ಹರಿಯಾಣ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ರಫೇಲ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದರು.
ಇಂದು ಬೆಳಿಗ್ಗೆ ದ್ರೌಪದಿ ಮುರ್ಮು ಅವರು ಹರಿಯಾಣದ ಅಂಬಾಲದಲ್ಲಿರುವ ವಾಯುಪಡೆ ನಿಲ್ದಾಣಕ್ಕೆ ಆಗಮಿಸಿ ಯುದ್ಧ ವಿಮಾನವನ್ನು ಏರಿದರು.
ರಾಷ್ಟ್ರಪತಿ ಅವರನ್ನು ಹೊತ್ತೊಯ್ಯುತ್ತಿದ್ದ ರಫೇಲ್ ಜೆಟ್ ಅಂಬಾಲ ನಿಲ್ದಾಣದಿಂದ ಹಾರಾಟ ನಡೆಸುತ್ತಿದ್ದಂತೆ ಮಾಹಿತಿ ಹಾಗೂ ಪ್ರಸಾರ ಸಚಿವಾಲಯವು ನೇರ ಪ್ರಸಾರವನ್ನು ಹಂಚಿಕೊಂಡಿತು.
ಇದನ್ನೂ ಓದಿ:-ಸಿಎಂ ಬದಲಾವಣೆ ಬಗ್ಗೆ ಮಾತನಾಡಿದ್ರೆ ಪಕ್ಷಕ್ಕೆ ದೊಡ್ಡ ಹಾನಿ: ಸಚಿವ ರಾಮಲಿಂಗಾರೆಡ್ಡಿ
ಸಂದೇಶದಲ್ಲಿ ಮಹಿಳೆಯರನ್ನು ಸಬಲೀಕರಣಗೊಳಿಸುವುದು. ಅವರನ್ನು ರಕ್ಷಣಾ ಮತ್ತು ಮಿಲಿಟರಿ ಕ್ಷೇತ್ರದಲ್ಲಿ ಪ್ರೋತ್ಸಾಹಿಸುವುದು ಎಂದು ಮಾಹಿತಿ ಹಾಗೂ ಪ್ರಸಾರ ಸಚಿವಾಲಯದ ಎಕ್ಸ್ ಸಾಮಾಜಿಕ ಮಾಧ್ಯಮ ಹ್ಯಾಂಡಲ್ನ ವ್ಯಾಖ್ಯಾನದಲ್ಲಿ ತಿಳಿಸಿದೆ. ಈ ವೇಳೆ ವಾಯುಪಡೆ ಮುಖ್ಯಸ್ಥ ಎ.ಪಿ.ಸಿಂಗ್ ಸೇರಿದಂತೆ ಇತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.





