ದೇಶ- ವಿದೇಶ

ಉಪವಾಸ ಸತ್ಯಗ್ರಹ ನಡೆಸುತ್ತಿದ್ದ ಪ್ರಶಾಂತ್‌ ಕಿಶೋರ್‌ ಬಂಧನ

ಬಿಹಾರ:‌ ಪಟ್ನಾದ ಗಾಂಧಿ ಮೈದಾನದಲ್ಲಿ ಅಮರಣಾಂತ ಉಪವಾಸ ಸತ್ಯಗ್ರಹ ನಡೆಸುತ್ತಿದ್ದ ಜನ್‌ ಸೂರಜ್‌ ಪಕ್ಷದ ಸಂಸ್ಥಾಪಕ ಪ್ರಶಾಂತ್‌ ಕಿಶೋರ್‌ ಅವರನ್ನು ಬಿಹಾರ ಪೊಲೀಸರು ಬಂಧಿಸಿದ್ದಾರೆ.

ಬಿಹಾರ ಲೋಕಸೇವಾ ಆಯೋಗ ನಡೆಸಿದ್ದ 70ನೇ ಸಂಯೋಜಿತ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯಾಗಿತ್ತು. ಈ ಪರೀಕ್ಷೆ ರದ್ದತಿಗೆ ಅಲ್ಲಿನ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದು, ಅವರಿಗೆ ಕೈ ಜೋಡಿಸಿ ಪ್ರಶಾಂತ್‌ ಕಿಶೋರ್‌ ಅನಿರ್ಧಿಷ್ಟಾವಧಿ ಸತ್ಯಾಗ್ರಹ ಕೈಗೊಂಡಿದ್ದರು.

ಈ ಸಂಬಂಧ ಬಿಹಾರ ಪೊಲೀಸರು ಪ್ರಶಾಂತ್‌ ಕಿಶೋರ್‌ ಅವರನ್ನು ಬಂದಿಸಿದ್ದು, ಚಿಕಿತ್ಸೆಗಾಗಿ ಏಮ್ಸ್‌ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆ ನಿರಾಕರಿಸಿರುವ ಅವರು ಪರೀಕ್ಷೆ ರದ್ದತಿಗೆ ಅಮರಣಾಂತ ಉಪವಾಸ ಕೈಗೊಳ್ಳಲಿದ್ದಾರೆ ಎಂದು ವರದಿಯಾಗಿದೆ.

ಚುನಾವಣಾ ತಂತ್ರಗಾರರಾಗಿದ್ದ ಪ್ರಶಾಂತ್‌ ಕಿಶೋರ್‌ ಇತ್ತೀಚಿನ ದಿನಗಳಲ್ಲಿ ಜನ್‌ ಸೂರಜ್‌ ಪಕ್ಷ ಸ್ಥಾಪನೆಯ ಮೂಲಕ ಪೂರ್ಣಾವಧಿ ರಾಜಕೀಯಕ್ಕೆ ಧುಮುಕಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ರಾಜ್ಯದಲ್ಲಿ ಬೈಕ್‌ ಟ್ಯಾಕ್ಸಿಗಳಿಗೆ ಗ್ರೀನ್ ಸಿಗ್ನಲ್‌ ವಿಚಾರ: ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು.!

ಬೆಂಗಳೂರು: ರಾಜ್ಯದಲ್ಲಿ ಬೈಕ್‌ ಟ್ಯಾಕ್ಸಿಗಳಿಗೆ ಹೈಕೋರ್ಟ್‌ ಗ್ರೀನ್‌ ಸಿಗ್ನಲ್‌ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ. ಈ…

12 mins ago

ಮೈಸೂರು| ರಾಜ್ಯಪಾಲರ ವಿರುದ್ಧ ಕಾಂಗ್ರೆಸ್‌ ಕಾರ್ಯಕರ್ತರ ಪ್ರತಿಭಟನೆ

ಮೈಸೂರು: ರಾಜ್ಯದ ಉಭಯ ಸದನದಲ್ಲಿ ನಿನ್ನೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್‌ ಅವರು ಸರ್ಕಾರದ ಭಾಷಣವನ್ನು ಮೊಟಕುಗೊಳಿಸಿ ಹೊರ ನಡೆದ ನಡೆಯನ್ನು…

35 mins ago

ಕರ್ನಾಟಕದಲ್ಲಿ ಬೈಕ್‌ ಟ್ಯಾಕ್ಸಿ ಸೇವೆ ಮುಂದುವರಿಸಲು ಹೈಕೋರ್ಟ ಗ್ರೀನ್‌ ಸಿಗ್ನಲ್‌

ಬೆಂಗಳೂರು: ರಾಜ್ಯದಲ್ಲಿ ಸರ್ಕಾರ ಬೈಕ್‌ ಟ್ಯಾಕ್ಸಿಗಳಿಗೆ ಲೈಸೆನ್ಸ್‌ ನಿರಾಕರಿಸುವಂತಿಲ್ಲ ಎಂದು ಹೈಕೋರ್ಟ ತೀರ್ಪು ನೀಡಿದೆ. ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ವಿಭು…

1 hour ago

ಹನೂರು| ಅಪರಿಚಿತ ವಾಹನ ಡಿಕ್ಕಿ: ಬೈಕ್‌ ಸವಾರ ಸಾವು

ಹನೂರು: ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳಿ ಮಾದಪ್ಪನ ದರ್ಶನ ಪಡೆದು ವಾಪಸ್‌ ಬರುತ್ತಿದ್ದ ವೇಳೆ ಅಪರಿಚಿತ ವಾಹನವೊಂದು ಬೈಕ್‌ಗೆ ಡಿಕ್ಕಿಯಾದ…

1 hour ago

ಸಿಸಿ ಕ್ಯಾಮರಾ ಸುಳಿವು ಆಧರಿಸಿ ಇಬ್ಬರು ಜಾನುವಾರು ಕಳ್ಳರ ಬಂಧನ

ನಂಜನಗೂಡು: ಸಿಸಿ ಕ್ಯಾಮರಾ ಸುಳಿವು ಆಧರಿಸಿ ಇಬ್ಬರು ಜಾನುವಾರು ಕಳ್ಳರನ್ನು ಬಂಧಿಸುವಲ್ಲಿ ನಂಜನಗೂಡು ಟೌನ್‌ ಪೊಲೀಸರು ಯಶಸ್ವಿಯಾಗಿದ್ದಾರೆ. ಮೈಸೂರಿನ ಕೆಸರೆ…

2 hours ago

ಹನೂರು| ಲೊಕ್ಕನಹಳ್ಳಿ-ಒಡೆಯರಪಾಳ್ಯ ಮಾರ್ಗಮಧ್ಯೆ ಎರಡು ಚಿರತೆಗಳು ಪ್ರತ್ಯಕ್ಷ: ಆತಂಕದಲ್ಲಿ ವಾಹನ ಸವಾರರು

ಮಹಾದೇಶ್‌ ಎಂ ಗೌಡ  ಹನೂರು: ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಭಕ್ತನ ಮೇಲೆ ಚಿರತೆ…

2 hours ago