Rajya Sabha
ನವದೆಹಲಿ: ಹಿಂಸಾಚಾರ ಪೀಡಿತ ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಇನ್ನೂ 6 ತಿಂಗಳ ಕಾಲ ವಿಸ್ತರಿಸಲು ರಾಜ್ಯಸಭೆ ಅನುಮೋದನೆ ನೀಡಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯಸಭೆಯಲ್ಲಿ ಮಂಡಿಸಿದ ಪ್ರಸ್ತಾವನೆಯನ್ನ ಸದನವು ಅಂಗೀಕರಿಸಿದೆ.
ಆಗಸ್ಟ್ 13ರಿಂದ ಅನ್ವಯವಾಗುವಂತೆ 6 ತಿಂಗಳ ಕಾಲ ರಾಷ್ಟ್ರಪತಿ ಆಡಳಿತ ವಿಸ್ತರಣೆಯಾಗಲಿದೆ. ಮಣಿಪುರಕ್ಕೆ ಸಂಬಂಧಿಸಿದಂತೆ ಸಂವಿಧಾನದ 356ನೇ ವಿಧಿ ಅನ್ವಯ 2025ರ ಫೆಬ್ರವರಿ 13ರಂದು ರಾಷ್ಟ್ರಪತಿಗಳು ನೀಡಿದ ಸುಗ್ರೀವಾಜ್ಞೆಯನ್ನ 2025ರ ಆಗಸ್ಟ್ 13ರಿಂದ ಆರು ತಿಂಗಳ ಕಾಲ ಮುಂದುವರಿಸಲು ಸದನ ಒಪ್ಪಿಗೆ ನೀಡಬೇಕಿದೆ ಎಂದು ಸದನದಲ್ಲಿ ಮಂಡಿಸಲಾದ ನೋಟಿಸ್ನಲ್ಲಿ ತಿಳಿಸಲಾಗಿದೆ.
2023ರ ಹೈಕೋರ್ಟ್ ಆದೇಶದ ವಿರುದ್ಧವಾಗಿ ಬುಡಕಟ್ಟು ಸಮುದಾಯದ ಮೆರವಣಿಗೆಯೊಂದನ್ನು ಆಯೋಜಿಸಲಾಗಿತ್ತು ಈ ವೇಳೆ ಎರಡು ಸಮುದಾಯಗಳ ನಡುವೆ ಹಿಂಸಾಚಾರ ಏರ್ಪಟ್ಟಿತು. ಇಲ್ಲಿಂದ ಸತತವಾಗಿ ಜನಾಂಗೀಯ ಹಿಂಸಾಚಾರ ಶುರುವಾಗಿದೆ.
ಪರಿಸ್ಥಿತಿ ನಿಯಂತ್ರಿಸುವಲ್ಲಿ ವಿಫಲವಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಬಿರೇನ್ ಸಿಂಗ್ ರಾಜೀನಾಮೆ ನೀಡಿದ್ದರು. ಇದಾದ ಕೆಲವೇ ದಿನಗಳಲ್ಲಿ ಅಂದರೆ, ಈ ವರ್ಷ ಫೆಬ್ರವರಿ 13 ರಂದು 6 ತಿಂಗಳ ಕಾಲ ರಾಷ್ಟ್ರಪತಿ ಆಳ್ವಿಕೆ ಹೇರಲಾಯಿತು. ರಾಜ್ಯದಲ್ಲಿ 1951 ರಿಂದ ಇದು 11ನೇ ಬಾರಿಗೆ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗಿದೆ.
ನವದೆಹಲಿ: ದೇಶದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ. ಭಾರತವು ಕಚ್ಚಾ ತೈಲಕ್ಕಾಗಿ ಸಾಕಷ್ಟು ಸಂಗ್ರಹಣಾ ಸೌಲಭ್ಯಗಳು ಮತ್ತು ವಿಶ್ವಾಸಾರ್ಹ ಪೂರೈಕೆ…
ಮೈಸೂರು: ರಸ್ತೆ ಅಪಘಾತದಿಂದ ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ…
ಬೆಂಗಳೂರು: ಮೈಸೂರು ನಗರ ಸೇರಿದಂತೆ ರಾಜ್ಯದಲ್ಲಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಹೆಚ್ಚಿನ ಅನುದಾನ ಒದಗಿಸಬೇಕೆಂದು ಎಂಎಲ್ಸಿ ಕೆ.ಶಿವಕುಮಾರ್ ಒತ್ತಾಯಿಸಿದ್ದಾರೆ. ಈ…
ಬೆಂಗಳೂರು: ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಮಾಡಿ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ತಿಮರೋಡಿ ಅವರನ್ನು ದಕ್ಷಿಣ…
ನವದೆಹಲಿ: ಇರಾನ್-ಇಸ್ರೇಲ್ ಸಂಘರ್ಷ ಮುಂದುವರಿದಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ನಾಳೆ ಸರ್ವ ಪಕ್ಷಗಳ ಸಭೆ ಕರೆದಿದ್ದು, ವಿರೋಧ ಪಕ್ಷಗಳಿಗೆ ಪರಿಸ್ಥಿತಿ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಶಿವಪುರ ಸಮೀಪದ ಕಲ್ಲುಕಟ್ಟೆ ಬಳಿಯ ಜಮೀನಿನ ತೋಟದ ಮನೆಯ ಬಳಿ…