ದೇಶ- ವಿದೇಶ

ಯುಪಿಎಸ್‌ಸಿ ನೂತನ ಅಧ್ಯಕ್ಷರಾಗಿ ಪ್ರೀತಿ ಸೂದನ್‌ ಆಯ್ಕೆ

ನವದೆಹಲಿ: ಕೇಂದ್ರ ಲೋಕಸೇವಾ ಆಯೋಗ(ಯುಪಿಎಸ್‌ಸಿ)ದ ನೂತನ ಅಧ್ಯಕ್ಷರಾಗಿ ನಿವೃತ್ತ ಐಎಎಸ್ ಅಧಿಕಾರಿ ಪ್ರೀತಿಸುದನ್ ಆಯ್ಕೆಯಾಗಿದ್ದು, ಆಗಸ್ಟ್‌ 1 ರಂದು ಅಧಿಕಾರ ಸ್ವೀಕರಿಸಲಿದ್ದಾರೆ.

ಟ್ರೈನಿ ಐಎಎಸ್‌ ಅಧಿಕಾರಿ ಪೂಜಾ ಖೇಡ್ಕರ್‌ ವಿವಾದದ ಸಂದರ್ಭದಲ್ಲಿ ಯುಪಿಎಸ್‌ಸಿ ಮಾಜಿ ಅಧ್ಯಕ್ಷ ಮನೋಜ್‌ ಸೋನಿ ರಾಜೀನಾಮೆ ನೀಡಿದ ನಂತರ ಈ ಹುದ್ದೆ ಖಾಲಿಯಾಗಿತ್ತು. ಬಳಿಕ ಕೇಂದ್ರ ಸರ್ಕಾರದ ಶಿಫಾರಸ್ಸಿನ ಮೇರೆಗೆ ಪ್ರೀತಿಸುದನ್ ಅವರನ್ನು ಯುಪಿಎಸ್‌ಸಿ ಅಧ್ಯಕ್ಷರನ್ನಾಗಿ ರಾಷ್ಟಪತಿ ದ್ರೌಪದಿ ಮುರ್ಮು ಅವರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ಆಂಧ್ರಪ್ರದೇಶ ಕೇಡರ್‌ನ 1983 ರ ಬ್ಯಾಚ್‌ನ ಮಾಜಿ ಐಎಎಸ್ ಅಧಿಕಾರಿ ಪ್ರೀತಿ ಸುದನ್, ಕೋವಿಡ್ 19 ವೇಳೆ ಕೇಂದ್ರ ಆರೋಗ್ಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ಅವರು 2020 ರ ಜುಲೈನಲ್ಲಿ ಸೇವೆಯಿಂದ ನಿವೃತ್ತರಾಗಿದ್ದರು.

ಕೇಂದ್ರ ಆರೋಗ್ಯ ಕಾರ್ಯದರ್ಶಿಯಂತಹ ಮಹತ್ವದ ಹುದ್ದೆಗಳನ್ನು ಯಶಸ್ವಿಯಾಗಿ ನಿಭಾಯಿಸಿದ ಕೀರ್ತಿಯು ಇವರಿಗಿದೆ.  ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ಜತೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮತ್ತು ರಕ್ಷಣಾ ಸಚಿವಾಲಯಗಳಲ್ಲಿ ಪ್ರಮುಖ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಪ್ರೀತಿಸುದನ್‌ ಅವರು ಏಪ್ರಿಲ್‌ 2025ರವರೆಗೆ ಈ ಯುಪಿಎಸ್‌ಸಿ ಅಧ್ಯಕ್ಷರಾಗಿ ಮುಂದುವರೆಯಲಿದ್ದಾರೆ.

ಇನ್ನೂ ಟ್ರೈನಿ ಐಎಎಸ್‌ ಪೂಜಾ ಖೇಡ್ಕರ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕಷ್ಟು ವಿವಾದಗಳಿದ್ದು, ಅವರು ಸಲ್ಲಿಸಿರುವ ಎಲ್ಲಾ ದಾಖಲೆಗಳು ನಕಲಿ ಎಂದು ತಿಳಿದುಬಂದಿದ್ದು, ಹೀಗಾಗಿ ಅವರನ್ನು ತರಬೇತಿಯಿಂದ ತಡೆಹಿಡಿಯಲಾಗಿದೆ. ಜತೆಗೆ ಟ್ರೈನಿ ಅಧಿಕಾರಿ ವಿರುದ್ಧ ಯುಪಿಎಸ್‌ಸಿ ಎಫ್‌ಐಆರ್‌ ಕೂಡ ದಾಖಲಿಸಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೈಸೂರು | ಬೆಳ್ಳಂಬೆಳಗ್ಗೆ ಮಚ್ಚಿನಿಂದ ಕೊಚ್ಚಿ ವ್ಯಕ್ತಿಯ ಹತ್ಯೆ!

ಮೈಸೂರು : ಜಿಲ್ಲೆಯ ಟಿ.ನರಸೀಪುರ ಪಟ್ಟಣದಲ್ಲಿ ಬೆಳ್ಳಂಬೆಳಿಗ್ಗೆಯೇ ಮಚ್ಚು ಲಾಂಗುಗಳಿಂದ ದುಷ್ಕರ್ಮಿಗಳು ಹಲ್ಲೆ ನಡೆಸಿ ವ್ಯಕ್ತಿಯೋರ್ವನನ್ನು ಹತ್ಯೆ ಮಾಡಿರುವ ಘಟನೆ…

1 hour ago

ಕೊಲ್ಕತ್ತಾದಲ್ಲಿ ಮೆಸ್ಸಿ ಮೇನಿಯಾ : ಫುಟ್‌ಬಾಲ್‌ ದಂತಕಥೆಗೆ ಭರ್ಜರಿ ಸ್ವಾಗತ

ಕೋಲ್ಕತ್ತಾ : ಇಲ್ಲಿನ ವಿಮಾನ ನಿಲ್ದಾಣದಲ್ಲಿ ಫುಟ್ಬಾಲ್ ಮಾಂತ್ರಿಕ ಲಿಯೋನೆಲ್ ಮೆಸ್ಸಿ ಅವರನ್ನು ನೋಡಲು ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಸೇರಿದ್ದರು.…

3 hours ago

ಟ್ರಂಪ್‌ ಸುಂಕ ಹೇರಿದ್ದ ರದ್ದಿಗೆ ಅಮೆರಿಕ ಸಂಸತ್ತು ನಿಲುವಳಿ

ನ್ಯೂಯಾರ್ಕ್‌ : ಭಾರತದ ಮೇಲೆ ಡೊನಾಲ್ಡ್‌ ಟ್ರಂಪ್‌ ಹೇರಿರುವ ಶೇ.50 ಪ್ರತಿಸುಂಕವನ್ನು ಅಂತ್ಯಗೊಳಿಸಲು ಅಮೆರಿಕದ ಮೂವರು ಸಂಸದರು ನಿಲುವಳಿ ಮಂಡಿಸಿದ್ದಾರೆ.…

3 hours ago

ಘೋರ ದುರಂತ | ಕರ್ತವ್ಯ ನಿರತ KSRTC ಮೇಲೆ ಹರಿದ ಲಾರಿ ; ಸ್ಥಳದಲ್ಲೇ ಸಾವು

ಹಾಸನ : ಕರ್ತವ್ಯದ ವೇಳೆ ಲಾರಿ ಡಿಕ್ಕಿಯಾಗಿ KSRTC ಬಸ್‌ನ ಚೆಕ್ಕಿಂಗ್ ಇನ್ಸ್ಪೆಕ್ಟರ್ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಆಲೂರು…

4 hours ago

ಹವಾಮಾನ ಏರುಪೇರಿನಿಂದಾಗಿ ಕಾಳುಮೆಣಸಿಗೂ ಕಂಟಕ

ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್‌ ಡಿಸೋಜ ಮಡಿಕೇರಿ: ಈ ಬಾರಿಯ…

6 hours ago

ಅವಳಿ ತಾಲ್ಲೂಕುಗಳಲ್ಲಿ ಭತ್ತದ ಕಟಾವು ಜೋರು

ಭೇರ್ಯ ಮಹೇಶ್‌ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…

6 hours ago