ದೇಶ- ವಿದೇಶ

ಹೊಸದಿಲ್ಲಿಯ ಕರ್ತವ್ಯಪಥದಲ್ಲಿ ಧ್ವಜಾರೋಹಣ ನೆರವೇರಿಸಿದ ರಾಷ್ಟ್ರಪತಿ ಮುರ್ಮು

ಹೊಸದಿಲ್ಲಿ : ಹೊಸದಿಲ್ಲಿಯ ಕರ್ತವ್ಯಪಥದಲ್ಲಿ ನಡೆಯುತ್ತಿರುವ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಷ್ಟ್ರಧ್ವಜವನ್ನು ಧ್ವಜಾರೋಹಣ ಮಾಡಿ ಸಂಪ್ರದಾಯ ಬದ್ಧವಾಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ರಾಷ್ಟ್ರಪತಿ ಮುರ್ಮು ಅವರು ಸಾಂಪ್ರದಾಯಿಕ ಆಗಮಿಸಿ, ರಾಷ್ಟ್ರಪತಿ ಭವನದ ಭದ್ರತಾ ತುಕಡಿಯೊಂದಿಗೆ ಕರ್ತವ್ಯಪಥಕ್ಕೆ ಆಗಮಿಸಿದರು. ಧ್ವಜಾರೋಹಣದ ನಂತರ ರಾಷ್ಟ್ರಗೀತೆಯೊಂದಿಗೆ ಸೆಲ್ಯೂಟ್ ನೀಡಲಾಯಿತು. ಈ ವರ್ಷದ ಗಣರಾಜ್ಯೋತ್ಸವದ ಥೀಮ್ ವಂದೇ ಮಾತರಂನ 150 ವರ್ಷಗಳ ಸ್ಮರಣೆಯನ್ನು ಕೇಂದ್ರೀಕರಿಸಿದ್ದು, ಆತ್ಮನಿರ್ಭರ ಭಾರತ, ಸಾಂಸ್ಕೃತಿಕ ವೈವಿಧ್ಯತೆ, ಸೇನಾ ಸಾಮರ್ಥ್ಯ ಮತ್ತು ದೇಶಭಕ್ತಿಯನ್ನು ಪ್ರದರ್ಶಿಸಲಾಗುತ್ತಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಹುತಾತ್ಮ ಯೋಧರಿಗೆ ನಮನ ಸಲ್ಲಿಸಿದ ನಂತರ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಈ ಬಾರಿ ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷ ಅಂಟೋನಿಯೋ ಕೋಸ್ಟಾ ಮತ್ತು ಯುರೋಪಿಯನ್ ಕಮಿಷನ್ ಅಧ್ಯಕ್ಷೆ ಉರ್ಸುಲಾ ವಾನ್ ಡೆರ್ ಲೇಯನ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.

ಪರೇಡ್‌ನಲ್ಲಿ ಸೇನಾ, ನೌಕಾಪಡೆ, ವಾಯುಸೇನೆಯ ಘಟಕಗಳು, ವಿವಿಧ ರಾಜ್ಯಗಳ ಟ್ಯಾಬ್ಲೋಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು, ಮೋಟರ್‌ಸೈಕಲ್ ಸ್ಟಂಟ್‌ಗಳು ಮತ್ತು 29 ವಿಮಾನಗಳ ಫ್ಲೈ-ಪಾಸ್ಟ್ ಸೇರಿದಂತೆ ವಿಶೇಷ ಪ್ರದರ್ಶನಗಳು ನಡೆಯುತ್ತಿವೆ. ರಾಫೇಲ್ ಯುದ್ಧ ವಿಮಾನಗಳು, ಹೈಪರ್‌ಸಾನಿಕ್ ಮಿಸೈಲ್‌ಗಳು ಮತ್ತು ಆತ್ಮನಿರ್ಭರ ಭಾರತದ ಉತ್ಪನ್ನಗಳನ್ನು ಒತ್ತಿ ತೋರಿಸಲಾಗುತ್ತಿದೆ.

ದೇಶಾದ್ಯಂತ ಶಾಲೆಗಳು, ಕಚೇರಿಗಳು, ಸಾರ್ವಜನಿಕ ಸ್ಥಳಗಳಲ್ಲಿ ಧ್ವಜಾರೋಹಣ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿವೆ. ದೆಹಲಿಯಲ್ಲಿ 7 ಸುತ್ತಿನ ಭದ್ರತಾ ವ್ಯವಸ್ಥೆ ಜಾರಿಯಲ್ಲಿದೆ.

ವಂದೇ ಮಾತರಂ ಹಾಡಿಗೆ 150 ವರ್ಷಗಳ ಸಂಭ್ರಮ
ಧ್ವಜಾರೋಹಣದ ಬಳಿಕ ವಂದೇ ಮಾತರಂ ಹಾಡಿಗೆ ವಾದ್ಯತಂಡ ಪಥಸಂಚಲನದ ಮೂಲಕ ಗೌರವ ಸೂಚಿಸಿದರು. ಅಲ್ಲದೆ ಆಗಸದಲ್ಲಿ ಯುದ್ಧ ವಿಮಾನಗಳು ದೇಶದ ಧ್ವಜ ರಚನೆ ಮೂಲಕ ಪ್ರದರ್ಶಿಸಲಾಯಿತು.
ಪಶ್ಚಿಮ ಬಂಗಾಳದ ಕವಿ, ಬಂಕಿಮ ಚಂದ್ರ ಚಟರ್ಜಿ ಅವರು ಬರೆದ ವಂದೇ ಮಾತರಂ ಹಾಡು, ಸ್ವಾತಂತ್ರ್ಯ ಚಳುವಳಿಯ ನಂಟನ್ನು, ಹಾಗೂ ಪ್ರಗತಿಯ ದ್ಯೋತಕವಾಗಿರುವ, ರಾಷ್ಟ್ರಗೀತೆಯ ಗೌರವ ಪಡೆದಿರುವ ಹಾಡಾಗಿದ್ದು, ಇದರ 150 ನೇ ಸಂಭ್ರಮಾಚರಣೆಯನ್ನು ವಿಶೇಷವಾಗಿ ಆಚರಿಸಲಾಗುತ್ತಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

3 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

3 hours ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

3 hours ago

ಕಪ್ಪು ವರ್ಣೀಯರ ಕಣ್ಣೀರ ಕಥನ

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…

3 hours ago

ಯಶ್: ‘ಟಾಕ್ಸಿಕ್’ ಬೆನ್ನೇರಿದ ಯಶೋ ಮಾರ್ಗ

ವೈಡ್‌ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…

3 hours ago

ರೈತರ ಪಾಲಿಗೆ ಕಹಿಯಾದ ಸಿಹಿಗುಂಬಳ

ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ  ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…

3 hours ago