ನವದೆಹಲಿ: ವಿಶ್ವ ಬಾಲ ದಿನದ ಅಂಗವಾಗಿ ದೇಶದ ವಿವಿಧ ರಾಜ್ಯಗಳ 17 ಮಕ್ಕಳಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.
ದೆಹಲಿಯ ಭಾರತ ಮಂಟಪ ಸಭಾಂಗಣದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ 10 ಬಾಲಕಿಯರು ಹಾಗೂ 7 ಬಾಲಕರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.
ನಂತರ ಮಾತನಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ಸಮಾಜಕ್ಕೆ ಉತ್ತಮ ಕೊಡುಗೆ ನೀಡುವ ಸಲುವಾಗಿ ಮುಂದಿನ ಪೀಳಿಗೆಗಳು ಸಮಾಜಮುಖಿ ಕಾರ್ಯಕ್ರಮಗಳಲ್ಲಿ ತೊಡಗಿಕೊಳ್ಳಲು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತದೆ. ಈ ಬಾಲ ಪುರಸ್ಕಾರ ಪ್ರಶಸ್ತಿ ಸ್ವೀಕರಿಸುವ ಬಾಲ ಮಕ್ಕಳ ಸಾಧನೆ ಮಹತ್ವದ್ದಾಗಿರುತ್ತದೆ ಎಂದರು.
ಅಸಾಧಾರಣ ಧೈರ್ಯ ಮತ್ತು ಕಲೆ, ಸಂಸ್ಕೃತಿ, ವಿಜ್ಞಾನ ಮತ್ತು ತಂತ್ರಜ್ಞಾನ, ಕ್ರೀಡೆ ಸೇರಿದಂತೆ ಹಲವಾರು ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಕ್ಕಳನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗುತ್ತದೆ ಎಂದು ಸಂತಸ ವ್ಯಕ್ತಪಡಿಸಿದರು.
ಈ ಪ್ರಶಸ್ತಿಯು ಪದಕ, ಪ್ರಮಾಣಪತ್ರ ಹಾಗೂ ಹೊತ್ತಗೆಯನ್ನು ಒಳಗೊಂಡಿರುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯವು ಮಾಹಿತಿ ನೀಡಿದೆ.
ಈ ಮೂಲಕ ಚಿಕ್ಕವಯಸ್ಸಿನಲ್ಲಿಯೇ ಹಲವು ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಮಕ್ಕಳಿಗೆ ಈ ಪ್ರಶಸ್ತಿ ನೀಡಿ ಗೌರವಿಸಿರುವುದು ವಿಶೇಷವೆನಿಸಿದ್ದು, ಮಕ್ಕಳ ಮುಂದಿನ ಶ್ರೇಯೋಭೀವೃದ್ಧಿ ವತಿಯಿಂದ ಈ ಕಾರ್ಯಕ್ರಮ ಜಾರಿಗೆ ತರಲಾಗಿದೆ ಎನ್ನಲಾಗುತ್ತಿದೆ.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…