ದೇಶ- ವಿದೇಶ

ಯುಪಿಎಸ್‌ಸಿ ನೂತನ ಅಧ್ಯಕ್ಷರಾಗಿ ಪ್ರೀತಿ ಸೂದನ್‌ ಆಯ್ಕೆ

ನವದೆಹಲಿ: ಕೇಂದ್ರ ಲೋಕಸೇವಾ ಆಯೋಗ(ಯುಪಿಎಸ್‌ಸಿ)ದ ನೂತನ ಅಧ್ಯಕ್ಷರಾಗಿ ನಿವೃತ್ತ ಐಎಎಸ್ ಅಧಿಕಾರಿ ಪ್ರೀತಿಸುದನ್ ಆಯ್ಕೆಯಾಗಿದ್ದು, ಆಗಸ್ಟ್‌ 1 ರಂದು ಅಧಿಕಾರ ಸ್ವೀಕರಿಸಲಿದ್ದಾರೆ.

ಟ್ರೈನಿ ಐಎಎಸ್‌ ಅಧಿಕಾರಿ ಪೂಜಾ ಖೇಡ್ಕರ್‌ ವಿವಾದದ ಸಂದರ್ಭದಲ್ಲಿ ಯುಪಿಎಸ್‌ಸಿ ಮಾಜಿ ಅಧ್ಯಕ್ಷ ಮನೋಜ್‌ ಸೋನಿ ರಾಜೀನಾಮೆ ನೀಡಿದ ನಂತರ ಈ ಹುದ್ದೆ ಖಾಲಿಯಾಗಿತ್ತು. ಬಳಿಕ ಕೇಂದ್ರ ಸರ್ಕಾರದ ಶಿಫಾರಸ್ಸಿನ ಮೇರೆಗೆ ಪ್ರೀತಿಸುದನ್ ಅವರನ್ನು ಯುಪಿಎಸ್‌ಸಿ ಅಧ್ಯಕ್ಷರನ್ನಾಗಿ ರಾಷ್ಟಪತಿ ದ್ರೌಪದಿ ಮುರ್ಮು ಅವರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ಆಂಧ್ರಪ್ರದೇಶ ಕೇಡರ್‌ನ 1983 ರ ಬ್ಯಾಚ್‌ನ ಮಾಜಿ ಐಎಎಸ್ ಅಧಿಕಾರಿ ಪ್ರೀತಿ ಸುದನ್, ಕೋವಿಡ್ 19 ವೇಳೆ ಕೇಂದ್ರ ಆರೋಗ್ಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ಅವರು 2020 ರ ಜುಲೈನಲ್ಲಿ ಸೇವೆಯಿಂದ ನಿವೃತ್ತರಾಗಿದ್ದರು.

ಕೇಂದ್ರ ಆರೋಗ್ಯ ಕಾರ್ಯದರ್ಶಿಯಂತಹ ಮಹತ್ವದ ಹುದ್ದೆಗಳನ್ನು ಯಶಸ್ವಿಯಾಗಿ ನಿಭಾಯಿಸಿದ ಕೀರ್ತಿಯು ಇವರಿಗಿದೆ.  ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ಜತೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮತ್ತು ರಕ್ಷಣಾ ಸಚಿವಾಲಯಗಳಲ್ಲಿ ಪ್ರಮುಖ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಪ್ರೀತಿಸುದನ್‌ ಅವರು ಏಪ್ರಿಲ್‌ 2025ರವರೆಗೆ ಈ ಯುಪಿಎಸ್‌ಸಿ ಅಧ್ಯಕ್ಷರಾಗಿ ಮುಂದುವರೆಯಲಿದ್ದಾರೆ.

ಇನ್ನೂ ಟ್ರೈನಿ ಐಎಎಸ್‌ ಪೂಜಾ ಖೇಡ್ಕರ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕಷ್ಟು ವಿವಾದಗಳಿದ್ದು, ಅವರು ಸಲ್ಲಿಸಿರುವ ಎಲ್ಲಾ ದಾಖಲೆಗಳು ನಕಲಿ ಎಂದು ತಿಳಿದುಬಂದಿದ್ದು, ಹೀಗಾಗಿ ಅವರನ್ನು ತರಬೇತಿಯಿಂದ ತಡೆಹಿಡಿಯಲಾಗಿದೆ. ಜತೆಗೆ ಟ್ರೈನಿ ಅಧಿಕಾರಿ ವಿರುದ್ಧ ಯುಪಿಎಸ್‌ಸಿ ಎಫ್‌ಐಆರ್‌ ಕೂಡ ದಾಖಲಿಸಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

12 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

16 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

16 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

16 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

16 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

17 hours ago