ತಿರುಮಲ: ತಿರುಪತಿ ತಿಮ್ಮಪ್ಪನ ದೇವಸ್ಥಾನಕ್ಕೆ ಮೈಸೂರು ರಾಜಮನೆತನದ ರಾಜಮಾತೆ ಪ್ರಮೋದಾದೇವಿ ಒಡೆಯರ್ ಅವರು 50 ಕೆಜಿ ತೂಕದ ಬೆಳ್ಳಿ ದೀಪಗಳನ್ನು ಕಾಣಿಕೆಯಾಗಿ ನೀಡಿದ್ದಾರೆ.
ಟಿಟಿಡಿ ಅಧ್ಯಕ್ಷ ಬಿ.ಆರ್.ನಾಯ್ಡು ಹಾಗೂ ದೇವಾಲಯದ ಅಧಿಕಾರಿಗಳು ರಂಗನಾಯಕುಲ ಮಂಟಪದಲ್ಲಿ ಬೆಳ್ಳಿ ದೀಪಗಳನ್ನು ಪ್ರಮೋದಾದೇವಿ ಒಡೆಯರ್ ಅವರಿಂದ ಸ್ವೀಕರಿಸಿದರು.
ಪ್ರತಿ ಬೆಳ್ಳಿ ದೀಪ ಸುಮಾರು 50 ಕೆಜಿ ತೂಕವಿದ್ದು, ಎರಡೂ ದೀಪಗಳು ಸೇರಿ ಒಂದು ಕ್ವಿಂಟಾಲ್ ತೂಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸುಮಾರು 300 ವರ್ಷಗಳ ಹಿಂದೆ ಅಂದಿನ ಮೈಸೂರು ಮಹಾರಾಜರು ಬೃಹತ್ ದೀಪಗಳನ್ನು ಕಾಣಿಕೆಯಾಗಿ ನೀಡಿದ್ದರು. ಅವುಗಳನ್ನು ಗರ್ಭಗುಡಿಯಲ್ಲಿ ಬೆಳಗಿಸಲಾಗುತ್ತದೆ. ಮೂರು ಶತಮಾನಗಳ ನಂತರ ಮೈಸೂರಿನ ರಾಜಮಾತೆ ಪ್ರಮೋದಾದೇವಿ ಒಡೆಯರ್ ಅವರು ಮತ್ತೊಮ್ಮೆ ತಿರುಪತಿ ತಿಮ್ಮಪ್ಪನಿಗೆ ಬೆಳ್ಳಿ ದೀಪಗಳನ್ನು ಕಾಣಿಕೆಯಾಗಿ ನೀಡಿದ್ದಾರೆ
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ಕಾಂಗ್ರೆಸ್ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…
ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…