ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ನಿಜವಾಗಿಯೂ ಸಂವಿಧಾನವನ್ನು ಗೌರವಿಸುವುದೇ ಆದಲ್ಲಿ ಮನುಸ್ಮೃತಿ ಪ್ರತಿಕೃತಿಯನ್ನು ಸುಟ್ಟುಹಾಕಿ ಎಂದು ವಂಚಿತ್ ಬಹುಜನ್ ಅಘಾಡಿ ಪಕ್ಷದ ಮುಖ್ಯಸ್ಥ ಹಾಗೂ ಡಾ. ಬಿ.ಆರ್ ಅಂಬೇಡ್ಕರ್ ಮೊಮ್ಮಗ ಪ್ರಕಾಶ್ ಅಂಬೇಡ್ಕರ್ ಅವರು ಬಹಿರಂಗ ಸವಾಲು ಹಾಕಿದ್ದಾರೆ.
ಪ್ರಕಾಶ್ ಅಂಬೇಡ್ಕರ್ ಅವರು ತಮ್ಮ ಹೇಳಿಕೆಯಲ್ಲಿ, ಬಿಜೆಪಿ ಮತ್ತು ಕಾಂಗ್ರೆಸ್ಗೆ ನಿಜವಾಗಿಯೂ ಸಂವಿಧಾನದ ಮೇಲೆ ಗೌರವವಿದ್ದರೇ, ಪ್ರೀತಿಸುತ್ತಿದ್ದರೇ ಮನುಸ್ಮೃತಿ ಸುಡುವಂತೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಒತ್ತಾಯಿಸುತ್ತೇನೆ ಎಂದು ಹೇಳಿದ್ದಾರೆ.
ಬಿಜೆಪಿ ಹಾಗೂ ಕಾಂಗ್ರೆಸ್ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರು ಪ್ರತಿಪಾದಿಸಿರುವ ತತ್ವಗಳನ್ನು ಭ್ರಷ್ಟಗೊಳಿಸಿದ್ದಾರೆ. ಆ ಮೂಲಕ ಸಂವಿಧಾನದ ಮೂಲ ಆಶಯಗಳನ್ನು ಹಾಳು ಮಾಡಲು ಈ ಎರಡೂ ಪಕ್ಷಗಳು ಶ್ರಮಿಸಿವೆ. ಆ ಮೂಲಕ ಸಂವಿಧಾನಕ್ಕೆ ಹಾನಿಯುಂಟು ಮಾಡುತ್ತಿವೆ ಎಂದು ದೂರಿದ್ದಾರೆ.
ಅಹಮದಾಬಾದ್ : ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಬುಧವಾರ ಅಪ್ಘಾನಿಸ್ತಾನ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಲೀಗ್ ಪಂದ್ಯವು ಎರಡು…
ಮೈಸೂರು : ನಗರದಲ್ಲಿ ಮಾದಕ ವಸ್ತು ಅಕ್ರಮ ಮಾರಾಟ ಮತ್ತು ಸಾಗಾಟದ ಮೇಲೆ ಸಿಸಿಬಿ ಮತ್ತು ಮಂಡಿ ಠಾಣಾ ಪೊಲೀಸರಿಂದ…
ಬೆಂಗಳೂರು : ರಾಜ್ಯದ ಹೆಮ್ಮೆಯ ಬ್ರ್ಯಾಂಡ್ ನಂದಿನಿ ಉತ್ಪನ್ನಗಳ ನೂತನ ಪ್ರಚಾರ ರಾಯಭಾರಿಯನ್ನಾಗಿ ಹಿರಿಯ ನಟಿ ಸುಧಾರಾಣಿ ಅವರನ್ನು ನೇಮಿಸಲಾಗಿದೆ.…
ಹೊಸದಿಲ್ಲಿ : ಕೇಂದ್ರ ಸರ್ಕಾರದ ಕೃಷಿ, ಕಾರ್ಮಿಕ ಮತ್ತು ಆರ್ಥಿಕ ನೀತಿಗಳನ್ನು ವಿರೋಧಿಸಿ ನಾಳೆ(ಫೆ.12) ಭಾರತ್ ಬಂದ್ಗೆ ಕರೆ ನೀಡಲಾಗಿದೆ.…
ಹೊಸದಿಲ್ಲಿ : ‘ರಾಷ್ಟ್ರಗೀತೆ’ಗೂ ಮುನ್ನ ‘ವಂದೇ ಮಾತರಂ’ ಹಾಡುವುದನ್ನು ಕೇಂದ್ರ ಸರ್ಕಾರ ಕಡ್ಡಾಯ ಮಾಡಿದ್ದು, ಕಾಂಗ್ರೆಸ್ ಕೈಬಿಟ್ಟಿದ್ದ ಚರಣಗಳ ಮರುಸೇರ್ಪಡೆಗೊಳಿಸಿದೆ.…
ಮೈಸೂರು : ಇಂದಿನ ಯುವಜನತೆ ಪುಸ್ತಕಗಳಿಗೆ ಸೀಮಿತವಾಗದೆ, ಮಹಾತ್ಮರ ಚಿಂತನೆಗಳಿಂದ ಪ್ರೇರಣೆ ಪಡೆದು ಆತ್ಮಸ್ಥೈರ್ಯದಿಂದ ಬದುಕು ಕಟ್ಟಿಕೊಳ್ಳಬೇಕು ಎಂದು ಮೈಸೂರು…