ದೇಶ- ವಿದೇಶ

ಸ್ವರಾಜ್‌ ವಿಶೇಷ ಸರಣಿ ವೀಕ್ಷಿಸಿದ ಪ್ರಹ್ಲಾದ್ ಜೋಶಿ : ಪ್ರದರ್ಶನದ ಕುರಿತು ಸರಣಿ ಟ್ವೀಟ್‌

ನವದೆಹಲಿ: ‘ಸ್ವರಾಜ್‌-ಭಾರತ್ ಕೆ ಸ್ವತಂತ್ರ ಸಂಗ್ರಾಮ ಕಿ ಸಮಗ್ರ ಗಾಥಾ’ ಎಂಬ ಸ್ವಾತಂತ್ರ್ಯ ಹೋರಾಟಗಾರರ ಕುರಿತಾದ ವಿಶಿಷ್ಟ ಸರಣಿ ನಿರ್ಮಾಣ/ ಪ್ರದರ್ಶನದ ಬಗ್ಗೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಕನ್ನಡ, ಹಿಂದಿ, ಇಂಗ್ಲಿಷ್‌ ನಲ್ಲಿ ಸರಣಿ ಟ್ವೀಟ್ ಮಾಡಿದ್ದಾರೆ.

ದೆಹಲಿಯ ಸಂಸತ್ ಭವನದ GMC ಬಾಲಯೋಗಿ ಆಡಿಟೋರಿಯಂನಲ್ಲಿ ಏರ್ಪಡಿಸಲಾಗಿದ್ದ ಈ ವಿಶಿಷ್ಟ ಸರಣಿ ಪ್ರದರ್ಶನವನ್ನು ಪ್ರಧಾನಿ ಮೋದಿ ನೇತೃತ್ವದಲ್ಲಿ ಸ್ವರಾಜ್ ಸಿನಿಮಾ ವೀಕ್ಷಣೆ ವೀಕ್ಷಿಸಿದ ಬಳಿಕ ಸಚಿವ ಪ್ರಹ್ಲಾದ್ ಜೋಶಿ ತಮ್ಮ ಭಾವನಾತ್ಮಕ ಅನಿಸಿಕೆ ಹಂಚಿಕೊಂಡಿದ್ದಾರೆ.

ನಮ್ಮ ಸ್ವಾತಂತ್ರ್ಯ ಹೋರಾಟಗಾರರ ಕುರಿತು ದೂರದರ್ಶನ ನಿರ್ಮಾಣ ಮಾಡಿರುವ ವಿಶಿಷ್ಟ ಸರಣಿ ʼಸ್ವರಾಜ್‌-ಭಾರತ್ ಕೆ ಸ್ವತಂತ್ರ ಸಂಗ್ರಾಮ ಕಿ ಸಮಗ್ರ ಗಾಥಾʼದ ವಿಶೇಷ ಪ್ರದರ್ಶನವನ್ನು ಜಿಎಮ್‌ಸಿ ಬಾಲಯೋಗಿ ಸಭಾಭವನದಲ್ಲಿ ಏರ್ಪಡಿಸಲಾಗಿತ್ತು. ಪ್ರಧಾನಿ ಮೋದಿ ಅವರೊಂದಿಗೆ ಈ ವಿಶೇಷ ಕಾರ್ಯಕ್ರಮದಲ್ಲಿ ವೀರ ದೇಶ ಭಕ್ತರ ಕಥೆಯನ್ನು ವೀಕ್ಷಿಸಿ ಪುಳಕಿತನಾದೆ.

ನಮ್ಮ ಸ್ವಾತಂತ್ರ್ಯ ಹೋರಾಟಗಾರರ ಕುರಿತು ದೂರದರ್ಶನ ನಿರ್ಮಾಣ ಮಾಡಿರುವ ವಿಶಿಷ್ಟ ಸರಣಿ ʼಸ್ವರಾಜ್‌-ಭಾರತ್ ಕೆ ಸ್ವತಂತ್ರ ಸಂಗ್ರಾಮ ಕಿ ಸಮಗ್ರ ಗಾಥಾʼದ ವಿಶೇಷ ಪ್ರದರ್ಶನವನ್ನು ಜಿಎಮ್‌ಸಿ ಬಾಲಯೋಗಿ ಸಭಾಭವನದಲ್ಲಿ ಏರ್ಪಡಿಸಲಾಗಿತ್ತು. ಪ್ರಧಾನಿ ಮೋದಿ ಅವರೊಂದಿಗೆ ಈ ವಿಶೇಷ ಕಾರ್ಯಕ್ರಮದಲ್ಲಿ ವೀರ ದೇಶ ಭಕ್ತರ ಕಥೆಯನ್ನು ವೀಕ್ಷಿಸಿ ಪುಳಕಿತನಾದೆ.
ಉಲ್ಲಾಳದ ರಾಣಿ ಅಬ್ಬಕ್ಕ, ಕೆಳದಿಯ ಶಿವಪ್ಪ ನಾಯಕ್‌ ಮತ್ತು ಕೆಳದಿ ಚೆನ್ನಮ್ಮ ಅವರ ಸಂಕಲ್ಪ, ಹೋರಾಟ ಮತ್ತು ಸಮರ್ಪಣೆ ಕುರಿತು ಸಂಚಿಕೆ ಪ್ರದರ್ಶಿಸಲಾಯಿತು. ಅವರ ದೇಶ ಭಕ್ತಿ ಮತ್ತು ಬಲಿದಾನ ಚಕಿತಗೊಳಿಸುವಂತಹದ್ದು ಹಾಗೂ ಸ್ಫೂರ್ತಿ ನೀಡುವಂತಹದ್ದು.
75 ಸಂಚಿಕೆಯ ಈ ವಿಶೇಷ ಸರಣಿಯನ್ನು ತಾವೆಲ್ಲರೂ ಖಂಡಿತವಾಗಿಯೂ ನೋಡಲೇ ಬೇಕು. ಪ್ರತಿ ಸಂಚಿಕೆಯೂ ನಮ್ಮ ವೀರ ಹಾಗೂ ಸ್ಪೂರ್ತಿಯ ಚಿಲುಮೆಯಂತಿದ್ದ ಹಲವು ನಾಯಕರ ಇತಿಹಾಸವನ್ನು ತಿಳಿಸುತ್ತದೆ ಹಾಗೂ ದೇಶಭಕ್ತಿಯನ್ನು ಮತ್ತಷ್ಟು ಜಾಗೃತಗೊಳಿಸುತ್ತದೆ. ಪ್ರತಿ ಭಾನುವಾರ ರಾತ್ರಿ 9 ಗಂಟೆಗೆ @DDNational ನಲ್ಲಿ ಈ ಸರಣಿ ಪ್ರಸಾರವಾಗಲಿದೆ ಎಂದು ಟ್ವೀಟ್  ಮಾಡಿದ್ದಾರೆ.
andolana

Recent Posts

ಎಚ್‌.ಡಿ.ಕೋಟೆ: ಗುಜರಿ ಗೋಡೌನ್‌ಗೆ ಬೆಂಕಿ: ಲಕ್ಷಾಂತರ ರೂ ಬೆಲೆಬಾಳುವ ಸಾಮಗ್ರಿ ನಾಶ

ಎಚ್.ಡಿ.ಕೋಟೆ: ತಾಲೂಕಿನ ಹ್ಯಾಂಡ್‌ಪೋಸ್ಟ್ ಜಕ್ಕಳ್ಳಿ ಸಮೀಪವಿರುವ ಜಫ್ರುಲ್ಲಾ ಎಂಬುವರಿಗೆ ಸೇರಿದ ಗುಜರಿ ಗೋಡೌನ್‌ಗೆ ಬೆಂಕಿ ತಗುಲಿ, ಲಕ್ಷಾಂತರ ರೂಪಾಯಿ ವೆಚ್ಚದ…

8 hours ago

ವಂದೇ ಭಾರತ್‌ ರೈಲಿನಲ್ಲಿ ಕೊಟ್ಟ ಮೊಸರಿನಲ್ಲಿ ಹುಳು ಪತ್ತೆ: IRCTCಗೆ 10 ಲಕ್ಷ ರೂ ದಂಡ

ಪಾಟ್ನಾ: ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣಿಕರಿಗೆ ನೀಡಿದ ಮೊಸರಿನಲ್ಲಿ ಹುಳುಗಳು ಪತ್ತೆಯಾದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಐಆರ್‌ಸಿಟಿಸಿಗೆ 10…

9 hours ago

ಹನೂರು: ಬಿಆರ್‌ಟಿ ವನ್ಯಜೀವಿ ವ್ಯಾಪ್ತಿಯಲ್ಲಿ ಕಾಡ್ಗಿಚ್ಚು: 80 ಎಕರೆಗೂ ಹೆಚ್ಚು ಅರಣ್ಯ ನಾಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶ ಬೈಲೂರು ವಲಯ ವ್ಯಾಪ್ತಿಯ…

9 hours ago

ಪಾಲಿಕೆ ಬಜೆಟ್‌ ಸತ್ವ ಇಲ್ಲದ ಬಜೆಟ್‌: ಮಾಜಿ ಮೇಯರ್‌ ಶಿವಕುಮಾರ್‌ ಆಕ್ರೋಶ

ಮೈಸೂರು: ಜನಸ್ನೇಹಿ ಪಾದಾಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ ರೂ ಮೀಸಲಿಟ್ಟಿರುವ ಪಾಲಿಕೆಯು ಪಾರಂಪರಿಕ ಕಟ್ಟಡಗಳ ಅಭಿವೃದ್ಧಿಗೆ ನಯಾಪೈಸೆ ಅನುದಾನ…

9 hours ago

ಗುಂಡ್ಲುಪೇಟೆ| ಮದ್ದೂರು ವಲಯದಲ್ಲಿ ಮತ್ತೆರಡು ಹುಲಿ ಪ್ರತ್ಯಕ್ಷ

ಗುಂಡ್ಲುಪೇಟೆ: ತಾಲ್ಲೂಕಿನ ಮದ್ದೂರು ವಲಯದಲ್ಲಿ ಮತ್ತೆರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಹುಲಿಗಳ ಚಲನವಲನದ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ…

9 hours ago

ಬಜೆಟ್‌ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿದ ಸರ್ಕಾರ: ಆರ್‌.ಅಶೋಕ್‌ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಬಜೆಟ್‌ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿರುವುದನ್ನು ಅಧಿವೇಶನದಲ್ಲಿ ಮನವರಿಕೆ ಮಾಡಿಕೊಟ್ಟಿದ್ದೇವೆ. ಹಾಗೆಯೇ ಅನೇಕ ಸಮಸ್ಯೆಗಳನ್ನು…

9 hours ago