ದೇಶ- ವಿದೇಶ

ಲಿಂಗತ್ವ ಅಲ್ಪಸಂಖ್ಯಾತರ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಮುರ್ಮು ಅಂಕಿತ

ನವದೆಹಲಿ : ಹೋರಾಟಗಾರರು ಮತ್ತು ವಿರೋಧ ಪಕ್ಷಗಳ ತೀವ್ರ ವಿರೋಧದ ನಡುವೆಯೂ ಲಿಂಗತ್ವ ಅಲ್ಪಸಂಖ್ಯಾತರ (ಟ್ರಾನ್ಸ್‌ಜೆಂಡರ್) ಹಕ್ಕುಗಳ ರಕ್ಷಣೆ ಕುರಿತ-2019ರ ಕಾಯ್ದೆಗೆ ತಿದ್ದುಪಡಿ ತರುವ 2026ರ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ.

ಮಾರ್ಚ್ 24ರಂದು ಲೋಕಸಭೆಯಲ್ಲಿ ಮಾರ್ಚ್ 25ರಂದು ರಾಜ್ಯಸಭೆಯಲ್ಲಿ ಅಂಗೀಕೃತವಾದ ಈ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ ಹಾಕಿದ್ದಾರೆ.

2019 ಕಾಯ್ದೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ವ್ಯಾಖ್ಯಾನ ಅಸ್ಪಷ್ಟವಾಗಿದ್ದು, ನಿಜವಾದ ಸಂತ್ರಸ್ತರನ್ನು ಗುರುತಿಸಿ ಅವರಿಗೆ ಪ್ರಯೋಜನಗಳನ್ನು ನೀಡುವುದು ಕಷ್ಟವಾಗುತ್ತಿತ್ತು. ಹುಟ್ಟಿನಿಂದ ಅನೇಕ ಕಾರಣಗಳಿಂದ ಸಾಮಾಜಿಕ ಸಮಸ್ಯೆಗಳನ್ನು ಎದುರಿಸುತ್ತಿರುವವರ ಹಕ್ಕುಗಳನ್ನು ರಕ್ಷಿಸುವುದು ಈ ತಿದ್ದುಪಡಿಯ ಮುಖ್ಯ ಉದ್ದೇಶ ಎಂದು ಕೇಂದ್ರ ಸರ್ಕಾರ ಪ್ರತಿಪಾದಿಸಿತ್ತು.

ಲೆಸ್ಬಿಯನ್ನರು ಮತ್ತು ಸಲಿಂಗಿಗಳನ್ನು ಕಾಯ್ದೆಯ ವ್ಯಾಪ್ತಿಯಿಂದ ಹೊರಗಿಟ್ಟಿರುವುದು ಸರಿಯಲ್ಲ ಎಂದು ಆರೋಪಿಸಿ ಲಿಂಗತ್ವ ಅಲ್ಪಸಂಖ್ಯಾತರ ತಿದ್ದುಪಡಿ ಮಸೂದೆಯನ್ನು ವಿರೋಧ ಪಕ್ಷಗಳ ಸಂಸದರು ಟೀಕಿಸಿದ್ದರು.

ಆಂದೋಲನ ಡೆಸ್ಕ್

Recent Posts

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆಯ ವಿವರ

ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…

8 hours ago

ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ

ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…

9 hours ago

ತಮಿಳುನಾಡಿಗೆ ನಿತ್ಯ 9 ಸಾವಿರ ಕ್ಯೂಸೆಕ್ ನೀರು ಹರಿಸಿ – CWRC ಶಿಫಾರಸು ಎತ್ತಿಹಿಡಿದ CWMA

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…

9 hours ago

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

11 hours ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

12 hours ago

ಓದುಗರ ಪತ್ರ: ಪ್ರೇಕ್ಷಕರ ಆಸಕ್ತಿಗೆ ತಕ್ಕಂತೆ ಕಾರ್ಯಕ್ರಮ ಆಯೋಜಿಸಿ

ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…

12 hours ago