ಬಿಹಾರ: ಪಟ್ನಾದ ಗಾಂಧಿ ಮೈದಾನದಲ್ಲಿ ಅಮರಣಾಂತ ಉಪವಾಸ ಸತ್ಯಗ್ರಹ ನಡೆಸುತ್ತಿದ್ದ ಜನ್ ಸೂರಜ್ ಪಕ್ಷದ ಸಂಸ್ಥಾಪಕ ಪ್ರಶಾಂತ್ ಕಿಶೋರ್ ಅವರನ್ನು ಬಿಹಾರ ಪೊಲೀಸರು ಬಂಧಿಸಿದ್ದಾರೆ.
ಬಿಹಾರ ಲೋಕಸೇವಾ ಆಯೋಗ ನಡೆಸಿದ್ದ 70ನೇ ಸಂಯೋಜಿತ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯಾಗಿತ್ತು. ಈ ಪರೀಕ್ಷೆ ರದ್ದತಿಗೆ ಅಲ್ಲಿನ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದು, ಅವರಿಗೆ ಕೈ ಜೋಡಿಸಿ ಪ್ರಶಾಂತ್ ಕಿಶೋರ್ ಅನಿರ್ಧಿಷ್ಟಾವಧಿ ಸತ್ಯಾಗ್ರಹ ಕೈಗೊಂಡಿದ್ದರು.
ಈ ಸಂಬಂಧ ಬಿಹಾರ ಪೊಲೀಸರು ಪ್ರಶಾಂತ್ ಕಿಶೋರ್ ಅವರನ್ನು ಬಂದಿಸಿದ್ದು, ಚಿಕಿತ್ಸೆಗಾಗಿ ಏಮ್ಸ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆ ನಿರಾಕರಿಸಿರುವ ಅವರು ಪರೀಕ್ಷೆ ರದ್ದತಿಗೆ ಅಮರಣಾಂತ ಉಪವಾಸ ಕೈಗೊಳ್ಳಲಿದ್ದಾರೆ ಎಂದು ವರದಿಯಾಗಿದೆ.
ಚುನಾವಣಾ ತಂತ್ರಗಾರರಾಗಿದ್ದ ಪ್ರಶಾಂತ್ ಕಿಶೋರ್ ಇತ್ತೀಚಿನ ದಿನಗಳಲ್ಲಿ ಜನ್ ಸೂರಜ್ ಪಕ್ಷ ಸ್ಥಾಪನೆಯ ಮೂಲಕ ಪೂರ್ಣಾವಧಿ ರಾಜಕೀಯಕ್ಕೆ ಧುಮುಕಿದ್ದಾರೆ.
ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…
ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…
ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…
ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…
ಮೋಹಿತ್ ಎಸ್ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…
ರೇಣುಕಾ ನಿಡಗುಂದಿ ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…