modi china entry
ಚೀನಾ : ಪ್ರಧಾನಿ ನರೇಂದ್ರ ಮೋದಿ ಅವರು ಚೀನಾದ ತಿಯಾಂಜಿನ್ಗೆ ಶನಿವಾರ ಬಂದಿಳಿದ್ದಾರೆ. ಮೋದಿ ಅವರಿಗೆ ತಿಯಾಂಜಿನ್ ಏರ್ಪೋರ್ಟ್ನಲ್ಲಿ ಅದ್ಧೂರಿ ಸ್ವಾಗತ ಸಿಕ್ಕಿದೆ. ಚೀನಾ ಸಚಿವ ಲೀ ಲೆಚೆಂಗ್ ಅವರು ಪ್ರಧಾನಮಂತ್ರಿ ಮೋದಿ ಅವರನ್ನು ಬರಮಾಡಿಕೊಂಡಿದ್ದಾರೆ.
ಇನ್ನು ತಿಯಾಂಜಿನ್ನಲ್ಲಿ ಎಸ್ಸಿಒ ಸಭೆಯಲ್ಲಿ ಪ್ರಧಾನಿ ಮೋದಿ ಅವರು ಭಾಗವಹಿಸಲಿದ್ದಾರೆ. ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರನ್ನು ಕೂಡ ಮೋದಿ ಅವರು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಲಿದ್ದಾರೆ. ನಾಳೆ ಬೆಳಗ್ಗೆ 9.30ಕ್ಕೆ ಕ್ಸಿ ಜಿನ್ಪಿಂಗ್ ಮಾತನಾಡಲಿದ್ದಾರೆ ಎಂದು ಹೇಳಲಾಗಿದೆ. ಇದರ ಜತೆಗೆ ರಷ್ಯಾ ಅಧ್ಯಕ್ಷ ಪುಟಿನ್ರನ್ನು ಸಹ ಭೇಟಿಯಾಗಲಿದ್ದಾರೆ.
ಪ್ರಧಾನಿ ಮೋದಿ ಅವರು 2018ರ ನಂತರ ಅಂದರೆ ಏಳು ವರ್ಷಗಳ ಬಳಿಕ ಮೊದಲ ಬಾರಿಗೆ ಚೀನಾ ಭೇಟಿ ನೀಡಿದ್ದಾರೆ. ಗಲ್ವಾನ್ ಕಣಿವೆಯಲ್ಲಿನ ಘರ್ಷಣೆಯ ನಂತರ 2020 ರಲ್ಲಿ ಹದಗೆಟ್ಟಿದ್ದ ಭಾರತ-ಚೀನಾ ಸಂಬಂಧ ಮತ್ತೆ ಸುಧಾರಿಸುವ ಸಾಧ್ಯತೆಗಳು ಇದೆ ಎಂದು ಹೇಳಲಾಗಿದೆ. ಈ ಮೂಲಕ ಭಾರತ ಮಹತ್ವದ ಹೆಜ್ಜೆಯನ್ನು ಇಟ್ಟಿದೆ.
ಇನ್ನು ಚೀನಾ ಇದೆ ಮೊದಲು ಬಾರಿ ಒಂದು ದೇಶದ ಪ್ರಧಾನಿಗೆ ರೆಡ್ ಕಾರ್ಪೆಟ್ ಮೂಲಕ ಸ್ವಾಗತಿಸುವುದು ಅಪರೂಪವಾಗಿದೆ. ಸುಮಾರು ಏಳು ವರ್ಷಗಳ ನಂತರ ಪ್ರಧಾನಿ ಮೋದಿ ಚೀನಾಕ್ಕೆ ಭೇಟಿ ನೀಡಿರುವುದು ವಿಶ್ವದ ಗಮನ ಸೆಳೆದಿದೆ.
ಇನ್ನು ಅಮೆರಿಕ ಮತ್ತು ಭಾರತದ ನಡುವಿನ ಸಂಬಂಧ ಈಗಾಗಲೇ ಹದ್ದಗೆಟ್ಟಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವ್ಯಾಪರ ಯುದ್ಧವನ್ನು ಶುರು ಮಾಡಿದ್ದು, ಚೀನಾದ ಈ ಶೃಂಗಸಭೆಯಲ್ಲಿ 50% ಸುಂಕವನ್ನು ವಿಧಿಸುವುದರೊಂದಿಗೆ, ಪ್ರಾದೇಶಿಕ ಭದ್ರತಾ ಬಗ್ಗೆಯೂ ಚರ್ಚೆಯಾಗಲಿದೆ ಎಂದು ಹೇಳಲಾಗಿದೆ. ರಷ್ಯಾದ ತೈಲದ ಎರಡು ದೊಡ್ಡ ಗ್ರಾಹಕರಾದ ಚೀನಾ ಮತ್ತು ಭಾರತದೊಂದಿಗೆ ವೇದಿಕೆ ಹಂಚಿಕೊಳ್ಳಲು ಈ ಶೃಂಗಸಭೆಯು ಪುಟಿನ್ಗೆ ಒಂದು ಅವಕಾಶವಾಗಲಿದೆ. ರಷ್ಯಾದ ಇಂಧನ ಮತ್ತು ರಕ್ಷಣಾ ಉತ್ಪನ್ನಗಳನ್ನು ಖರೀದಿಸಿದ್ದಕ್ಕಾಗಿ ಟ್ರಂಪ್ ಭಾರತದ ಮೇಲೆ 25% ಹೆಚ್ಚುವರಿ ಸುಂಕ ವಿಧಿಸಿರುವುದು ಭಾರತಕ್ಕೆ ದೊಡ್ಡ ಹೊರೆಯಾಗಿದೆ. ಆದರೆ ಚೀನಾದ ಮೇಲೆ ಅಂತಹ ಯಾವುದೇ ಸುಂಕವನ್ನು ವಿಧಿಸಲಾಗಿಲ್ಲ. ಭಾರತ ರಷ್ಯಾದ ತೈಲ ಖರೀದಿಯನ್ನು ನಿಲ್ಲಿಸುವವರೆಗೆ ಈ ಸುಂಕ ಹೊಡೆತ ತಪ್ಪಿದಲ್ಲ ಎಂದು ಹೇಳಲಾಗುತ್ತಿದೆ.
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್ಗಳ ರಜಾ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…