ದೇಶ- ವಿದೇಶ

ವರ್ಷದ ಕೊನೆಯ ಮನ್‌ ಕಿ ಬಾತ್‌ನಲ್ಲಿ 2025ರ ಭಾರತದ ಸಾಧನೆ ಸ್ಮರಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಪ್ರಧಾನಿ ಮೋದಿ ಅವರು ಇಂದು ತಮ್ಮ 129ನೇ ಮನ್‌ ಕಿ ಬಾತ್‌ ಆವೃತ್ತಿಯನ್ನು ಉದ್ದೇಶಿಸಿ ಮಾತನಾಡಿದರು.

2025ರಲ್ಲಿ ಭಾರತದ ಹೆಮ್ಮೆಯ ಕ್ಷಣಗಳನ್ನು ನೆನಪಿಸಿಕೊಂಡ ಅವರು, ಆಪರೇಷನ್‌ ಸಿಂಧೂರ್‌ ಸಮಯದಲ್ಲಿ ಭಾರತವು ಬಲವಾದ ಪ್ರಭಾವ ಬೀರಿತು. ಇದು ದೇಶದ ಭದ್ರತೆಗೆ ಬದ್ಧತೆಯ ಪ್ರದರ್ಶನವಾಗಿ ಕಾರ್ಯನಿರ್ವಹಿಸಿತು. ಪಾಕಿಸ್ತಾನದ ದುಸ್ಸಾಹಸದ ವಿರುದ್ಧದ ಕಾರ್ಯಾಚರಣೆಯು ಭಾರತ ಭದ್ರತೆಯ ಬಗ್ಗೆ ರಾಜಿ ಮಾಡಿಕೊಳ್ಳುವುದಿಲ್ಲ ಎಂಬ ಸಂದೇಶವನ್ನು ಜಗತ್ತಿಗೆ ನೀಡಿದೆ ಎಂದು ಹೇಳಿದರು.

2025ರ ಕ್ರೀಡೆಯು ದೃಷ್ಟಿಯಿಂದಲೂ ಸ್ಮರಣೀಯ ವರ್ಷವಾಗಿತ್ತು. ನಮ್ಮ ಪುರುಷರ ಕ್ರಿಕೆಟ್‌ ತಂಡ ಐಸಿಸಿ ಚಾಂಪಿಯನ್ಸ್‌ ಟ್ರೋಫಿಯನ್ನು ಗೆದ್ದಿತು. ಮಹಿಳಾ ಕ್ರಿಕೆಟ್‌ ತಂಡ ಐಸಿಸಿ ಚಾಂಪಿಯನ್‌ ಟ್ರೋಫಿಯನ್ನು ಗೆದ್ದಿತು. ಭಾರತದ ಹೆಣ್ಣು ಮಕ್ಕಳು ಮಹಿಳಾ ಅಂಧರ ಟಿ.20 ವಿಶ್ವಕಪ್‌ ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸಿದರು.

ಇದನ್ನು ಓದಿ: ಜಲಾಂತರಗಾಮಿ ನೌಕೆಯಲ್ಲಿ ಪ್ರಯಾಣಿಸಿ ಹೊಸ ದಾಖಲೆ ಬರೆದ ರಾಷ್ಟ್ರಪತಿ ದ್ರೌಪದಿ ಮುರ್ಮು

ಭಾರತವು ವಿಜ್ಞಾನ ಮತ್ತು ಬಾಹ್ಯಾಕಾಶ ಕ್ಷೇತ್ರದಲ್ಲೂ ದೈತ್ಯ ಹೆಜ್ಜೆಗಳನ್ನು ಇಟ್ಟಿತು. ಶುಭಾಂಶು ಶುಕ್ಲಾ ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣವನ್ನು ತಲುಪಿದ ಮೊದಲ ಭಾರತೀಯರಾದರು. ಪರಿಸರ ಸಂರಕ್ಷಣೆ ಮತ್ತು ವನ್ಯಜೀವಿ ಸಂರಕ್ಷಣೆಗೆ ಸಂಬಂಧಿಸಿದ ಹಲವಾರು ಉಪಕ್ರಮಗಳು 2025 ಅನ್ನು ಗುರುತಿಸಿದೆ. ಭಾರತದಲ್ಲಿ ಚಿರತೆಗಳ ಸಂಖ್ಯೆ ಈಗ 30 ದಾಟಿದೆ ಎಂದು ಸ್ಮರಿಸಿದ್ದಾರೆ.

2025ರಲ್ಲಿ ನಂಬಿಕೆ, ಸಂಸ್ಕೃತಿ ಮತ್ತು ಭಾರತದ ವಿಶಿಷ್ಟ ಪರಂಪರೆ ಎಲ್ಲವನ್ನೂ ಒಟ್ಟಿಗೆ ನೋಡಲಾಯಿತು. ವರ್ಷದ ಆರಂಭದಲ್ಲಿ ಪ್ರಯಾಗ್‌ರಾಜ್‌ ಮಹಾಕುಂಭದ ಆಯೋಜನೆಯು ಇಡೀ ಜಗತ್ತನ್ನು ಬೆರಗುಗೊಳಿಸಿತು. ವರ್ಷದ ಕೊನೆಯಲ್ಲಿ, ಅಯೋಧ್ಯೆಯ ರಾಮ ಮಂದಿರದಲ್ಲಿ ಧ್ವಜಾರೋಹಣ ಸಮಾರಂಭವು ಪ್ರತಿಯೊಬ್ಬ ಭಾರತೀಯನಲ್ಲೂ ಹೆಮ್ಮೆಯನ್ನು ತುಂಬಿತು ಎಂದು ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ವಿಧಾನಪರಿಷತ್‌ನ ಏಳು ಸ್ಥಾನಗಳಿಗೆ ಚುನಾವಣೆ ದಿನಾಂಕ ಘೋಷಣೆ

ನವದೆಹಲಿ: ಕರ್ನಾಟಕ ಹಾಗೂ ಬಿಹಾರ ವಿಧಾನಪರಿಷತ್‌ನ ದ್ವೈವಾರ್ಷಿಕ ಚುನಾವಣೆಗೆ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ. ಕರ್ನಾಟಕದ ಏಳು ಸ್ಥಾನಗಳಿಗೆ ದ್ವೈವಾರ್ಷಿಕ…

25 mins ago

ಮೇಕೆದಾಟು ಯೋಜನೆ ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲ: ಗಣಿಗ ರವಿಕುಮಾರ್‌

ಮಂಡ್ಯ: ವಿಜಯ್‌ ರೀತಿ ತಮಿಳುನಾಡಿನಲ್ಲಿ ನೂರು ಮಂದಿ ಮುಖ್ಯಮಂತ್ರಿಯಾದರೂ ಸಹ ನಾವು ಮೇಕೆದಾಟು ಡ್ಯಾಂ ಕಟ್ಟೋದನ್ನು ತಡೆಯಲು ಸಾಧ್ಯವಿಲ್ಲ ಎಂದು…

1 hour ago

ಓದುಗರ ಪತ್ರ: ಅಸಂಘಟಿತ ಕಾರ್ಮಿಕರಿಗೆ ಜೀವನ ಭದ್ರತೆ ಕಲ್ಪಿಸಿ

ದೇಶದ ಸಾವಿರಾರು ಮಂದಿ ಅಸಂಘಟಿತ ಕಾರ್ಮಿಕರು ಹೊಟ್ಟೆಪಾಡಿಗಾಗಿ ಮಾಡುವ ಉದ್ಯೋಗವೇ ಅವರ ಜೀವಕ್ಕೆ ಮುಳುವಾಗುತ್ತಿದೆ. ಭಾನುವಾರ ಉತ್ತರ ಕನ್ನಡ ಜಿಲ್ಲೆಯ…

7 hours ago

ಓದುಗರ ಪತ್ರ: ರೌಂಡ್ ಕ್ಯಾಂಟೀನ್ ಶೀಘ್ರ ಪುನರಾರಂಭವಾಗಲಿ

ಮೈಸೂರಿನ ಮಾನಸ ಗಂಗೋತ್ರಿಯ ರೌಂಡ್ ಕ್ಯಾಂಟೀನ್ ಕಳೆದ ೫೦ ವರ್ಷಗಳಿಂದ ವಿದ್ಯಾರ್ಥಿಗಳನ್ನು, ಬೋಧಕ -ಬೋಧಕೇತರ ಸಿಬ್ಬಂದಿಗಳನ್ನು ಭಾವನಾತ್ಮಕವಾಗಿ ಬೆಸೆದುಕೊಂಡಿದೆ. ಇದು…

7 hours ago

ಓದುಗರ ಪತ್ರ: ದೇವನೂರರ ಸಲಹೆಗಳು ಅನುಷ್ಠಾನಗೊಳ್ಳಲಿ

ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಕೆ.ಪಿ.ಎಸ್. ಶಾಲೆಗಳ ರೂಪರೇಷೆ ಹಾಗೂ ಸರ್ಕಾರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಅಗತ್ಯವಿರುವ…

7 hours ago

ಓದುಗರ ಪತ್ರ: ಮಹಿಳೆಯರಿಗೂ ಪ್ರಾತಿನಿಧ್ಯ ದೊರಕಲಿ

ಇತ್ತೀಚಿನ ದಿನಗಳಲ್ಲಿ ನಡೆಯುವ ಸಾರ್ವಜನಿಕ ಸಭೆ ಸಮಾರಂಭಗಳು, ವಿಶ್ವವಿದ್ಯಾನಿಲಯ, ಶಾಲಾ ಕಾಲೇಜು ಮೊದಲಾದ ಕಡೆ ನಡೆಯುವ ಚರ್ಚಾಗೋಷ್ಠಿ , ವಿಚಾರಸಂಕಿರಣಗಳಲ್ಲಿ…

7 hours ago