪೂಜಾ ಅವರ ಮೇಲಿದೆ. ಆದರೆ, ಈ ಆರೋಪಗಳನ್ನು ಅವರು ನಿರಾಕರಿಸಿದ್ದಾರೆ.

ಐಎಎಸ್‌ ನಿಯಮಗಳು,1954ರ ನಿಯಮ 12ರ ಅಡಿಯಲ್ಲಿ ಪೂಜಾ ಅವರನ್ನು ಭಾರತೀಯ ಆಡಳಿತ ಸೇವೆಯಿಂದ ತಕ್ಷಣವೇ ಜಾರಿಗೆ ಬರುವಂತೆ ಕೇಂದ್ರ ಸರ್ಕಾರವು ಆದೇಶಿಸಿದೆ.

ಪೂಜಾ ಅವರು ಮಹಾರಾಷ್ಟ್ರ ಕೇಡರ್‌ನಲ್ಲಿ ಪ್ರೊಬೇಷನರಿ ಐಎಎಸ್‌ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

4 mins ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

3 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

3 hours ago

ನೈಸ್ ಯೋಜನೆ ಸರ್ಕಾರದ ವಶಕ್ಕೆ ; ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದು ಒತ್ತಾಯಿಸಿದ ಹೆಚ್.ಡಿ.ಕುಮಾರಸ್ವಾಮಿ

ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…

4 hours ago

ಚಾಮರಾಜನಗರ ಶೂಟೌಟ್‌ ಪ್ರಕರಣ: ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…

5 hours ago

ಸಿಎಂ ಆದ ಬಳಿಕ ಮೊದಲ ಬಾರಿಗೆ ಕೊಡಗಿಗೆ ಡಿಕೆಶಿ ಭೇಟಿ

ಕೊಡಗು: ಸಿಎಂ ಡಿ.ಕೆ.ಶಿವಕುಮಾರ್‌ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಕೊಡವತಿಯರು…

6 hours ago