ದೇಶ- ವಿದೇಶ

ಬಡತನ ಪ್ರಮಾಣ ಗಣನೀಯ ಇಳಿಕೆ: ನಿರ್ಮಲಾ

ಹೊಸದಿಲ್ಲಿ: ಕಳೆದ 12 ವರ್ಷಗಳಿಂದ ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ಶಿಸ್ತುಬದ್ಧ ಆರ್ಥಿಕ ನಿರ್ವಹಣೆ ನಡೆಯುತ್ತಿರುವುದರಿಂದ ಭಾರತದ ಜಿಡಿಪಿ ದರ ಶೇ.7.2 ರಷ್ಟು ಬೆಳವಣಿಗೆ ಸಾಧಿಸಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪ್ರಶಂಸಿಸಿದ್ದಾರೆ.

ಸಂಸತ್‌ನಲ್ಲಿ 2026-2027 ನೇ ಸಾಲಿನ ಬಜೆಟ್ ಮಂಡನೆಯಲ್ಲಿ ಮಾತನಾಡಿದ ಅವರು, ಭಾರತ ಇಂದು ಜಾಗತಿಕ ಮಟ್ಟದಲ್ಲಿ ಎಲ್ಲಾ ಕ್ಷೇತ್ರಗಳಲ್ಲಿಯೂ ಮುಂಚೂಣಿಯಲ್ಲಿದೆ. 12 ವರ್ಷಗಳಿಂದ ಮೋದಿ ನಾಯಕತ್ವದಲ್ಲಿ ದೇಶದ ಆರ್ಥಿಕತೆ ಪ್ರಗತಿಯಲ್ಲಿದೆ. ಜಿಡಿಪಿ ದರ-7.2ರಷ್ಟು ಏರಿಕೆಯಾಗುವ ಮೂಲಕ ವಿಶ್ವಮಟ್ಟದಲ್ಲಿ ನಂ.1 ಸ್ಥಾನಕ್ಕೆ ಕೊಂಡೊಯ್ಯುತ್ತಿದೆ ಎಂದು ಹೇಳಿದರು.

ಮಾಘ ಹುಣ್ಣಿಮೆ ಹಾಗೂ ರವಿದಾಸ್ ಅವರ ಜನ್ಮದಿನಾಚರಣೆಯಂದು ಸಂಸತ್ ಬಜೆಟ್ ಮಂಡನೆ ಮಾಡುತ್ತಿರುವುದು ನನಗೆ ಅತ್ಯಂತ ಹೆಮ್ಮೆಯ ಕ್ಷಣವಾಗಿದೆ. ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡ, ಬಡವರು, ಆದಿವಾಸಿಗಳು ಸೇರಿದಂತೆ ಎಲ್ಲಾ ಸಮುದಾಯಗಳ ಅಭಿವೃದ್ಧಿಗೆ ಸರ್ಕಾರ ಪಣ ತೊಟ್ಟಿದೆ ಎಂದರು.

ಜಿಡಿಪಿ ದರ ಹೆಚ್ಚಳವಾಗುತ್ತಿರುವುದರಿಂದ ದೇಶದಲ್ಲಿ ಬಡತನದ ಪ್ರಮಾಣ ಗಣನೀಯವಾಗಿ ಇಳಿಕೆಯಾಗುತ್ತದೆ. ಶಿಸ್ತುಬದ್ಧ ಆರ್ಥಿಕ ನಿರ್ವಹಣೆ ಮತ್ತು ಜನರ ಬಗ್ಗೆ ನಮ್ಮ ಸರ್ಕಾರ ಇಟ್ಟುಕೊಂಡ ಬದ್ಧತೆಯೇ ಇದಕ್ಕೆ ಪ್ರಮುಖ ಕಾರಣ ಎಂದರು.

ಜಾಗತಿಕ ಮಟ್ಟದಲ್ಲಿ ಭಾರತ ಪ್ರಮುಖ ರಫ್ತುದಾರ ರಾಷ್ಟ್ರವಾಗಿ ಹೊರಹೊಮ್ಮಿದೆ. ಉತ್ಪಾದನಾ ವಲಯದಲ್ಲೂ ಬೇರೆ ದೇಶಗಳಿಗೆ ಹೋಲಿಸಿದರೆ ನಾವು ಮೊದಲ ಸ್ಥಾನದಲ್ಲಿದ್ದೇವೆ. ಆತ್ಮನಿರ್ಭರ ಪ್ರಗತಿಯು ಎಲ್ಲಾ ಕ್ಷೇತ್ರಗಳಲ್ಲಿಯೂ ಕಾಣುತ್ತಿದೆ. ಉದ್ಯೋಗ ಸೃಷ್ಟಿಗೂ ನಮ್ಮ ಸರ್ಕಾರ ಹೆಚ್ಚಿನ ಗಮನ ಹರಿಸಿದೆ ಎಂದು ತಿಳಿಸಿದರು.

ವರ್ಷದಿಂದ ವರ್ಷಕ್ಕೆ ಸುಧಾರಣಾ ಕ್ರಮಗಳನ್ನು ತೆಗೆದುಕೊಂಡ ಪರಿಣಾಮ ಭಾರತ ಯಾವುದೇ ಮುಂದುವರಿದ ರಾಷ್ಟ್ರಗಳಿಗಿಂತ ಕಡಿಮೆ ಇಲ್ಲದೇ ಪ್ರಗತಿ ಸಾಧಿಸುತ್ತಿದೆ. ನಮ್ಮ ಆರ್ಥಿಕ ನಿರ್ವಹಣೆ ಉತ್ತಮ ಸ್ಥಿತಿಯಲ್ಲಿರುವುದರಿಂದ ಪ್ರಗತಿಯ ಬಗ್ಗೆ ಯಾರಿಗೂ ಆತಂಕ ಬೇಡ ಎಂದು ನಿರ್ಮಲಾ ಸೀತಾರಾಮನ್ ದೇಶದ ಜನತೆಗೆ ಆಶ್ವಾಸನೆ ನೀಡಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆಯ ವಿವರ

ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…

14 hours ago

ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ

ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…

14 hours ago

ತಮಿಳುನಾಡಿಗೆ ನಿತ್ಯ 9 ಸಾವಿರ ಕ್ಯೂಸೆಕ್ ನೀರು ಹರಿಸಿ – CWRC ಶಿಫಾರಸು ಎತ್ತಿಹಿಡಿದ CWMA

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…

14 hours ago

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

17 hours ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

17 hours ago

ಓದುಗರ ಪತ್ರ: ಪ್ರೇಕ್ಷಕರ ಆಸಕ್ತಿಗೆ ತಕ್ಕಂತೆ ಕಾರ್ಯಕ್ರಮ ಆಯೋಜಿಸಿ

ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…

17 hours ago